<p><strong>ನವದೆಹಲಿ:</strong> ಸಂಸತ್ ಮೇಲಿನ ದಾಳಿ ಸೇರಿದಂತೆ ಭಾರತದಲ್ಲಿ ನಡೆದ ಹಲವು ಭಯೋತ್ಪಾದಕ ದಾಳಿಗಳಲ್ಲಿ ಬೇಕಾಗಿದ್ದ ಜೈಷ್-ಎ-ಮೊಹಮ್ಮದ್ (ಜೆಇಎಂ) ಸಂಘಟನೆಯ ಉಗ್ರ ಅಬ್ದುಲ್ ರವೂಫ್ ಅಜರ್, ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆಯಲ್ಲಿ ಹತನಾಗಿದ್ದಾನೆ ಎಂದು ಬಿಜೆಪಿ ಗುರುವಾರ ಹೇಳಿದೆ.</p><p>ರವೂಫ್, ಜೆಇಎಂ ಸ್ಥಾಪಕ ಮೌಲಾನಾ ಮಸೂದ್ ಅಜರ್ನ ಸಹೋದರ ಎಂದು ವರದಿಯಾಗಿದೆ. ಅಜರ್ನ ಅನುಪಸ್ಥಿತಿಯಲ್ಲಿ ನಿಷೇಧಿತ ಸಂಘಟನೆಯ ನೇತೃತ್ವ ವಹಿಸಿದ್ದ ಎನ್ನಲಾಗಿದೆ.</p><p>‘ಮೋಸ್ಟ್ ವಾಂಟೆಡ್’ ಭಯೋತ್ಪಾದಕ ಅಬ್ದುಲ್ ರವೂಫ್ ಅಜರ್ ಭಾರತೀಯ ಸೇನೆಯ ದಾಳಿಯಲ್ಲಿ ಕೊಲ್ಲಲ್ಪಟ್ಟಿದ್ದಾನೆ ಎಂದು ಬಿಜೆಪಿ ಎಕ್ಸ್ನಲ್ಲಿ ಪೋಸ್ಟ್ ಮಾಡಿದೆ. ಬಹಾವಲ್ಪುರದಲ್ಲಿರುವ ಜೈಷ್-ಎ-ಮೊಹಮ್ಮದ್ ಕೇಂದ್ರ ಕಚೇರಿಯ ಮೇಲೆ ನಡೆದ ದಾಳಿಯಲ್ಲಿ ಬಲಿಯಾದ ಮಸೂದ್ ಅಜರ್ನ ಕುಟುಂಬದ 10 ಸದಸ್ಯರಲ್ಲಿ ಈತನೂ ಒಬ್ಬ ಎಂದಿದೆ. </p><p>2001ರಲ್ಲಿ ಸಂಸತ್ತಿನ ಮೇಲೆ ನಡೆದ ಭಯೋತ್ಪಾದಕ ದಾಳಿ ಅಲ್ಲದೆ, ಕಂದಹಾರ್ ವಿಮಾನ ಅಪಹರಣ ಮತ್ತು ಪಠಾಣ್ಕೋಟ್ ಭಯೋತ್ಪಾದಕ ದಾಳಿಯಲ್ಲಿಯೂ ರವೂಫ್ ಭಾಗಿಯಾಗಿದ್ದ. </p><p>ಕುಟುಂಬದ 10 ಸದಸ್ಯರು ಮತ್ತು ನಾಲ್ವರು ಆಪ್ತರು ಸೇರಿದಂತೆ 14 ಮಂದಿ ಸತ್ತಿರುವುದನ್ನು ಮಸೂದ್ ಅಜರ್ ಕೂಡ ಖಚಿತಪಡಿಸಿದ್ದ.</p>.Operation Sindoor: ಜೈಶ್ ಉಗ್ರ ಮಸೂದ್ ಕುಟುಂಬದ 10 ಮಂದಿ ಸೇರಿ 14 ಜನರ ಸಾವು.Operation Sindoor | 100 ಉಗ್ರರು ಹತ, ಕಾರ್ಯಾಚರಣೆ ಜಾರಿಯಲ್ಲಿದೆ: ರಾಜನಾಥ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಸಂಸತ್ ಮೇಲಿನ ದಾಳಿ ಸೇರಿದಂತೆ ಭಾರತದಲ್ಲಿ ನಡೆದ ಹಲವು ಭಯೋತ್ಪಾದಕ ದಾಳಿಗಳಲ್ಲಿ ಬೇಕಾಗಿದ್ದ ಜೈಷ್-ಎ-ಮೊಹಮ್ಮದ್ (ಜೆಇಎಂ) ಸಂಘಟನೆಯ ಉಗ್ರ ಅಬ್ದುಲ್ ರವೂಫ್ ಅಜರ್, ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆಯಲ್ಲಿ ಹತನಾಗಿದ್ದಾನೆ ಎಂದು ಬಿಜೆಪಿ ಗುರುವಾರ ಹೇಳಿದೆ.</p><p>ರವೂಫ್, ಜೆಇಎಂ ಸ್ಥಾಪಕ ಮೌಲಾನಾ ಮಸೂದ್ ಅಜರ್ನ ಸಹೋದರ ಎಂದು ವರದಿಯಾಗಿದೆ. ಅಜರ್ನ ಅನುಪಸ್ಥಿತಿಯಲ್ಲಿ ನಿಷೇಧಿತ ಸಂಘಟನೆಯ ನೇತೃತ್ವ ವಹಿಸಿದ್ದ ಎನ್ನಲಾಗಿದೆ.</p><p>‘ಮೋಸ್ಟ್ ವಾಂಟೆಡ್’ ಭಯೋತ್ಪಾದಕ ಅಬ್ದುಲ್ ರವೂಫ್ ಅಜರ್ ಭಾರತೀಯ ಸೇನೆಯ ದಾಳಿಯಲ್ಲಿ ಕೊಲ್ಲಲ್ಪಟ್ಟಿದ್ದಾನೆ ಎಂದು ಬಿಜೆಪಿ ಎಕ್ಸ್ನಲ್ಲಿ ಪೋಸ್ಟ್ ಮಾಡಿದೆ. ಬಹಾವಲ್ಪುರದಲ್ಲಿರುವ ಜೈಷ್-ಎ-ಮೊಹಮ್ಮದ್ ಕೇಂದ್ರ ಕಚೇರಿಯ ಮೇಲೆ ನಡೆದ ದಾಳಿಯಲ್ಲಿ ಬಲಿಯಾದ ಮಸೂದ್ ಅಜರ್ನ ಕುಟುಂಬದ 10 ಸದಸ್ಯರಲ್ಲಿ ಈತನೂ ಒಬ್ಬ ಎಂದಿದೆ. </p><p>2001ರಲ್ಲಿ ಸಂಸತ್ತಿನ ಮೇಲೆ ನಡೆದ ಭಯೋತ್ಪಾದಕ ದಾಳಿ ಅಲ್ಲದೆ, ಕಂದಹಾರ್ ವಿಮಾನ ಅಪಹರಣ ಮತ್ತು ಪಠಾಣ್ಕೋಟ್ ಭಯೋತ್ಪಾದಕ ದಾಳಿಯಲ್ಲಿಯೂ ರವೂಫ್ ಭಾಗಿಯಾಗಿದ್ದ. </p><p>ಕುಟುಂಬದ 10 ಸದಸ್ಯರು ಮತ್ತು ನಾಲ್ವರು ಆಪ್ತರು ಸೇರಿದಂತೆ 14 ಮಂದಿ ಸತ್ತಿರುವುದನ್ನು ಮಸೂದ್ ಅಜರ್ ಕೂಡ ಖಚಿತಪಡಿಸಿದ್ದ.</p>.Operation Sindoor: ಜೈಶ್ ಉಗ್ರ ಮಸೂದ್ ಕುಟುಂಬದ 10 ಮಂದಿ ಸೇರಿ 14 ಜನರ ಸಾವು.Operation Sindoor | 100 ಉಗ್ರರು ಹತ, ಕಾರ್ಯಾಚರಣೆ ಜಾರಿಯಲ್ಲಿದೆ: ರಾಜನಾಥ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>