<p><strong>ಜಮ್ಮು :</strong> ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ಅಂತರರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನದ ಒಳನುಸುಳುಕೋರನ ಮೇಲೆ ಗಡಿ ಭದ್ರತಾ ಪಡೆ (ಬಿಎಸ್ಎಫ್) ಯೋಧರು ಗುಂಡಿನ ದಾಳಿ ನಡೆಸಿದ್ದು, ಮೃತದೇಹ ಪತ್ತೆಯಾಗಿದೆ.</p>.<p>‘ರಾಮಗಢ ಸೆಕ್ಟರ್ನ ಚೆಕ್ ಮಾಜ್ರ ಗಡಿ ಹೊರಠಾಣೆಯಲ್ಲಿ ಭಾರತದೊಳಗೆ ನುಸುಳಲು ಯತ್ನಿಸುತ್ತಿದ್ದ ವೇಳೆ ನುಸುಳುಕೋರನ ಮೇಲೆ ಗುಂಡಿನ ದಾಳಿ ನಡೆಸಲಾಗಿತ್ತು. ಕಾನೂನು ಪ್ರಕ್ರಿಯೆಗಳನ್ನು ಮುಗಿಸಿ ಆತನ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p class="bodytext">ಮೃತ ವ್ಯಕ್ತಿಯನ್ನು ಲಾಹೋರ್ ನಿವಾಸಿ ಮೊಹಮ್ಮದ್ ಆರೀಫ್ (61) ಎಂದು ಗುರುತಿಸಲಾಗಿದೆ. </p>.<p class="bodytext">‘ಗಡಿ ಗಸ್ತು ಕಾಯುತ್ತಿದ್ದ ವೇಳೆ ಕತ್ತಲಲ್ಲಿದ್ದ ವ್ಯಕ್ತಿಯೊಬ್ಬ ಅಡಗಿರುವುದನ್ನು ಗಮನಿಸಿದ್ದ ಯೋಧರು ಶರಣಾಗುವಂತೆ ಪದೇ ಪದೇ ಸೂಚನೆ ನೀಡಿದರು. ಆದೇಶ ಧಿಕ್ಕರಿಸಿದ ಕಾರಣ ಆರೀಫ್ ಮೇಲೆ ಗುಂಡಿನ ದಾಳಿ ನಡೆಸಲಾಯಿತು’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p class="bodytext">ಮತ್ತೊಂದು ಪ್ರತ್ಯೇಕ ಪ್ರಕರಣದಲ್ಲಿ ವಿಶೇಷ ಕಾರ್ಯಾಚರಣಾ ತಂಡ ಹಾಗೂ ಸ್ಥಳೀಯ ಪೊಲೀಸರು ದಾಬೋಹ್ ಗ್ರಾಮದಲ್ಲಿ ಶಂಕಿತ ವ್ಯಕ್ತಿಯೊಬ್ಬರನ್ನು ಬಂಧಿಸಿದ್ದಾರೆ. ಆರೋಪಿಯ ಮೊಬೈಲ್ನಲ್ಲಿ ಪಾಕಿಸ್ತಾನದ ಹಲವರ ದೂರವಾಣಿ ಸಂಖ್ಯೆಯೂ ಲಭ್ಯವಾಗಿದ್ದು, ಆರೋಪಿಯನ್ನು ಸಾಂಬಾ ಪೊಲೀಸ್ ಠಾಣೆಯಲ್ಲಿ ವಿಚಾರಣೆ ಮುಂದುವರಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಮ್ಮು :</strong> ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ಅಂತರರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನದ ಒಳನುಸುಳುಕೋರನ ಮೇಲೆ ಗಡಿ ಭದ್ರತಾ ಪಡೆ (ಬಿಎಸ್ಎಫ್) ಯೋಧರು ಗುಂಡಿನ ದಾಳಿ ನಡೆಸಿದ್ದು, ಮೃತದೇಹ ಪತ್ತೆಯಾಗಿದೆ.</p>.<p>‘ರಾಮಗಢ ಸೆಕ್ಟರ್ನ ಚೆಕ್ ಮಾಜ್ರ ಗಡಿ ಹೊರಠಾಣೆಯಲ್ಲಿ ಭಾರತದೊಳಗೆ ನುಸುಳಲು ಯತ್ನಿಸುತ್ತಿದ್ದ ವೇಳೆ ನುಸುಳುಕೋರನ ಮೇಲೆ ಗುಂಡಿನ ದಾಳಿ ನಡೆಸಲಾಗಿತ್ತು. ಕಾನೂನು ಪ್ರಕ್ರಿಯೆಗಳನ್ನು ಮುಗಿಸಿ ಆತನ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p class="bodytext">ಮೃತ ವ್ಯಕ್ತಿಯನ್ನು ಲಾಹೋರ್ ನಿವಾಸಿ ಮೊಹಮ್ಮದ್ ಆರೀಫ್ (61) ಎಂದು ಗುರುತಿಸಲಾಗಿದೆ. </p>.<p class="bodytext">‘ಗಡಿ ಗಸ್ತು ಕಾಯುತ್ತಿದ್ದ ವೇಳೆ ಕತ್ತಲಲ್ಲಿದ್ದ ವ್ಯಕ್ತಿಯೊಬ್ಬ ಅಡಗಿರುವುದನ್ನು ಗಮನಿಸಿದ್ದ ಯೋಧರು ಶರಣಾಗುವಂತೆ ಪದೇ ಪದೇ ಸೂಚನೆ ನೀಡಿದರು. ಆದೇಶ ಧಿಕ್ಕರಿಸಿದ ಕಾರಣ ಆರೀಫ್ ಮೇಲೆ ಗುಂಡಿನ ದಾಳಿ ನಡೆಸಲಾಯಿತು’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p class="bodytext">ಮತ್ತೊಂದು ಪ್ರತ್ಯೇಕ ಪ್ರಕರಣದಲ್ಲಿ ವಿಶೇಷ ಕಾರ್ಯಾಚರಣಾ ತಂಡ ಹಾಗೂ ಸ್ಥಳೀಯ ಪೊಲೀಸರು ದಾಬೋಹ್ ಗ್ರಾಮದಲ್ಲಿ ಶಂಕಿತ ವ್ಯಕ್ತಿಯೊಬ್ಬರನ್ನು ಬಂಧಿಸಿದ್ದಾರೆ. ಆರೋಪಿಯ ಮೊಬೈಲ್ನಲ್ಲಿ ಪಾಕಿಸ್ತಾನದ ಹಲವರ ದೂರವಾಣಿ ಸಂಖ್ಯೆಯೂ ಲಭ್ಯವಾಗಿದ್ದು, ಆರೋಪಿಯನ್ನು ಸಾಂಬಾ ಪೊಲೀಸ್ ಠಾಣೆಯಲ್ಲಿ ವಿಚಾರಣೆ ಮುಂದುವರಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>