<p><strong>ನವದೆಹಲಿ:</strong> ಪಾಕಿಸ್ತಾನದಿಂದ ಭಾರತಕ್ಕೆ ಆಮದಾಗುವ ಎಲ್ಲಾ ಸರಕುಗಳ ಮೇಲೆ ಕೇಂದ್ರ ಸರ್ಕಾರವು ಶನಿವಾರ ಸಂಪೂರ್ಣವಾಗಿ ನಿರ್ಬಂಧ ಹೇರಿದೆ. </p><p>ಕಳೆದ ತಿಂಗಳು ಕಾಶ್ಮೀರದ ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದರು. ಹಾಗಾಗಿ, ರಾಷ್ಟ್ರೀಯ ಭದ್ರತೆ ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ವಿದೇಶಿ ವ್ಯಾಪಾರ ಮಹಾನಿರ್ದೇಶನಾಲಯವು (ಡಿಜಿಎಫ್ಟಿ) ಆದೇಶದಲ್ಲಿ ತಿಳಿಸಿದೆ.</p><p>2019ರಲ್ಲಿ ಪುಲ್ವಾಮಾದಲ್ಲಿ ನಡೆದ ಉಗ್ರರ ದಾಳಿಯ ಬಳಿಕ ಪಾಕಿಸ್ತಾನದಿಂದ ಆಮದಾಗುವ ಸರಕುಗಳ ಮೇಲೆ ಶೇ 200ರಷ್ಟು ಸುಂಕ ಹೇರಲಾಗಿತ್ತು. ಹೊಸ ಆದೇಶದ ಅನ್ವಯ ಇತರೆ ದೇಶಗಳಿಂದ ಭಾರತಕ್ಕೆ ಪೂರೈಕೆಯಾಗುವ ಪಾಕಿಸ್ತಾನದ ಸರಕುಗಳಿಗೂ ನಿರ್ಬಂಧ ವಿಧಿಸಲಾಗಿದೆ. </p><p>2024–25ನೇ ಆರ್ಥಿಕ ವರ್ಷದ ಏಪ್ರಿಲ್ನಿಂದ ಜನವರಿವರೆಗೆ ಭಾರತವು ಪಾಕಿಸ್ತಾನಕ್ಕೆ ₹3,786 ಕೋಟಿ ಮೌಲ್ಯದ ಸರಕುಗಳನ್ನು ರಫ್ತು ಮಾಡಿದೆ. ಇದೇ ಅವಧಿಯಲ್ಲಿ ಅಲ್ಲಿಂದ ₹3.55 ಕೋಟಿ ಮೌಲ್ಯದ ಸರಕುಗಳನ್ನು ಆಮದು ಮಾಡಿಕೊಳ್ಳಲಾಗಿದೆ. ಈ ಪೈಕಿ ಅಂಜೂರದ ಹಣ್ಣು, ತುಳಸಿ ಮತ್ತು ರೋಸ್ಮೆರಿ ಗಿಡಮೂಲಿಕೆಗಳು, ರಾಸಾಯನಿಕಗಳು, ಹಿಮಾಲಯನ್ ಪಿಂಕ್ ಸಾಲ್ಟ್ ಸೇರಿದೆ. </p><p>ವಿದೇಶಿ ವ್ಯಾಪಾರ ನೀತಿ 2023ರ ಅನ್ವಯ ಪಾಕಿಸ್ತಾನದಿಂದ ನೇರವಾಗಿ ಮತ್ತು ಪರೋಕ್ಷವಾಗಿ ಪೂರೈಕೆಯಾಗುವ ಎಲ್ಲಾ ಸರಕುಗಳಿಗೆ ಈ ಆದೇಶ ಅನ್ವಯಿಸಲಿದೆ ಎಂದು ಡಿಜಿಎಫ್ಟಿ ತಿಳಿಸಿದೆ. </p><p>ಪಹಲ್ಗಾಮ್ ಘಟನೆ ಬಳಿಕ ಕೇಂದ್ರ ಸರ್ಕಾರವು ಅಟ್ಟಾರಿ ಗಡಿ ಬಂದ್ ಸೇರಿ ಪಾಕಿಸ್ತಾನದ ಜೊತೆಗಿನ ಸಂಬಂಧವನ್ನು ಕಡಿತಗೊಳಿಸಿದೆ. ಇದಕ್ಕೆ ಪ್ರತಿಯಾಗಿ ಆ ದೇಶವೂ ಭಾರತದ ಜತೆಗಿನ ವ್ಯಾಪಾರ ಒಪ್ಪಂದಗಳನ್ನು ರದ್ದುಪಡಿಸಿದೆ.</p>.<p><strong>ಪತ್ರ ವ್ಯವಹಾರ ಅಮಾನತು</strong></p><p>ಪಾಕಿಸ್ತಾನದ ಜೊತೆಗಿನ ಎಲ್ಲ ಬಗೆಯ ಪತ್ರ ಮತ್ತು ಪಾರ್ಸೆಲ್ ವ್ಯವಹಾರಗಳನ್ನು ಭಾರತವು ಶನಿವಾರದಿಂದ ಅಮಾನತಿನಲ್ಲಿ ಇರಿಸಿದೆ. ಈ ಅಮಾನತು ಆದೇಶವು ವಾಯುಮಾರ್ಗದ ಮೂಲಕ, ರಸ್ತೆ ಮೂಲಕ ನಡೆಯುವ ಪತ್ರ, ಪಾರ್ಸೆಲ್ ವ್ಯವಹಾರಗಳಿಗೆ ಅನ್ವಯವಾಗುತ್ತದೆ. ಇದರ ಜೊತೆಯಲ್ಲೇ, ಪಾಕಿಸ್ತಾನದ ಯಾವುದೇ ಹಡಗು ಭಾರತದ ಬಂದರು ಪ್ರವೇಶಿಸುವಂತಿಲ್ಲ ಎಂದು ಕೂಡ ಆದೇಶಿಸಲಾಗಿದೆ.</p><p>ಸಂವಹನ ಸಚಿವಾಲಯದ ಅಧೀನದಲ್ಲಿ ಕಾರ್ಯಾಚರಣೆ ನಡೆಸುವ ಅಂಚೆ ಇಲಾಖೆಯು, ಪತ್ರ ಮತ್ತು ಪಾರ್ಸೆಲ್ ವ್ಯವಹಾರಗಳ ಅಮಾನತು ಆದೇಶ ಹೊರಡಿಸಿದೆ.</p><p>ಪಾಕಿಸ್ತಾನದ ಹಡಗುಗಳು ಭಾರತದ ಬಂದರು ಪ್ರವೇಶಿಸುವಂತಿಲ್ಲ ಎಂಬ ಆದೇಶ ಹೊರಡಿಸಿರುವುದಷ್ಟೇ ಅಲ್ಲದೆ, ಭಾರತದ ಹಡಗುಗಳು ಕೂಡ ಪಾಕಿಸ್ತಾನದ ಬಂದರಿಗೆ ತೆರಳುವಂತಿಲ್ಲ ಎಂದು ಆದೇಶಿಸಲಾಗಿದೆ. ಈ ಆದೇಶವು ತಕ್ಷಣದಿಂದಲೇ ಜಾರಿಗೆ ಬಂದಿದೆ. ‘ಭಾರತದ ಆಸ್ತಿಗಳು, ಸರಕುಗಳು ಮತ್ತು ಸಂಬಂಧಪಟ್ಟ ಮೂಲಸೌಕರ್ಯವನ್ನು ರಕ್ಷಿಸುವ ಉದ್ದೇಶದಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ’ ಎಂದು ಕೇಂದ್ರ ಹೇಳಿದೆ.</p>.Pahalgam Attack: ಸತತ 8ನೇ ದಿನವೂ ಪಾಕ್ನಿಂದ ಕದನ ವಿರಾಮ ಉಲ್ಲಂಘನೆ.Pahalgam Attack | ವಾತಾವರಣ ತಿಳಿಗೊಳಿಸಲು ಮುಂದಾಗುವಂತೆ ಅಮೆರಿಕ ಮನವಿ.Pahalgam Terror Attack: ಪಾಕ್ ವಿಮಾನಗಳಿಗೆ ಭಾರತ ವಾಯುಪ್ರದೇಶ ನಿರ್ಬಂಧ.Pahalgam Terror attack | ಪ್ರತೀಕಾರ: ಸೇನೆಗೆ ಸಂಪೂರ್ಣ ಅಧಿಕಾರ- ಪ್ರಧಾನಿ ಮೋದಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಪಾಕಿಸ್ತಾನದಿಂದ ಭಾರತಕ್ಕೆ ಆಮದಾಗುವ ಎಲ್ಲಾ ಸರಕುಗಳ ಮೇಲೆ ಕೇಂದ್ರ ಸರ್ಕಾರವು ಶನಿವಾರ ಸಂಪೂರ್ಣವಾಗಿ ನಿರ್ಬಂಧ ಹೇರಿದೆ. </p><p>ಕಳೆದ ತಿಂಗಳು ಕಾಶ್ಮೀರದ ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದರು. ಹಾಗಾಗಿ, ರಾಷ್ಟ್ರೀಯ ಭದ್ರತೆ ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ವಿದೇಶಿ ವ್ಯಾಪಾರ ಮಹಾನಿರ್ದೇಶನಾಲಯವು (ಡಿಜಿಎಫ್ಟಿ) ಆದೇಶದಲ್ಲಿ ತಿಳಿಸಿದೆ.</p><p>2019ರಲ್ಲಿ ಪುಲ್ವಾಮಾದಲ್ಲಿ ನಡೆದ ಉಗ್ರರ ದಾಳಿಯ ಬಳಿಕ ಪಾಕಿಸ್ತಾನದಿಂದ ಆಮದಾಗುವ ಸರಕುಗಳ ಮೇಲೆ ಶೇ 200ರಷ್ಟು ಸುಂಕ ಹೇರಲಾಗಿತ್ತು. ಹೊಸ ಆದೇಶದ ಅನ್ವಯ ಇತರೆ ದೇಶಗಳಿಂದ ಭಾರತಕ್ಕೆ ಪೂರೈಕೆಯಾಗುವ ಪಾಕಿಸ್ತಾನದ ಸರಕುಗಳಿಗೂ ನಿರ್ಬಂಧ ವಿಧಿಸಲಾಗಿದೆ. </p><p>2024–25ನೇ ಆರ್ಥಿಕ ವರ್ಷದ ಏಪ್ರಿಲ್ನಿಂದ ಜನವರಿವರೆಗೆ ಭಾರತವು ಪಾಕಿಸ್ತಾನಕ್ಕೆ ₹3,786 ಕೋಟಿ ಮೌಲ್ಯದ ಸರಕುಗಳನ್ನು ರಫ್ತು ಮಾಡಿದೆ. ಇದೇ ಅವಧಿಯಲ್ಲಿ ಅಲ್ಲಿಂದ ₹3.55 ಕೋಟಿ ಮೌಲ್ಯದ ಸರಕುಗಳನ್ನು ಆಮದು ಮಾಡಿಕೊಳ್ಳಲಾಗಿದೆ. ಈ ಪೈಕಿ ಅಂಜೂರದ ಹಣ್ಣು, ತುಳಸಿ ಮತ್ತು ರೋಸ್ಮೆರಿ ಗಿಡಮೂಲಿಕೆಗಳು, ರಾಸಾಯನಿಕಗಳು, ಹಿಮಾಲಯನ್ ಪಿಂಕ್ ಸಾಲ್ಟ್ ಸೇರಿದೆ. </p><p>ವಿದೇಶಿ ವ್ಯಾಪಾರ ನೀತಿ 2023ರ ಅನ್ವಯ ಪಾಕಿಸ್ತಾನದಿಂದ ನೇರವಾಗಿ ಮತ್ತು ಪರೋಕ್ಷವಾಗಿ ಪೂರೈಕೆಯಾಗುವ ಎಲ್ಲಾ ಸರಕುಗಳಿಗೆ ಈ ಆದೇಶ ಅನ್ವಯಿಸಲಿದೆ ಎಂದು ಡಿಜಿಎಫ್ಟಿ ತಿಳಿಸಿದೆ. </p><p>ಪಹಲ್ಗಾಮ್ ಘಟನೆ ಬಳಿಕ ಕೇಂದ್ರ ಸರ್ಕಾರವು ಅಟ್ಟಾರಿ ಗಡಿ ಬಂದ್ ಸೇರಿ ಪಾಕಿಸ್ತಾನದ ಜೊತೆಗಿನ ಸಂಬಂಧವನ್ನು ಕಡಿತಗೊಳಿಸಿದೆ. ಇದಕ್ಕೆ ಪ್ರತಿಯಾಗಿ ಆ ದೇಶವೂ ಭಾರತದ ಜತೆಗಿನ ವ್ಯಾಪಾರ ಒಪ್ಪಂದಗಳನ್ನು ರದ್ದುಪಡಿಸಿದೆ.</p>.<p><strong>ಪತ್ರ ವ್ಯವಹಾರ ಅಮಾನತು</strong></p><p>ಪಾಕಿಸ್ತಾನದ ಜೊತೆಗಿನ ಎಲ್ಲ ಬಗೆಯ ಪತ್ರ ಮತ್ತು ಪಾರ್ಸೆಲ್ ವ್ಯವಹಾರಗಳನ್ನು ಭಾರತವು ಶನಿವಾರದಿಂದ ಅಮಾನತಿನಲ್ಲಿ ಇರಿಸಿದೆ. ಈ ಅಮಾನತು ಆದೇಶವು ವಾಯುಮಾರ್ಗದ ಮೂಲಕ, ರಸ್ತೆ ಮೂಲಕ ನಡೆಯುವ ಪತ್ರ, ಪಾರ್ಸೆಲ್ ವ್ಯವಹಾರಗಳಿಗೆ ಅನ್ವಯವಾಗುತ್ತದೆ. ಇದರ ಜೊತೆಯಲ್ಲೇ, ಪಾಕಿಸ್ತಾನದ ಯಾವುದೇ ಹಡಗು ಭಾರತದ ಬಂದರು ಪ್ರವೇಶಿಸುವಂತಿಲ್ಲ ಎಂದು ಕೂಡ ಆದೇಶಿಸಲಾಗಿದೆ.</p><p>ಸಂವಹನ ಸಚಿವಾಲಯದ ಅಧೀನದಲ್ಲಿ ಕಾರ್ಯಾಚರಣೆ ನಡೆಸುವ ಅಂಚೆ ಇಲಾಖೆಯು, ಪತ್ರ ಮತ್ತು ಪಾರ್ಸೆಲ್ ವ್ಯವಹಾರಗಳ ಅಮಾನತು ಆದೇಶ ಹೊರಡಿಸಿದೆ.</p><p>ಪಾಕಿಸ್ತಾನದ ಹಡಗುಗಳು ಭಾರತದ ಬಂದರು ಪ್ರವೇಶಿಸುವಂತಿಲ್ಲ ಎಂಬ ಆದೇಶ ಹೊರಡಿಸಿರುವುದಷ್ಟೇ ಅಲ್ಲದೆ, ಭಾರತದ ಹಡಗುಗಳು ಕೂಡ ಪಾಕಿಸ್ತಾನದ ಬಂದರಿಗೆ ತೆರಳುವಂತಿಲ್ಲ ಎಂದು ಆದೇಶಿಸಲಾಗಿದೆ. ಈ ಆದೇಶವು ತಕ್ಷಣದಿಂದಲೇ ಜಾರಿಗೆ ಬಂದಿದೆ. ‘ಭಾರತದ ಆಸ್ತಿಗಳು, ಸರಕುಗಳು ಮತ್ತು ಸಂಬಂಧಪಟ್ಟ ಮೂಲಸೌಕರ್ಯವನ್ನು ರಕ್ಷಿಸುವ ಉದ್ದೇಶದಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ’ ಎಂದು ಕೇಂದ್ರ ಹೇಳಿದೆ.</p>.Pahalgam Attack: ಸತತ 8ನೇ ದಿನವೂ ಪಾಕ್ನಿಂದ ಕದನ ವಿರಾಮ ಉಲ್ಲಂಘನೆ.Pahalgam Attack | ವಾತಾವರಣ ತಿಳಿಗೊಳಿಸಲು ಮುಂದಾಗುವಂತೆ ಅಮೆರಿಕ ಮನವಿ.Pahalgam Terror Attack: ಪಾಕ್ ವಿಮಾನಗಳಿಗೆ ಭಾರತ ವಾಯುಪ್ರದೇಶ ನಿರ್ಬಂಧ.Pahalgam Terror attack | ಪ್ರತೀಕಾರ: ಸೇನೆಗೆ ಸಂಪೂರ್ಣ ಅಧಿಕಾರ- ಪ್ರಧಾನಿ ಮೋದಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>