ಇಬ್ಬರ ನಡುವೆ ಕೆಲ ನಿಮಿಷಗಳ ಮಾತುಕತೆ ನಡೆದಿದ್ದು, ಈ ಸಮಯದಲ್ಲಿ ಎರಡೂ ದೇಶಗಳ ಸಮಸ್ಯೆಗಳ ಕುರಿತು ಚರ್ಚಿಸಿದ್ದಾರೆ. ಕಳೆದ ಅಧಿಕಾರಾವಧಿಯಲ್ಲಿಇದ್ದ ನೆರೆಹೊರೆ ರಾಷ್ಟ್ರಗಳ ನಡುವಿನಉತ್ತಮ ಸಂಬಂಧಗಳನ್ನು ಮತ್ತಷ್ಟು ಗಟ್ಟಿಗೊಳಿಸುವುದು, ಎರಡೂ ರಾಷ್ಟ್ರಗಳಲ್ಲಿರುವ ಬಡತನವನ್ನು ನಿರ್ಮೂಲನೆ ಮಾಡಲು ಒಬ್ಬರಿಗೊಬ್ಬರು ಸಹಕಾರ ನೀಡುವುದೂ ಸೇರಿದಂತೆ ಹಲವು ವಿಚಾರಗಳನ್ನು ಚರ್ಚಿಸಿದ್ದಾರೆ ಎನ್ನಲಾಗಿದೆ.