ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮರನಾಥ ಯಾತ್ರೆಗೆ ಅಡ್ಡಿಪಡಿಸಲು ಪಾಕ್‌ನಿಂದ ಉಗ್ರರಿಗೆ ನೆರವು:ಲೆ.ಜನರಲ್ ಧಿಲ್ಲೋನ್

Last Updated 2 ಆಗಸ್ಟ್ 2019, 10:08 IST
ಅಕ್ಷರ ಗಾತ್ರ

ನವದೆಹಲಿ: ಅಮರನಾಥಯಾತ್ರೆ ಮಾರ್ಗದಲ್ಲಿ ಭಯೋತ್ಪಾದನೆ ದಾಳಿ ನಡೆಸಲು ಪಾಕಿಸ್ತಾನ ಸೇನೆ ಉಗ್ರರಿಗೆ ನೆರವಾಗುತ್ತಿದೆ ಎಂದು ಭಾರತೀಯ ಸೇನೆ ಶುಕ್ರವಾರ ಗಂಭೀರ ಆರೋಪ ಮಾಡಿದೆ.

ಪಾಕಿಸ್ತಾನ ಸೇನೆಯ ಸಹಕಾರದೊಂದಿಗೆ ಭಯೋತ್ಪಾದಕರು ಅಮರನಾಥ ಯಾತ್ರೆಗೆ ಅಡ್ಡಿಪಡಿಸಲು ಪ್ರಯತ್ನಿಸುತ್ತಿದ್ದಾರೆ, ಈ ಮಾರ್ಗದಲ್ಲಿ ಯಾತ್ರಿಗಳ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ್ದು ಇದಕ್ಕೆ ಪೂರಕವಾಗಿಅಮರನಾಥಯಾತ್ರೆ ಮಾರ್ಗದಲ್ಲಿ ಸ್ಫೋಟಕಗಳು ಸೇರಿದಂತೆ ಸುಧಾರಣ ರೈಫಲ್‌ ಅನ್ನು ವಶಕ್ಕೆ ಪಡೆಯಲಾಗಿದೆ ಎಂದು ಲೆ.ಜನರಲ್ ಕೆ.ಎಸ್. ಜೆ ಧಿಲ್ಲೋನ್ ಹೇಳಿದ್ದಾರೆ.

ಕಾಶ್ಮೀರ ಪೊಲೀಸರು ಮತ್ತು ಭಾರತೀಯ ಸೇನೆಯ ಅಧಿಕಾರಿಗಳು ಶುಕ್ರವಾರ ಜಂಟಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು.

ಗುಪ್ತಚರ ಇಲಾಖೆ ಅಧಿಕಾರಿಗಳ ಮಾಹಿತಿ ಮೇರೆಗೆ ಅಮರನಾಥಯಾತ್ರೆಯ ಮಾರ್ಗದ ಪ್ರದೇಶಗಳಲ್ಲಿ ಸೇನೆಯು ಕಳೆದು ಎರಡು ಮೂರು ದಿನಗಳಿಂದ ಕಾರ್ಯಾಚರಣೆ ನಡೆಸಿತ್ತು. ಈ ವೇಳೆ ಭೂಮಿಯಲ್ಲಿ ಹುದುಗಿಟ್ಟಿದ್ದ ಸ್ಫೋಟಕಗಳು ಮತ್ತು ಟೆಲಿಸ್ಕೋಪಿಕ್‌ 24 ಅಮೆರಿಕನ್‌ ರೈಫಲ್‌ ದೊರೆತಿದೆ. ಇದರ ಹಿಂದೆ ಪಾಕಿಸ್ತಾನ ಸೇನೆಯ ಕೈವಾಡ ಇರುವುದು ಸ್ಪಷ್ಟ ಎಂದುಕೆ.ಎಸ್. ಜೆ ಧಿಲ್ಲೋನ್ ಹೇಳಿದ್ದಾರೆ.

ಇದೇ ವೇಳೆ ವಶಪಡಿಸಿಕೊಂಡಿರುವ ರೈಫಲ್‌ ಮತ್ತು ಸ್ಫೋಟಕಗಳನ್ನು ಪ್ರದರ್ಶನ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT