<p><strong>ಶ್ರೀನಗರ</strong>: ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದನಾ ದಾಳಿಗೆ ನಾಳೆಗೆ (ಏಪ್ರಿಲ್ 22) ಒಂದು ವರ್ಷ. ಆದರೆ ವರ್ಷ ಕಳೆದರೂ ದಾಳಿಯಲ್ಲಿ ತಮ್ಮವರನ್ನು ಕಳೆದುಕೊಂಡ ಕುಟುಂಬಸ್ಥರ ನೋವು ಮಾತ್ರ ಇನ್ನೂ ಹಸಿಯಾಗಿಯೇ ಉಳಿದಿದೆ.</p><p>ದಾಳಿಯಲ್ಲಿ ಮೃತಪಟ್ಟವರ ಕುಟುಂಬಸ್ಥರು ತಮ್ಮ ನೋವನ್ನು ಹಂಚಿಕೊಳ್ಳುತ್ತಾ, ವರ್ಷ ಕಳೆದರೂ ನಮ್ಮ ಜೀವನದಲ್ಲಿ ತುಂಬಲಾರದ ಶೂನ್ಯ ಹಾಗೆಯೇ ಇದೆ. ಸರ್ಕಾರಿ ನೆರವು ಮತ್ತು ಭರವಸೆಗಳು ಸಿಕ್ಕಿರಬಹುದು, ಆದರೆ ನಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ನೋವನ್ನು ಯಾವುದರಿಂದಲೂ ಸರಿಪಡಿಸಲು ಸಾಧ್ಯವಿಲ್ಲ ಎಂದು ಸಂತ್ರಸ್ತರು ಕಣ್ಣೀರಿಟ್ಟಿದ್ದಾರೆ.</p><p>‘ನನ್ನ ಕೊನೆಯ ಉಸಿರಿರುವವರೆಗೆ ಆ ಕರಾಳ ದಿನವನ್ನು ಮರೆಯಲು ಸಾಧ್ಯವಿಲ್ಲ‘ ಎಂದು ದಾಳಿಯಲ್ಲಿ ಮೃತಪಟ್ಟ ಕೌಸ್ತುಭ್ ಗಣಬೋಟೆ ಅವರ ಪತ್ನಿ ಸಂಗೀತಾ ಕಣ್ಣೀರು ಹಾಕಿದರು.</p>.ಪಹಲ್ಗಾಮ್ ಉಗ್ರ ದಾಳಿ ಸಂತ್ರಸ್ತ ಸೇರಿ 56 ಮಂದಿಗೆ ಜಮ್ಮು ಸರ್ಕಾರದ ಪ್ರಶಸ್ತಿ.ಪಹಲ್ಗಾಮ್ ದಾಳಿ: 1597 ಪುಟಗಳ ಆರೋಪಪಟ್ಟಿ ಸಲ್ಲಿಸಿದ ಎನ್ಐಎ. <p>‘ ಆ ಒಂದು ಘಟನೆ ನಮ್ಮ ಜೀವನದ ದಿಕ್ಕನ್ನೇ ಬದಲಾಯಿಸಿ ಬಿಡ್ತು. ಕುಟುಂಬದ ಆಧಾರಸ್ತಂಭವನ್ನೇ ಹೇಗೆ ಕಸಿದುಕೊಂಡಿತು‘ ಎಂದು ದಾಳಿಯಲ್ಲಿ ಹತ್ಯೆಗೀಡಾದ ಪ್ರಶಾಂತ್ ಅವರ ಪತ್ನಿ ಪ್ರಿಯದರ್ಶನಿ ಆಚಾರ್ಯ ಅಳಲು ತೋಡಿಕೊಂಡರು.</p><p>ದಾಳಿಯ ಸಂಚು ರೂಪಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಕುಟುಂಬಗಳು ಒತ್ತಾಯಿಸಿವೆ. ಭಯೋತ್ಪಾದನೆಯು ಕೇವಲ ವ್ಯಕ್ತಿಗಳನ್ನು ಕೊಲ್ಲುವುದಿಲ್ಲ, ಬದಲಾಗಿ ಇಡೀ ಕುಟುಂಬದ ಭವಿಷ್ಯವನ್ನೇ ನಾಶಪಡಿಸುತ್ತದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p><p>2025ರ ಏಪ್ರಿಲ್ 22ರಂದು ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ ಅಮಾಯಕರ ಪ್ರಾಣ ಪಕ್ಷಿ ಹಾರಿಹೋಗಿತ್ತು. 26 ಮಂದಿ ಮೃತಪಟ್ಟಿದ್ದರೆ, ಕೆಲವರಿಗೆ ಗಾಯಗಳಾಗಿದ್ದವು. </p><p>ಈ ದಾಳಿಗೆ ಪ್ರತೀಕಾರವಾಗಿ ಭಾರತವು ಆಪರೇಷನ್ ಸಿಂಧೂರ ಕಾರ್ಯಾಚರಣೆಯನ್ನು ನಡೆಸಿತ್ತು. ಈ ಕಾರ್ಯಾಚರಣೆಯಲ್ಲಿ ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಕಾಶ್ಮಿರದಲ್ಲಿನ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸುವ ಮೂಲಕ 100ಕ್ಕೂ ಹೆಚ್ಚು ಉಗ್ರರನ್ನು ಕೊಲ್ಲಲಾಯಿತು.</p>.ಪಹಲ್ಗಾಮ್ ದಾಳಿಯ 6 ತಿಂಗಳ ಬಳಿಕ ಕಾಶ್ಮೀರದಲ್ಲಿ ಚಿತ್ರೀಕರಣ ಆರಂಭ.ಏಷ್ಯಾ ಕಪ್ನಿಂದ ಬಂದ ಹಣ ಪಹಲ್ಗಾಮ್ ಸಂತ್ರಸ್ತರಿಗೆ ನೀಡಲು ಸೂರ್ಯಕುಮಾರ್ ನಿರ್ಧಾರ.ಪಹಲ್ಗಾಮ್: ಭಾರತದ ನಿಲುವಿಗೆ ಪಾಕ್ ಖಂಡನೆ.‘ಪಹಲ್ಗಾಮ್ ದಾಳಿಯ ಬಗ್ಗೆ ಚರ್ಚೆ ನಡೆಯಲಿ’: ಜೈರಾಮ್ ರಮೇಶ್ ಆಗ್ರಹ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ</strong>: ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದನಾ ದಾಳಿಗೆ ನಾಳೆಗೆ (ಏಪ್ರಿಲ್ 22) ಒಂದು ವರ್ಷ. ಆದರೆ ವರ್ಷ ಕಳೆದರೂ ದಾಳಿಯಲ್ಲಿ ತಮ್ಮವರನ್ನು ಕಳೆದುಕೊಂಡ ಕುಟುಂಬಸ್ಥರ ನೋವು ಮಾತ್ರ ಇನ್ನೂ ಹಸಿಯಾಗಿಯೇ ಉಳಿದಿದೆ.</p><p>ದಾಳಿಯಲ್ಲಿ ಮೃತಪಟ್ಟವರ ಕುಟುಂಬಸ್ಥರು ತಮ್ಮ ನೋವನ್ನು ಹಂಚಿಕೊಳ್ಳುತ್ತಾ, ವರ್ಷ ಕಳೆದರೂ ನಮ್ಮ ಜೀವನದಲ್ಲಿ ತುಂಬಲಾರದ ಶೂನ್ಯ ಹಾಗೆಯೇ ಇದೆ. ಸರ್ಕಾರಿ ನೆರವು ಮತ್ತು ಭರವಸೆಗಳು ಸಿಕ್ಕಿರಬಹುದು, ಆದರೆ ನಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ನೋವನ್ನು ಯಾವುದರಿಂದಲೂ ಸರಿಪಡಿಸಲು ಸಾಧ್ಯವಿಲ್ಲ ಎಂದು ಸಂತ್ರಸ್ತರು ಕಣ್ಣೀರಿಟ್ಟಿದ್ದಾರೆ.</p><p>‘ನನ್ನ ಕೊನೆಯ ಉಸಿರಿರುವವರೆಗೆ ಆ ಕರಾಳ ದಿನವನ್ನು ಮರೆಯಲು ಸಾಧ್ಯವಿಲ್ಲ‘ ಎಂದು ದಾಳಿಯಲ್ಲಿ ಮೃತಪಟ್ಟ ಕೌಸ್ತುಭ್ ಗಣಬೋಟೆ ಅವರ ಪತ್ನಿ ಸಂಗೀತಾ ಕಣ್ಣೀರು ಹಾಕಿದರು.</p>.ಪಹಲ್ಗಾಮ್ ಉಗ್ರ ದಾಳಿ ಸಂತ್ರಸ್ತ ಸೇರಿ 56 ಮಂದಿಗೆ ಜಮ್ಮು ಸರ್ಕಾರದ ಪ್ರಶಸ್ತಿ.ಪಹಲ್ಗಾಮ್ ದಾಳಿ: 1597 ಪುಟಗಳ ಆರೋಪಪಟ್ಟಿ ಸಲ್ಲಿಸಿದ ಎನ್ಐಎ. <p>‘ ಆ ಒಂದು ಘಟನೆ ನಮ್ಮ ಜೀವನದ ದಿಕ್ಕನ್ನೇ ಬದಲಾಯಿಸಿ ಬಿಡ್ತು. ಕುಟುಂಬದ ಆಧಾರಸ್ತಂಭವನ್ನೇ ಹೇಗೆ ಕಸಿದುಕೊಂಡಿತು‘ ಎಂದು ದಾಳಿಯಲ್ಲಿ ಹತ್ಯೆಗೀಡಾದ ಪ್ರಶಾಂತ್ ಅವರ ಪತ್ನಿ ಪ್ರಿಯದರ್ಶನಿ ಆಚಾರ್ಯ ಅಳಲು ತೋಡಿಕೊಂಡರು.</p><p>ದಾಳಿಯ ಸಂಚು ರೂಪಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಕುಟುಂಬಗಳು ಒತ್ತಾಯಿಸಿವೆ. ಭಯೋತ್ಪಾದನೆಯು ಕೇವಲ ವ್ಯಕ್ತಿಗಳನ್ನು ಕೊಲ್ಲುವುದಿಲ್ಲ, ಬದಲಾಗಿ ಇಡೀ ಕುಟುಂಬದ ಭವಿಷ್ಯವನ್ನೇ ನಾಶಪಡಿಸುತ್ತದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p><p>2025ರ ಏಪ್ರಿಲ್ 22ರಂದು ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ ಅಮಾಯಕರ ಪ್ರಾಣ ಪಕ್ಷಿ ಹಾರಿಹೋಗಿತ್ತು. 26 ಮಂದಿ ಮೃತಪಟ್ಟಿದ್ದರೆ, ಕೆಲವರಿಗೆ ಗಾಯಗಳಾಗಿದ್ದವು. </p><p>ಈ ದಾಳಿಗೆ ಪ್ರತೀಕಾರವಾಗಿ ಭಾರತವು ಆಪರೇಷನ್ ಸಿಂಧೂರ ಕಾರ್ಯಾಚರಣೆಯನ್ನು ನಡೆಸಿತ್ತು. ಈ ಕಾರ್ಯಾಚರಣೆಯಲ್ಲಿ ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಕಾಶ್ಮಿರದಲ್ಲಿನ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸುವ ಮೂಲಕ 100ಕ್ಕೂ ಹೆಚ್ಚು ಉಗ್ರರನ್ನು ಕೊಲ್ಲಲಾಯಿತು.</p>.ಪಹಲ್ಗಾಮ್ ದಾಳಿಯ 6 ತಿಂಗಳ ಬಳಿಕ ಕಾಶ್ಮೀರದಲ್ಲಿ ಚಿತ್ರೀಕರಣ ಆರಂಭ.ಏಷ್ಯಾ ಕಪ್ನಿಂದ ಬಂದ ಹಣ ಪಹಲ್ಗಾಮ್ ಸಂತ್ರಸ್ತರಿಗೆ ನೀಡಲು ಸೂರ್ಯಕುಮಾರ್ ನಿರ್ಧಾರ.ಪಹಲ್ಗಾಮ್: ಭಾರತದ ನಿಲುವಿಗೆ ಪಾಕ್ ಖಂಡನೆ.‘ಪಹಲ್ಗಾಮ್ ದಾಳಿಯ ಬಗ್ಗೆ ಚರ್ಚೆ ನಡೆಯಲಿ’: ಜೈರಾಮ್ ರಮೇಶ್ ಆಗ್ರಹ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>