<p><strong>ಶ್ರೀನಗರ:</strong> ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್ಒಸಿ) ಸತತ ಐದನೇ ದಿನವೂ ಪಾಕಿಸ್ತಾನ ಕದನ ವಿರಾಮ ನಿಯಮ ಉಲ್ಲಂಘಿಸಿದೆ ಎಂದು ಅಧಿಕಾರಿಗಳು ಇಂದು (ಮಂಗಳವಾರ) ತಿಳಿಸಿದ್ದಾರೆ. </p><p>ಕಳೆದ ವಾರ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತ ಹಾಗೂ ಪಾಕಿಸ್ತಾನ ನಡುವೆ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. </p><p>ಈ ನಡುವೆ ಪಾಕಿಸ್ತಾನ ಎಲ್ಒಸಿ ಉದ್ಧಕ್ಕೂ ಅಪ್ರಚೋದಿತ ಗುಂಡಿನ ದಾಳಿ ಮುಂದುವರಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p><p>ಜಮ್ಮು ಜಿಲ್ಲೆಯ ಅಖ್ನೂರ್ ವಲಯದ ಗಡಿಯಲ್ಲೂ ಪಾಕಿಸ್ತಾನ ಕದನ ವಿರಾಮ ನಿಯಮ ಉಲ್ಲಂಘಿಸಿದೆ. ಪಾಕ್ಗೆ ಭಾರತ ತಕ್ಕ ಪ್ರತ್ಯುತ್ತರ ನೀಡಿದೆ ಎಂದು ಅವರು ತಿಳಿಸಿದ್ದಾರೆ. </p><p>ತಕ್ಷಣಕ್ಕೆ ಯಾವುದೇ ಸಾವು-ನೋವುಗಳ ಬಗ್ಗೆ ವರದಿಯಾಗಿಲ್ಲ. </p><p>ಕುಪ್ವಾರ, ಬಾರಾಮುಲ್ಲಾ ಜಿಲ್ಲೆಗಳ ಗಡಿ ನಿಯಂತ್ರಣ ರೇಖೆಯಲ್ಲಿ ಅಪ್ರಚೋದಿತ ದಾಳಿ ನಡೆಸಿದ್ದ ಪಾಕ್, ಪೂಂಚ್ ಹಾಗೂ ಅಖ್ನೂರ್ ಸೆಕ್ಟರ್ನಲ್ಲೂ ಕದನ ವಿರಾಮ ಉಲ್ಲಂಘಿಸಿದೆ ಎಂದು ಅವರು ತಿಳಿಸಿದ್ದಾರೆ. </p> .ಗಡಿಯಲ್ಲಿ ಸತತ 4ನೇ ದಿನವೂ ಪಾಕ್ನಿಂದ ಕದನ ವಿರಾಮ ಉಲ್ಲಂಘನೆ, ಭಾರತ ಪ್ರತ್ಯುತ್ತರ.ಗಡಿಯಲ್ಲಿ ಪಾಕ್ನಿಂದ ಸತತ ಮೂರನೇ ದಿನವೂ ಕದನ ವಿರಾಮ ಉಲ್ಲಂಘನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ:</strong> ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್ಒಸಿ) ಸತತ ಐದನೇ ದಿನವೂ ಪಾಕಿಸ್ತಾನ ಕದನ ವಿರಾಮ ನಿಯಮ ಉಲ್ಲಂಘಿಸಿದೆ ಎಂದು ಅಧಿಕಾರಿಗಳು ಇಂದು (ಮಂಗಳವಾರ) ತಿಳಿಸಿದ್ದಾರೆ. </p><p>ಕಳೆದ ವಾರ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತ ಹಾಗೂ ಪಾಕಿಸ್ತಾನ ನಡುವೆ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. </p><p>ಈ ನಡುವೆ ಪಾಕಿಸ್ತಾನ ಎಲ್ಒಸಿ ಉದ್ಧಕ್ಕೂ ಅಪ್ರಚೋದಿತ ಗುಂಡಿನ ದಾಳಿ ಮುಂದುವರಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p><p>ಜಮ್ಮು ಜಿಲ್ಲೆಯ ಅಖ್ನೂರ್ ವಲಯದ ಗಡಿಯಲ್ಲೂ ಪಾಕಿಸ್ತಾನ ಕದನ ವಿರಾಮ ನಿಯಮ ಉಲ್ಲಂಘಿಸಿದೆ. ಪಾಕ್ಗೆ ಭಾರತ ತಕ್ಕ ಪ್ರತ್ಯುತ್ತರ ನೀಡಿದೆ ಎಂದು ಅವರು ತಿಳಿಸಿದ್ದಾರೆ. </p><p>ತಕ್ಷಣಕ್ಕೆ ಯಾವುದೇ ಸಾವು-ನೋವುಗಳ ಬಗ್ಗೆ ವರದಿಯಾಗಿಲ್ಲ. </p><p>ಕುಪ್ವಾರ, ಬಾರಾಮುಲ್ಲಾ ಜಿಲ್ಲೆಗಳ ಗಡಿ ನಿಯಂತ್ರಣ ರೇಖೆಯಲ್ಲಿ ಅಪ್ರಚೋದಿತ ದಾಳಿ ನಡೆಸಿದ್ದ ಪಾಕ್, ಪೂಂಚ್ ಹಾಗೂ ಅಖ್ನೂರ್ ಸೆಕ್ಟರ್ನಲ್ಲೂ ಕದನ ವಿರಾಮ ಉಲ್ಲಂಘಿಸಿದೆ ಎಂದು ಅವರು ತಿಳಿಸಿದ್ದಾರೆ. </p> .ಗಡಿಯಲ್ಲಿ ಸತತ 4ನೇ ದಿನವೂ ಪಾಕ್ನಿಂದ ಕದನ ವಿರಾಮ ಉಲ್ಲಂಘನೆ, ಭಾರತ ಪ್ರತ್ಯುತ್ತರ.ಗಡಿಯಲ್ಲಿ ಪಾಕ್ನಿಂದ ಸತತ ಮೂರನೇ ದಿನವೂ ಕದನ ವಿರಾಮ ಉಲ್ಲಂಘನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>