<p><strong>ಪ್ರಜಾವಾಣಿ ವಾರ್ತೆ:</strong> ಪಾಕಿಸ್ತಾನವು ಗಡಿಯಾಚೆಗಿನ ಭಯೋತ್ಪಾದನೆಯನ್ನು ನಿಲ್ಲಿಸುವವರೆಗೂ ಸಿಂಧೂ ಜಲ ಒಪ್ಪಂದ ಅಮಾನತಿನಲ್ಲಿರಲಿದೆ ಎಂದು ಭಾರತ ಗುರುವಾರ ಹೇಳಿದೆ.</p><p>ಒಪ್ಪಂದ ಅಮಾನತು ನಿರ್ಧಾರವನ್ನು ಮರುಪರಿಶೀಲಿಸುವಂತೆ ಪಾಕಿಸ್ತಾನ ಮನವಿ ಮಾಡಿದ ಬೆನ್ನಲ್ಲೇ ಭಾರತದ ಹೇಳಿಕೆ ಹೊರಬಿದ್ದಿದೆ.</p><p>‘ಸಿಂಧೂ ಜಲ ಒಪ್ಪಂದವನ್ನು ಅಮಾನತು ಮಾಡಲಾಗಿದೆ ಮತ್ತು ಪಾಕಿಸ್ತಾನವು ಗಡಿಯಾಚೆಗಿನ ಭಯೋತ್ಪಾದನೆಯನ್ನು ನಿಲ್ಲಿಸುವವರೆಗೂ ಈ ನಿರ್ಧಾರ ಜಾರಿಯಲ್ಲಿರಲಿದೆ’ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಸ್ಪಷ್ಟಪಡಿಸಿದ್ದಾರೆ.</p><p>ಒಪ್ಪಂದ ಅಮಾನತು ನಿರ್ಧಾರವನ್ನು ಮರುಪರಿಶೀಲಿಸುವಂತೆ ಕೋರಿ ಪಾಕಿಸ್ತಾನದ ಜಲಸಂಪನ್ಮೂಲ ಕಾರ್ಯದರ್ಶಿ ಸೈಯದ್ ಅಲಿ ಮುರ್ತಾಜಾ ಅವರು ಪತ್ರ ಬರೆದಿದ್ದಾರೆ ಎಂದು ಮೂಲಗಳು ಹೇಳಿವೆ. </p><p>ಜಲಶಕ್ತಿ ಸಚಿವಾಲಯದ ಕಾರ್ಯದರ್ಶಿ ದೇಬಶ್ರೀ ಮುಖರ್ಜಿ ಅವರಿಗೆ ಬರೆದ ಪತ್ರದಲ್ಲಿ, ಜಲ ಒಪ್ಪಂದಕ್ಕೆ ಸಂಬಂಧಿಸಿದಂತೆ ಭಾರತದ ಜತೆ ಚರ್ಚಿಸಲು ತಮ್ಮ ಸರ್ಕಾರ ಸಿದ್ಧವಿದೆ ಎಂದು ಹೇಳಿದ್ದಾರೆ. ಅದೇ ರೀತಿ, ಯಾವ ಆಧಾರದಲ್ಲಿ ಒಪ್ಪಂದವನ್ನು ಅಮಾನತಿನಲ್ಲಿರಿಸಲಾಗಿದೆ ಎಂದೂ ಪ್ರಶ್ನಿಸಿದ್ದಾರೆ.</p><p>ಭಾರತದ ನಿರ್ಧಾರ ‘ಏಕಪಕ್ಷೀಯ ಮತ್ತು ಕಾನೂನುಬಾಹಿರ’ ಹಾಗೂ ‘ಪಾಕಿಸ್ತಾನದ ಜನರು ಮತ್ತು ಅದರ ಆರ್ಥಿಕತೆಯ ಮೇಲಿನ ದಾಳಿಗೆ ಸಮನಾದುದು’ ಎಂದಿದ್ದಾರೆ. ಪಾಕಿಸ್ತಾನದ ಜತೆ ಮಾತುಕತೆಗೆ ಪ್ರತಿನಿಧಿಗಳನ್ನು ಹೆಸರಿಸುವಂತೆಯೂ ಪತ್ರದಲ್ಲಿ ಕೋರಿದ್ದಾರೆ.</p><p>ಭಾರತದ ನಿರ್ಧಾರವು ಪಾಕಿಸ್ತಾನದ ಲಕ್ಷಾಂತರ ಜನರ ಜೀವನದ ಮೇಲೆ ಪರಿಣಾಮ ಬೀರಲಿರುವುದರಿಂದ ಅಮಾನತು ನಿರ್ಧಾರ ಮರುಪರಿಶೀಲಿಸುವಂತೆ ಆಗ್ರಹಿಸಿದ್ದಾರೆ.</p><p>ಏ.22ರಂದು ನಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತವು ಸಿಂಧೂ ಜಲ ಒಪ್ಪಂದವನ್ನು ಅಮಾನತುಗೊಳಿಸುವ ನಿರ್ಧಾರ ತೆಗೆದುಕೊಂಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪ್ರಜಾವಾಣಿ ವಾರ್ತೆ:</strong> ಪಾಕಿಸ್ತಾನವು ಗಡಿಯಾಚೆಗಿನ ಭಯೋತ್ಪಾದನೆಯನ್ನು ನಿಲ್ಲಿಸುವವರೆಗೂ ಸಿಂಧೂ ಜಲ ಒಪ್ಪಂದ ಅಮಾನತಿನಲ್ಲಿರಲಿದೆ ಎಂದು ಭಾರತ ಗುರುವಾರ ಹೇಳಿದೆ.</p><p>ಒಪ್ಪಂದ ಅಮಾನತು ನಿರ್ಧಾರವನ್ನು ಮರುಪರಿಶೀಲಿಸುವಂತೆ ಪಾಕಿಸ್ತಾನ ಮನವಿ ಮಾಡಿದ ಬೆನ್ನಲ್ಲೇ ಭಾರತದ ಹೇಳಿಕೆ ಹೊರಬಿದ್ದಿದೆ.</p><p>‘ಸಿಂಧೂ ಜಲ ಒಪ್ಪಂದವನ್ನು ಅಮಾನತು ಮಾಡಲಾಗಿದೆ ಮತ್ತು ಪಾಕಿಸ್ತಾನವು ಗಡಿಯಾಚೆಗಿನ ಭಯೋತ್ಪಾದನೆಯನ್ನು ನಿಲ್ಲಿಸುವವರೆಗೂ ಈ ನಿರ್ಧಾರ ಜಾರಿಯಲ್ಲಿರಲಿದೆ’ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಸ್ಪಷ್ಟಪಡಿಸಿದ್ದಾರೆ.</p><p>ಒಪ್ಪಂದ ಅಮಾನತು ನಿರ್ಧಾರವನ್ನು ಮರುಪರಿಶೀಲಿಸುವಂತೆ ಕೋರಿ ಪಾಕಿಸ್ತಾನದ ಜಲಸಂಪನ್ಮೂಲ ಕಾರ್ಯದರ್ಶಿ ಸೈಯದ್ ಅಲಿ ಮುರ್ತಾಜಾ ಅವರು ಪತ್ರ ಬರೆದಿದ್ದಾರೆ ಎಂದು ಮೂಲಗಳು ಹೇಳಿವೆ. </p><p>ಜಲಶಕ್ತಿ ಸಚಿವಾಲಯದ ಕಾರ್ಯದರ್ಶಿ ದೇಬಶ್ರೀ ಮುಖರ್ಜಿ ಅವರಿಗೆ ಬರೆದ ಪತ್ರದಲ್ಲಿ, ಜಲ ಒಪ್ಪಂದಕ್ಕೆ ಸಂಬಂಧಿಸಿದಂತೆ ಭಾರತದ ಜತೆ ಚರ್ಚಿಸಲು ತಮ್ಮ ಸರ್ಕಾರ ಸಿದ್ಧವಿದೆ ಎಂದು ಹೇಳಿದ್ದಾರೆ. ಅದೇ ರೀತಿ, ಯಾವ ಆಧಾರದಲ್ಲಿ ಒಪ್ಪಂದವನ್ನು ಅಮಾನತಿನಲ್ಲಿರಿಸಲಾಗಿದೆ ಎಂದೂ ಪ್ರಶ್ನಿಸಿದ್ದಾರೆ.</p><p>ಭಾರತದ ನಿರ್ಧಾರ ‘ಏಕಪಕ್ಷೀಯ ಮತ್ತು ಕಾನೂನುಬಾಹಿರ’ ಹಾಗೂ ‘ಪಾಕಿಸ್ತಾನದ ಜನರು ಮತ್ತು ಅದರ ಆರ್ಥಿಕತೆಯ ಮೇಲಿನ ದಾಳಿಗೆ ಸಮನಾದುದು’ ಎಂದಿದ್ದಾರೆ. ಪಾಕಿಸ್ತಾನದ ಜತೆ ಮಾತುಕತೆಗೆ ಪ್ರತಿನಿಧಿಗಳನ್ನು ಹೆಸರಿಸುವಂತೆಯೂ ಪತ್ರದಲ್ಲಿ ಕೋರಿದ್ದಾರೆ.</p><p>ಭಾರತದ ನಿರ್ಧಾರವು ಪಾಕಿಸ್ತಾನದ ಲಕ್ಷಾಂತರ ಜನರ ಜೀವನದ ಮೇಲೆ ಪರಿಣಾಮ ಬೀರಲಿರುವುದರಿಂದ ಅಮಾನತು ನಿರ್ಧಾರ ಮರುಪರಿಶೀಲಿಸುವಂತೆ ಆಗ್ರಹಿಸಿದ್ದಾರೆ.</p><p>ಏ.22ರಂದು ನಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತವು ಸಿಂಧೂ ಜಲ ಒಪ್ಪಂದವನ್ನು ಅಮಾನತುಗೊಳಿಸುವ ನಿರ್ಧಾರ ತೆಗೆದುಕೊಂಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>