<p><strong>ನವದೆಹಲಿ/ಚಂಡೀಗಢ:</strong> ‘ಪಂಜಾಬ್ನ ಅಂತರರಾಷ್ಟ್ರೀಯ ಗಡಿ ಮೂಲಕ ಭಾರತದತ್ತ ಸಾಗಿ ಬರುತ್ತಿದ್ದ ಪಾಕಿಸ್ತಾನದ ಆರು ಡ್ರೋನ್ಗಳನ್ನು ಗಡಿ ಭದ್ರತಾ ಪಡೆ ಸಿಬ್ಬಂದಿ (ಬಿಎಸ್ಎಫ್) ಹೊಡೆದುರುಳಿಸಿದ್ದಾರೆ’ ಎಂದು ಬಿಎಸ್ಎಫ್ ವಕ್ತಾರರೊಬ್ಬರು ಗುರುವಾರ ತಿಳಿಸಿದ್ದಾರೆ.</p><p>ಅಮೃತಸರದ ಮೋಧೆ ಗ್ರಾಮದ ವ್ಯಾಪ್ತಿಯಲ್ಲಿ 5 ಡ್ರೋನ್ಗಳು ಕಾಣಿಸಿಕೊಂಡಿದ್ದವು. ಗಸ್ತಿನಲ್ಲಿದ್ದ ಸಿಬ್ಬಂದಿ ಗುಂಡು ಹಾರಿಸಿ ಅವುಗಳನ್ನು ನೆಲಕ್ಕುರುಳಿಸಿದ್ದು, ಮೂರು ಪಿಸ್ತೂಲ್ಗಳು, ಮೂರು ಮ್ಯಾಗಜೀನ್ಗಳು ಮತ್ತು ಒಂದು ಕೆಜಿಗೂ ಹೆಚ್ಚು ತೂಕದ ನಾಲ್ಕು ಹೆರಾಯಿನ್ ಪ್ಯಾಕೆಟ್ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಗುರುವಾರ ಮುಂಜಾನೆ ಅಟ್ಟಾರಿ ಗ್ರಾಮದ ಬಳಿ ಮತ್ತೊಂದು ಡ್ರೋನ್ ಅನ್ನು ಹೊಡೆದುರುಳಿಸಿದ್ದು, ಎರಡು ಮ್ಯಾಗಜೀನ್ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. </p><p>ತರಣ್ ತರಣ್ ಜಿಲ್ಲೆಯ ದಾಲ್ ಗ್ರಾಮದ ಬಳಿ ನಡೆದ ಕಾರ್ಯಾಚರಣೆ ವೇಳೆ ಭತ್ತದ ಗದ್ದೆಯಲ್ಲಿ ಪಿಸ್ತೂಲ್ ಮತ್ತು ಮ್ಯಾಗಜೀನ್ ಬಿಡಿ ಭಾಗಗಳನ್ನು ವಶಪಡಿಸಿಕೊಂಡಿದ್ದೇವೆ ಎಂದು ಅಧಿಕಾರಿಗಳು ವಿವರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ/ಚಂಡೀಗಢ:</strong> ‘ಪಂಜಾಬ್ನ ಅಂತರರಾಷ್ಟ್ರೀಯ ಗಡಿ ಮೂಲಕ ಭಾರತದತ್ತ ಸಾಗಿ ಬರುತ್ತಿದ್ದ ಪಾಕಿಸ್ತಾನದ ಆರು ಡ್ರೋನ್ಗಳನ್ನು ಗಡಿ ಭದ್ರತಾ ಪಡೆ ಸಿಬ್ಬಂದಿ (ಬಿಎಸ್ಎಫ್) ಹೊಡೆದುರುಳಿಸಿದ್ದಾರೆ’ ಎಂದು ಬಿಎಸ್ಎಫ್ ವಕ್ತಾರರೊಬ್ಬರು ಗುರುವಾರ ತಿಳಿಸಿದ್ದಾರೆ.</p><p>ಅಮೃತಸರದ ಮೋಧೆ ಗ್ರಾಮದ ವ್ಯಾಪ್ತಿಯಲ್ಲಿ 5 ಡ್ರೋನ್ಗಳು ಕಾಣಿಸಿಕೊಂಡಿದ್ದವು. ಗಸ್ತಿನಲ್ಲಿದ್ದ ಸಿಬ್ಬಂದಿ ಗುಂಡು ಹಾರಿಸಿ ಅವುಗಳನ್ನು ನೆಲಕ್ಕುರುಳಿಸಿದ್ದು, ಮೂರು ಪಿಸ್ತೂಲ್ಗಳು, ಮೂರು ಮ್ಯಾಗಜೀನ್ಗಳು ಮತ್ತು ಒಂದು ಕೆಜಿಗೂ ಹೆಚ್ಚು ತೂಕದ ನಾಲ್ಕು ಹೆರಾಯಿನ್ ಪ್ಯಾಕೆಟ್ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಗುರುವಾರ ಮುಂಜಾನೆ ಅಟ್ಟಾರಿ ಗ್ರಾಮದ ಬಳಿ ಮತ್ತೊಂದು ಡ್ರೋನ್ ಅನ್ನು ಹೊಡೆದುರುಳಿಸಿದ್ದು, ಎರಡು ಮ್ಯಾಗಜೀನ್ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. </p><p>ತರಣ್ ತರಣ್ ಜಿಲ್ಲೆಯ ದಾಲ್ ಗ್ರಾಮದ ಬಳಿ ನಡೆದ ಕಾರ್ಯಾಚರಣೆ ವೇಳೆ ಭತ್ತದ ಗದ್ದೆಯಲ್ಲಿ ಪಿಸ್ತೂಲ್ ಮತ್ತು ಮ್ಯಾಗಜೀನ್ ಬಿಡಿ ಭಾಗಗಳನ್ನು ವಶಪಡಿಸಿಕೊಂಡಿದ್ದೇವೆ ಎಂದು ಅಧಿಕಾರಿಗಳು ವಿವರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>