<p><strong>ಪಣಜಿ:</strong> ಕಾಣಕೋಣ ನಗರದ ರಸ್ತೆಗಳಲ್ಲಿ ಪಾಕಿಸ್ತಾನದ ಧ್ವಜ ಬಿಡಿಸಿರುವುದು ಕಂಡುಬಂದಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುವಂತೆ ಒತ್ತಾಯಿಸಿ ಗೋವಾ ಲೋಕಸಭಾ ಸ್ಪೀಕರ್ ರಮೇಶ್ ತಾವಡ್ಕರ್ ನೇತೃತ್ವದ ತಂಡ ಪೊಲೀಸರಿಗೆ ದೂರು ದಾಖಲಿಸಿದೆ. </p><p>ಕಾಣಕೋಣ ಕ್ಷೇತ್ರದ ಶಾಸಕರಾಗಿರುವ ರಮೇಶ್ ತಾವಡ್ಕರ್ ಅವರು, ಕ್ಯಾನಕೋನಾ ನಗರದ ಮೂರು ರಸ್ತೆಗಳಲ್ಲಿ ಪಾಕಿಸ್ತಾನದ ಧ್ವಜವನ್ನು ಬಿಡಿಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.</p><p>‘ಅಪರಿಚಿತ ವ್ಯಕ್ತಿಗಳು ಅಥವಾ ಅಪರಾಧಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಜತೆಗೆ, ಭಾರತೀಯ ನ್ಯಾಯ ಸಂಹಿತೆಯ ಪ್ರಕಾರ ಪ್ರಕರಣದ ತನಿಖೆ ನಡೆಸಬೇಕು’ ಎಂದು ತಾವಡ್ಕರ್ ಒತ್ತಾಯಿಸಿದ್ದಾರೆ. </p><p>‘ಯಾರೂ ಕೂಡ ಭಾರತದ ಯಾವುದೇ ಆಸ್ತಿಯ ಮೇಲೆ ಪಾಕಿಸ್ತಾನದ ಧ್ವಜವನ್ನು ಚಿತ್ರಿಸಬಾರದು. ಬದಲಾಗಿ ಪ್ರತಿಯೊಬ್ಬ ಭಾರತೀಯರು ಪಾಕಿಸ್ತಾನದ ವಿರುದ್ಧ ಸಾರ್ವಜನಿಕವಾಗಿ ಪ್ರತಿಭಟಿಸಬೇಕು’ ಎಂದು ಕಾಂಗ್ರೆಸ್ ನಾಯಕ ಸುನಿಲ್ ಕವ್ತಂಕರ್ ಕರೆ ನೀಡಿದ್ದಾರೆ. </p><p>ಏಪ್ರಿಲ್ 22ರಂದು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದನಾ ದಾಳಿಯಲ್ಲಿ 26 ಮಂದಿ ಮೃತಪಟ್ಟಿದ್ದರು. ದಾಳಿಯ ಬೆನ್ನಲ್ಲೇ ಭಾರತ ಮತ್ತು ಪಾಕಿಸ್ತಾನದ ಮಧ್ಯೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಣಜಿ:</strong> ಕಾಣಕೋಣ ನಗರದ ರಸ್ತೆಗಳಲ್ಲಿ ಪಾಕಿಸ್ತಾನದ ಧ್ವಜ ಬಿಡಿಸಿರುವುದು ಕಂಡುಬಂದಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುವಂತೆ ಒತ್ತಾಯಿಸಿ ಗೋವಾ ಲೋಕಸಭಾ ಸ್ಪೀಕರ್ ರಮೇಶ್ ತಾವಡ್ಕರ್ ನೇತೃತ್ವದ ತಂಡ ಪೊಲೀಸರಿಗೆ ದೂರು ದಾಖಲಿಸಿದೆ. </p><p>ಕಾಣಕೋಣ ಕ್ಷೇತ್ರದ ಶಾಸಕರಾಗಿರುವ ರಮೇಶ್ ತಾವಡ್ಕರ್ ಅವರು, ಕ್ಯಾನಕೋನಾ ನಗರದ ಮೂರು ರಸ್ತೆಗಳಲ್ಲಿ ಪಾಕಿಸ್ತಾನದ ಧ್ವಜವನ್ನು ಬಿಡಿಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.</p><p>‘ಅಪರಿಚಿತ ವ್ಯಕ್ತಿಗಳು ಅಥವಾ ಅಪರಾಧಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಜತೆಗೆ, ಭಾರತೀಯ ನ್ಯಾಯ ಸಂಹಿತೆಯ ಪ್ರಕಾರ ಪ್ರಕರಣದ ತನಿಖೆ ನಡೆಸಬೇಕು’ ಎಂದು ತಾವಡ್ಕರ್ ಒತ್ತಾಯಿಸಿದ್ದಾರೆ. </p><p>‘ಯಾರೂ ಕೂಡ ಭಾರತದ ಯಾವುದೇ ಆಸ್ತಿಯ ಮೇಲೆ ಪಾಕಿಸ್ತಾನದ ಧ್ವಜವನ್ನು ಚಿತ್ರಿಸಬಾರದು. ಬದಲಾಗಿ ಪ್ರತಿಯೊಬ್ಬ ಭಾರತೀಯರು ಪಾಕಿಸ್ತಾನದ ವಿರುದ್ಧ ಸಾರ್ವಜನಿಕವಾಗಿ ಪ್ರತಿಭಟಿಸಬೇಕು’ ಎಂದು ಕಾಂಗ್ರೆಸ್ ನಾಯಕ ಸುನಿಲ್ ಕವ್ತಂಕರ್ ಕರೆ ನೀಡಿದ್ದಾರೆ. </p><p>ಏಪ್ರಿಲ್ 22ರಂದು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದನಾ ದಾಳಿಯಲ್ಲಿ 26 ಮಂದಿ ಮೃತಪಟ್ಟಿದ್ದರು. ದಾಳಿಯ ಬೆನ್ನಲ್ಲೇ ಭಾರತ ಮತ್ತು ಪಾಕಿಸ್ತಾನದ ಮಧ್ಯೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>