<p><strong>ಕಾನ್ಪುರ:</strong> 'ಹಣ ಅಥವಾ ಉದ್ಯೋಗ ಬೇಡ. ನನ್ನ ಪತಿ ಪತಿ ಶುಭಂ ದ್ವಿವೇದಿಗೆ ಹುತಾತ್ಮ ಸ್ಥಾನಮಾನ ನೀಡಬೇಕು' ಎಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಪ್ರವಾಸಿಗರ ಮೇಲಿನ ಭಯೋತ್ಪಾದಕರ ಉಗ್ರರ ದಾಳಿಯಲ್ಲಿ ಮೃತಪಟ್ಟಿರುವ ಶುಭಂ ದ್ವಿವೇದಿ ಅವರ ಪತ್ನಿ ಆಶಾನ್ಯ ಮನವಿ ಮಾಡಿದ್ದಾರೆ. </p><p>ಏಪ್ರಿಲ್ 22ರಂದು ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಕಾನ್ಪುರ ಮೂಲದ ಉದ್ಯಮಿ ಶುಭಂ ದ್ವಿವೇದಿ ಸೇರಿದಂತೆ 26 ಮಂದಿ ಮೃತಪಟ್ಟಿದ್ದರು. </p><p>'ನನ್ನ ಪತಿಗೆ ಹುತಾತ್ಮ ಸ್ಥಾನಮಾನ ಸಿಕ್ಕಿಲ್ಲ. ಅಲ್ಲದೆ ಈವರೆಗೆ ದಾಳಿಕೋರರನ್ನು ನಿರ್ಮೂಲನೆ ಮಾಡುವಲ್ಲಿ ಸರ್ಕಾರವು ಯಶಸ್ವಿಯಾಗಿಲ್ಲ' ಎಂದು ಅವರು ಅಳಲು ತೋಡಿಕೊಂಡಿದ್ದಾರೆ. </p><p>'ಭಯೋತ್ಪಾದಕರಿಗೆ ಆದಷ್ಟು ಬೇಗನೇ ಶಿಕ್ಷೆಯಾಗಬೇಕು. ಇನ್ನೊಂದಿಗೂ ಕಾಶ್ಮೀರಕ್ಕೆ ಹೋಗುವುದಿಲ್ಲ' ಎಂದು ಅವರು ಹೇಳಿದ್ದಾರೆ. </p><p>'ನನಗೆ ಉದ್ಯೋಗ ಅಥವಾ ಹಣ ಬೇಕಾಗಿಲ್ಲ. ನನ್ನ ಪತಿಗೆ ಹುತಾತ್ಮ ಸ್ಥಾನ ನೀಡಬೇಕು. ಈ ನೋವನ್ನು ನನ್ನ ಜೀವನದುದ್ದಕ್ಕೂ ಹೊತ್ತುಕೊಳ್ಳುತ್ತೇನೆ' ಎಂದು ಹೇಳಿದ್ದಾರೆ. </p><p>'ನಾನೀಗ ಹೊರಗಡೆ ಹೋಗಲು ಇಷ್ಟಪಡುವುದಿಲ್ಲ. ಟೈರ್ ಒಡೆಯುವ ಶಬ್ದ ಕೇಳಿಸಿದರೂ ನನ್ನಲ್ಲಿ ನಡುಕ ಉಂಟು ಮಾಡುತ್ತಿದೆ' ಎಂದು ಮನೆಯ ಕೋಣೆಯಲ್ಲಿ ಪತಿಯನ್ನು ನೆನಪಿಸುತ್ತಾ ಕೊರಗುತ್ತಿರುವ ಆಶಾನ್ಯ ತಿಳಿಸಿದ್ದಾರೆ. </p><p>'ತಮ್ಮನ್ನು ಭೇಟಿ ಮಾಡಿರುವ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಪತಿಗೆ ಹುತಾತ್ಮ ಸ್ಥಾನಮಾನ ನೀಡುವ ಕುರಿತಂತೆ ಪ್ರಧಾನಿಗೆ ಪತ್ರ ಬರೆಯುವುದಾಗಿ ಭರವಸೆ ನೀಡಿದ್ದಾರೆ. ಸಂಸತ್ತಿನಲ್ಲೂ ವಿಷಯ ಪ್ರಸ್ತಾಪಿಸುವುದಾಗಿ ಹೇಳಿದ್ದಾರೆ' ಎಂದು ಆಶಾನ್ಯ ವಿವರಿಸಿದ್ದಾರೆ. </p>.ಅಮೇಠಿ: ಉಗ್ರರ ದಾಳಿಯಲ್ಲಿ ಹತ್ಯೆಯಾದ ಶುಭಂ ಕುಟುಂಬ ಭೇಟಿ ಮಾಡಿದ ರಾಹುಲ್.ಅಮೇಠಿ: ಉಗ್ರರ ದಾಳಿಯಲ್ಲಿ ಹತ್ಯೆಯಾದ ಶುಭಂ ಕುಟುಂಬ ಭೇಟಿ ಮಾಡಿದ ರಾಹುಲ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾನ್ಪುರ:</strong> 'ಹಣ ಅಥವಾ ಉದ್ಯೋಗ ಬೇಡ. ನನ್ನ ಪತಿ ಪತಿ ಶುಭಂ ದ್ವಿವೇದಿಗೆ ಹುತಾತ್ಮ ಸ್ಥಾನಮಾನ ನೀಡಬೇಕು' ಎಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಪ್ರವಾಸಿಗರ ಮೇಲಿನ ಭಯೋತ್ಪಾದಕರ ಉಗ್ರರ ದಾಳಿಯಲ್ಲಿ ಮೃತಪಟ್ಟಿರುವ ಶುಭಂ ದ್ವಿವೇದಿ ಅವರ ಪತ್ನಿ ಆಶಾನ್ಯ ಮನವಿ ಮಾಡಿದ್ದಾರೆ. </p><p>ಏಪ್ರಿಲ್ 22ರಂದು ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಕಾನ್ಪುರ ಮೂಲದ ಉದ್ಯಮಿ ಶುಭಂ ದ್ವಿವೇದಿ ಸೇರಿದಂತೆ 26 ಮಂದಿ ಮೃತಪಟ್ಟಿದ್ದರು. </p><p>'ನನ್ನ ಪತಿಗೆ ಹುತಾತ್ಮ ಸ್ಥಾನಮಾನ ಸಿಕ್ಕಿಲ್ಲ. ಅಲ್ಲದೆ ಈವರೆಗೆ ದಾಳಿಕೋರರನ್ನು ನಿರ್ಮೂಲನೆ ಮಾಡುವಲ್ಲಿ ಸರ್ಕಾರವು ಯಶಸ್ವಿಯಾಗಿಲ್ಲ' ಎಂದು ಅವರು ಅಳಲು ತೋಡಿಕೊಂಡಿದ್ದಾರೆ. </p><p>'ಭಯೋತ್ಪಾದಕರಿಗೆ ಆದಷ್ಟು ಬೇಗನೇ ಶಿಕ್ಷೆಯಾಗಬೇಕು. ಇನ್ನೊಂದಿಗೂ ಕಾಶ್ಮೀರಕ್ಕೆ ಹೋಗುವುದಿಲ್ಲ' ಎಂದು ಅವರು ಹೇಳಿದ್ದಾರೆ. </p><p>'ನನಗೆ ಉದ್ಯೋಗ ಅಥವಾ ಹಣ ಬೇಕಾಗಿಲ್ಲ. ನನ್ನ ಪತಿಗೆ ಹುತಾತ್ಮ ಸ್ಥಾನ ನೀಡಬೇಕು. ಈ ನೋವನ್ನು ನನ್ನ ಜೀವನದುದ್ದಕ್ಕೂ ಹೊತ್ತುಕೊಳ್ಳುತ್ತೇನೆ' ಎಂದು ಹೇಳಿದ್ದಾರೆ. </p><p>'ನಾನೀಗ ಹೊರಗಡೆ ಹೋಗಲು ಇಷ್ಟಪಡುವುದಿಲ್ಲ. ಟೈರ್ ಒಡೆಯುವ ಶಬ್ದ ಕೇಳಿಸಿದರೂ ನನ್ನಲ್ಲಿ ನಡುಕ ಉಂಟು ಮಾಡುತ್ತಿದೆ' ಎಂದು ಮನೆಯ ಕೋಣೆಯಲ್ಲಿ ಪತಿಯನ್ನು ನೆನಪಿಸುತ್ತಾ ಕೊರಗುತ್ತಿರುವ ಆಶಾನ್ಯ ತಿಳಿಸಿದ್ದಾರೆ. </p><p>'ತಮ್ಮನ್ನು ಭೇಟಿ ಮಾಡಿರುವ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಪತಿಗೆ ಹುತಾತ್ಮ ಸ್ಥಾನಮಾನ ನೀಡುವ ಕುರಿತಂತೆ ಪ್ರಧಾನಿಗೆ ಪತ್ರ ಬರೆಯುವುದಾಗಿ ಭರವಸೆ ನೀಡಿದ್ದಾರೆ. ಸಂಸತ್ತಿನಲ್ಲೂ ವಿಷಯ ಪ್ರಸ್ತಾಪಿಸುವುದಾಗಿ ಹೇಳಿದ್ದಾರೆ' ಎಂದು ಆಶಾನ್ಯ ವಿವರಿಸಿದ್ದಾರೆ. </p>.ಅಮೇಠಿ: ಉಗ್ರರ ದಾಳಿಯಲ್ಲಿ ಹತ್ಯೆಯಾದ ಶುಭಂ ಕುಟುಂಬ ಭೇಟಿ ಮಾಡಿದ ರಾಹುಲ್.ಅಮೇಠಿ: ಉಗ್ರರ ದಾಳಿಯಲ್ಲಿ ಹತ್ಯೆಯಾದ ಶುಭಂ ಕುಟುಂಬ ಭೇಟಿ ಮಾಡಿದ ರಾಹುಲ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>