<p><strong>ಶ್ರೀನಗರ:</strong> ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿ ಒಳನುಸುಳುವಿಕೆ ಯತ್ನವನ್ನುಈ ವರ್ಷ ಜೂನ್ವರೆಗೆ ಒಟ್ಟು 33 ಬಾರಿ ಪಾಕಿಸ್ತಾನ ನಡೆಸಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ತಿಳಿಸಿದೆ.</p>.<p>ಗಡಿ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವ ಅಜಯ್ ಭಟ್, ಭಾರತದ ಗಡಿ ನುಸುಳಲು ಯತ್ನಿಸಿದ ಪಾಕಿಸ್ತಾನದ 11 ಉಗ್ರರನ್ನು ಹತ್ಯೆ ಮಾಡಲಾಗಿದ್ದು, 20 ಉಗ್ರರನ್ನು ಸೆರೆ ಹಿಡಿಯಲಾಗಿದೆ. ಈ ವರ್ಷ ಚೀನಾದಿಂದ ಯಾವುದೇ ಗಡಿ ನುಸುಳುವಿಕೆ ಯತ್ನ ನಡೆದಿಲ್ಲ ಎಂದು ಉತ್ತರಿಸಿದರು.</p>.<p>ಭಾರತ ಮತ್ತು ಬಾಂಗ್ಲಾದೇಶದ ಗಡಿ ಕುರಿತು ಮಾತನಾಡಿದ ಅಜಯ್ ಭಟ್, ಈ ವರ್ಷ ಜೂನ್ ವರೆಗೆ ಬಾಂಗ್ಲಾದೇಶದಿಂದ ಒಟ್ಟು 441 ಒಳನುಸುಳುವಿಕೆ ಪ್ರಯತ್ನಗಳು ನಡೆದಿವೆ. ನೇಪಾಳ ಗಡಿಯಲ್ಲಿ 11 ಒಳನುಸುಳುಕೋರರನ್ನು ಬಂಧಿಸಲಾಗಿದೆ ಎಂದರು.</p>.<p>ಭಾರತ-ಮಾಯನ್ಮಾರ್ ಗಡಿಯಲ್ಲಿ, ಮಾಯನ್ಮಾರ್ನ8,486 ನಾಗರಿಕರು ಮತ್ತು ನಿರಾಶ್ರಿತರು ಭಾರತಕ್ಕೆ ಬಂದಿದ್ದಾರೆ. ಈ ಪೈತಿ 5,796 ಮಂದಿಯನ್ನು ಗಡಿಯಿಂದ ವಾಪಸ್ ಕಳುಹಿಸಲಾಗಿದೆ. 2,690 ಮಂದಿ ಭಾರತದಲ್ಲೇ ಉಳಿದುಕೊಂಡಿದ್ದಾರೆ ಎಂದು ಅಜಯ್ ಭಟ್ ಮಾಹಿತಿ ನೀಡಿದರು.</p>.<p><a href="https://www.prajavani.net/environment/animal-world/world-lion-day-lifestyle-and-food-habits-of-lion-856315.html" itemprop="url">ವಿಶ್ವ ಸಿಂಹ ದಿನ: ಸಿಂಹಗಳ ಕೌತುಕ ಜಗತ್ತಿನಲ್ಲೊಂದು ಸುತ್ತು </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ:</strong> ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿ ಒಳನುಸುಳುವಿಕೆ ಯತ್ನವನ್ನುಈ ವರ್ಷ ಜೂನ್ವರೆಗೆ ಒಟ್ಟು 33 ಬಾರಿ ಪಾಕಿಸ್ತಾನ ನಡೆಸಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ತಿಳಿಸಿದೆ.</p>.<p>ಗಡಿ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವ ಅಜಯ್ ಭಟ್, ಭಾರತದ ಗಡಿ ನುಸುಳಲು ಯತ್ನಿಸಿದ ಪಾಕಿಸ್ತಾನದ 11 ಉಗ್ರರನ್ನು ಹತ್ಯೆ ಮಾಡಲಾಗಿದ್ದು, 20 ಉಗ್ರರನ್ನು ಸೆರೆ ಹಿಡಿಯಲಾಗಿದೆ. ಈ ವರ್ಷ ಚೀನಾದಿಂದ ಯಾವುದೇ ಗಡಿ ನುಸುಳುವಿಕೆ ಯತ್ನ ನಡೆದಿಲ್ಲ ಎಂದು ಉತ್ತರಿಸಿದರು.</p>.<p>ಭಾರತ ಮತ್ತು ಬಾಂಗ್ಲಾದೇಶದ ಗಡಿ ಕುರಿತು ಮಾತನಾಡಿದ ಅಜಯ್ ಭಟ್, ಈ ವರ್ಷ ಜೂನ್ ವರೆಗೆ ಬಾಂಗ್ಲಾದೇಶದಿಂದ ಒಟ್ಟು 441 ಒಳನುಸುಳುವಿಕೆ ಪ್ರಯತ್ನಗಳು ನಡೆದಿವೆ. ನೇಪಾಳ ಗಡಿಯಲ್ಲಿ 11 ಒಳನುಸುಳುಕೋರರನ್ನು ಬಂಧಿಸಲಾಗಿದೆ ಎಂದರು.</p>.<p>ಭಾರತ-ಮಾಯನ್ಮಾರ್ ಗಡಿಯಲ್ಲಿ, ಮಾಯನ್ಮಾರ್ನ8,486 ನಾಗರಿಕರು ಮತ್ತು ನಿರಾಶ್ರಿತರು ಭಾರತಕ್ಕೆ ಬಂದಿದ್ದಾರೆ. ಈ ಪೈತಿ 5,796 ಮಂದಿಯನ್ನು ಗಡಿಯಿಂದ ವಾಪಸ್ ಕಳುಹಿಸಲಾಗಿದೆ. 2,690 ಮಂದಿ ಭಾರತದಲ್ಲೇ ಉಳಿದುಕೊಂಡಿದ್ದಾರೆ ಎಂದು ಅಜಯ್ ಭಟ್ ಮಾಹಿತಿ ನೀಡಿದರು.</p>.<p><a href="https://www.prajavani.net/environment/animal-world/world-lion-day-lifestyle-and-food-habits-of-lion-856315.html" itemprop="url">ವಿಶ್ವ ಸಿಂಹ ದಿನ: ಸಿಂಹಗಳ ಕೌತುಕ ಜಗತ್ತಿನಲ್ಲೊಂದು ಸುತ್ತು </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>