<p><strong>ಜಮ್ಮು</strong>: ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯ ಮಾತಾ ವೈಷ್ಣೋದೇವಿ ಮಾರ್ಗದಲ್ಲಿ ನಕಲಿ ದಾಖಲೆಗಳನ್ನು ಬಳಸಿಕೊಂಡು ಕುದುರೆ ಸವಾರಿ ಸೇವೆ ಒದಗಿಸುವ ಸೋಗಿನಲ್ಲಿ ಓಡಾಡುತ್ತಿದ್ದ ಆರೋಪದ ಮೇಲೆ ಇಬ್ಬರು ವ್ಯಕ್ತಿಗಳನ್ನು ಬಂಧಿಸಿ, ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಶ್ರೀ ಗೀತಾ ಮಾತಾ ಮಂದಿರದ ಬಳಿ ನಿತ್ಯದ ಗಸ್ತು ತಿರುಗುತ್ತಿದ್ದಾಗ, ಪೊಲೀಸ್ ತಂಡವು ಪೂರನ್ ಸಿಂಗ್ ಎಂದು ಹೇಳಿಕೊಂಡಿದ್ದ ವ್ಯಕ್ತಿಯನ್ನು ತಡೆದು. ಪರಿಶೀಲಿಸಿದ್ದಾರೆ. ಆತನ ನಿಜವಾದ ಹೆಸರು ಮಣಿರ್ ಹುಸೇನ್ ಎಂದು ತಿಳಿದುಬಂದಿದೆ.</p><p>ಆತ ಅಕ್ರಮವಾಗಿ ಕಾರ್ಯನಿರ್ವಹಿಸಲು ಬೇರೊಬ್ಬರ ಅಧಿಕೃತ ಸೇವಾ ಕಾರ್ಡ್ ಅನ್ನು ಬಳಸುತ್ತಿದ್ದ ಎಂದು ತಿಳಿದುಬಂದಿದೆ. ಕತ್ರಾ ಪೊಲೀಸ್ ಠಾಣೆಯಲ್ಲಿ ಆತನ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಬಾನ್ ಗಂಗಾ ಸೇತುವೆಯ ಬಳಿ ಇದೇ ರೀತಿಯ ಪ್ರಕರಣದಲ್ಲಿ ಕುದುರೆ ಸೇವೆ ಸೋಗಿನಲ್ಲಿ ಓಡಾಡುತ್ತಿದ್ದ ಜಮ್ಮು ಜಿಲ್ಲೆಯ ಕೋಟ್ಲಿಯ ಸಾಹಿಲ್ ಖಾನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.</p><p>ವೈಷ್ಣೋದೇವಿ ದೇವಾಲಯದ ಮಾರ್ಗದಲ್ಲಿ ಅನಧಿಕೃತ ಚಟುವಟಿಕೆಗಳನ್ನು ತಡೆಯಲು ಕಣ್ಗಾವಲು ಮತ್ತು ಪರಿಶೀಲನಾ ಅಭಿಯಾನಗಳು ಮುಂದುವರಿಯಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p><p>ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 28 ಜನರು ಸಾವಿಗೀಡಾದ ಬಳಿಕ ಪ್ರವಾಸಿಗರು ಹೆಚ್ಚಿನ ಪ್ರಮಾಣದಲ್ಲಿರುವ ಪ್ರದೇಶಗಳಲ್ಲಿ ಅಧಿಕಾರಿಗಳು ಜಮ್ಮು ಮತ್ತು ಕಾಶ್ಮೀರದಾದ್ಯಂತ ಭದ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ.</p> .ಜಮ್ಮು–ಕಾಶ್ಮೀರದ ಬಂಡಿಪೋರಾದಲ್ಲಿ ಉಗ್ರರು–ಭದ್ರತಾ ಪಡೆ ನಡುವೆ ಗುಂಡಿನ ಚಕಮಕಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಮ್ಮು</strong>: ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯ ಮಾತಾ ವೈಷ್ಣೋದೇವಿ ಮಾರ್ಗದಲ್ಲಿ ನಕಲಿ ದಾಖಲೆಗಳನ್ನು ಬಳಸಿಕೊಂಡು ಕುದುರೆ ಸವಾರಿ ಸೇವೆ ಒದಗಿಸುವ ಸೋಗಿನಲ್ಲಿ ಓಡಾಡುತ್ತಿದ್ದ ಆರೋಪದ ಮೇಲೆ ಇಬ್ಬರು ವ್ಯಕ್ತಿಗಳನ್ನು ಬಂಧಿಸಿ, ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಶ್ರೀ ಗೀತಾ ಮಾತಾ ಮಂದಿರದ ಬಳಿ ನಿತ್ಯದ ಗಸ್ತು ತಿರುಗುತ್ತಿದ್ದಾಗ, ಪೊಲೀಸ್ ತಂಡವು ಪೂರನ್ ಸಿಂಗ್ ಎಂದು ಹೇಳಿಕೊಂಡಿದ್ದ ವ್ಯಕ್ತಿಯನ್ನು ತಡೆದು. ಪರಿಶೀಲಿಸಿದ್ದಾರೆ. ಆತನ ನಿಜವಾದ ಹೆಸರು ಮಣಿರ್ ಹುಸೇನ್ ಎಂದು ತಿಳಿದುಬಂದಿದೆ.</p><p>ಆತ ಅಕ್ರಮವಾಗಿ ಕಾರ್ಯನಿರ್ವಹಿಸಲು ಬೇರೊಬ್ಬರ ಅಧಿಕೃತ ಸೇವಾ ಕಾರ್ಡ್ ಅನ್ನು ಬಳಸುತ್ತಿದ್ದ ಎಂದು ತಿಳಿದುಬಂದಿದೆ. ಕತ್ರಾ ಪೊಲೀಸ್ ಠಾಣೆಯಲ್ಲಿ ಆತನ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಬಾನ್ ಗಂಗಾ ಸೇತುವೆಯ ಬಳಿ ಇದೇ ರೀತಿಯ ಪ್ರಕರಣದಲ್ಲಿ ಕುದುರೆ ಸೇವೆ ಸೋಗಿನಲ್ಲಿ ಓಡಾಡುತ್ತಿದ್ದ ಜಮ್ಮು ಜಿಲ್ಲೆಯ ಕೋಟ್ಲಿಯ ಸಾಹಿಲ್ ಖಾನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.</p><p>ವೈಷ್ಣೋದೇವಿ ದೇವಾಲಯದ ಮಾರ್ಗದಲ್ಲಿ ಅನಧಿಕೃತ ಚಟುವಟಿಕೆಗಳನ್ನು ತಡೆಯಲು ಕಣ್ಗಾವಲು ಮತ್ತು ಪರಿಶೀಲನಾ ಅಭಿಯಾನಗಳು ಮುಂದುವರಿಯಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p><p>ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 28 ಜನರು ಸಾವಿಗೀಡಾದ ಬಳಿಕ ಪ್ರವಾಸಿಗರು ಹೆಚ್ಚಿನ ಪ್ರಮಾಣದಲ್ಲಿರುವ ಪ್ರದೇಶಗಳಲ್ಲಿ ಅಧಿಕಾರಿಗಳು ಜಮ್ಮು ಮತ್ತು ಕಾಶ್ಮೀರದಾದ್ಯಂತ ಭದ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ.</p> .ಜಮ್ಮು–ಕಾಶ್ಮೀರದ ಬಂಡಿಪೋರಾದಲ್ಲಿ ಉಗ್ರರು–ಭದ್ರತಾ ಪಡೆ ನಡುವೆ ಗುಂಡಿನ ಚಕಮಕಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>