<p><strong>ಆಯೋಧ್ಯೆ:</strong> ಪಾಕಿಸ್ತಾನಕ್ಕೆ ಕೊನೆಗಾಲ ಹತ್ತಿರವಾಗುತ್ತಿದೆ ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೇಳಿದ್ದಾರೆ.</p><p>ಶುಕ್ರವಾರ ಆಯೋಧ್ಯೆಯ ಹನುಮಾನ್ಗಿರಿಯಲ್ಲಿ ಹನುಮಾನ್ ಮಂಟಪವನ್ನು ಉದ್ಘಾಟಿಸಿ ಮಾತನಾಡಿದರು.</p><p>ಭಾರತೀಯ ಸೇನೆಯು ಪಾಕಿಸ್ತಾನದ ಮೇಲೆ ದಾಳಿ ಮಾಡಿಲ್ಲ. ಪಾಕಿಸ್ತಾನವೇ ನಮ್ಮ ಅಮಾಯಕ ಜನರ ಧರ್ಮವನ್ನು ಕೇಳಿ ಅವರನ್ನು ಗುಂಡಿಟ್ಟು ಕೊಂದಿದೆ ಎಂದರು.</p><p>ಭಾರತೀಯ ಸೇನೆಯ ಪ್ರತಿಕಾರದ ದಾಳಿಯಲ್ಲಿ 124 ಉಗ್ರಗಾಮಿಗಳು ಮೃತಪಟ್ಟಿದ್ದಾರೆ. ಇದರಲ್ಲಿ ಭಾರತದ ತಪ್ಪಿಲ್ಲ, ಬದಲಾಗಿ ಭಯೋತ್ಪಾದಕರಿಗೆ ಆಶ್ರಯ ಕೊಡುತ್ತಿರುವ ಪಾಕಿಸ್ತಾನಿಯರು ಘಟನೆಯ ಹೊಣೆ ಹೊರಬೇಕು ಎಂದು ತಿಳಿಸಿದರು.</p> .ಪಾಕಿಸ್ತಾನ ಅಣೆಕಟ್ಟೆ ಕಾಮಗಾರಿಗೆ ವೇಗ: ಚೀನಾ ಘೋಷಣೆ.<p>ಅವರು ಭಯೋತ್ಪಾದನೆಯನ್ನು ಪ್ರೋತ್ಸಾಹಿಸುತ್ತಿದ್ದಾರೆ, ಮುಂದೊಂದು ದಿನ ಅದೇ ಪಾಕಿಸ್ತಾನವನ್ನು ನಾಶಮಾಡಲಿದೆ ಎಂದರು.</p><p>‘ಇದು ಹೊಸ ಭಾರತ. ನಾವು ಯಾರ ತಂಟೆಗೂ ಹೋಗುವುದಿಲ್ಲ, ನಮ್ಮ ತಂಟೆಗೆ ಬಂದವರನ್ನು ಸುಮ್ಮನೆ ಬಿಡುವುದಿಲ್ಲ’ ಎಂದು ಗುಡುಗಿದರು.</p><p>ಕೇಂದ್ರ ಹಾಗೂ ರಾಜ್ಯದಲ್ಲಿ ಡಬಲ್ ಎಂಜಿನ್ ಸರ್ಕಾರವಿರುವುದರಿಂದ ಆಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಸಾಧ್ಯವಾಯಿತು. ನರೇಂದ್ರ ಮೋದಿಯವರ ದೂರದೃಷ್ಠಿಯ ನಾಯಕತ್ವ ಇದಕ್ಕೆ ಕಾರಣ ಎಂದು ಹೊಗಳಿದರು.</p><p>ಆಯೋಧ್ಯೆಯ ಕೀರ್ತಿ ಪತಾಕೆಯನ್ನು ಉಳಿಸಿಕೊಂಡು ಹೋಗುತ್ತಿರುವುದಕ್ಕೆ ಅಲ್ಲಿನ ಸಾಧುಗಳಿಗೆ ಕೃತಜ್ಞತೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆಯೋಧ್ಯೆ:</strong> ಪಾಕಿಸ್ತಾನಕ್ಕೆ ಕೊನೆಗಾಲ ಹತ್ತಿರವಾಗುತ್ತಿದೆ ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೇಳಿದ್ದಾರೆ.</p><p>ಶುಕ್ರವಾರ ಆಯೋಧ್ಯೆಯ ಹನುಮಾನ್ಗಿರಿಯಲ್ಲಿ ಹನುಮಾನ್ ಮಂಟಪವನ್ನು ಉದ್ಘಾಟಿಸಿ ಮಾತನಾಡಿದರು.</p><p>ಭಾರತೀಯ ಸೇನೆಯು ಪಾಕಿಸ್ತಾನದ ಮೇಲೆ ದಾಳಿ ಮಾಡಿಲ್ಲ. ಪಾಕಿಸ್ತಾನವೇ ನಮ್ಮ ಅಮಾಯಕ ಜನರ ಧರ್ಮವನ್ನು ಕೇಳಿ ಅವರನ್ನು ಗುಂಡಿಟ್ಟು ಕೊಂದಿದೆ ಎಂದರು.</p><p>ಭಾರತೀಯ ಸೇನೆಯ ಪ್ರತಿಕಾರದ ದಾಳಿಯಲ್ಲಿ 124 ಉಗ್ರಗಾಮಿಗಳು ಮೃತಪಟ್ಟಿದ್ದಾರೆ. ಇದರಲ್ಲಿ ಭಾರತದ ತಪ್ಪಿಲ್ಲ, ಬದಲಾಗಿ ಭಯೋತ್ಪಾದಕರಿಗೆ ಆಶ್ರಯ ಕೊಡುತ್ತಿರುವ ಪಾಕಿಸ್ತಾನಿಯರು ಘಟನೆಯ ಹೊಣೆ ಹೊರಬೇಕು ಎಂದು ತಿಳಿಸಿದರು.</p> .ಪಾಕಿಸ್ತಾನ ಅಣೆಕಟ್ಟೆ ಕಾಮಗಾರಿಗೆ ವೇಗ: ಚೀನಾ ಘೋಷಣೆ.<p>ಅವರು ಭಯೋತ್ಪಾದನೆಯನ್ನು ಪ್ರೋತ್ಸಾಹಿಸುತ್ತಿದ್ದಾರೆ, ಮುಂದೊಂದು ದಿನ ಅದೇ ಪಾಕಿಸ್ತಾನವನ್ನು ನಾಶಮಾಡಲಿದೆ ಎಂದರು.</p><p>‘ಇದು ಹೊಸ ಭಾರತ. ನಾವು ಯಾರ ತಂಟೆಗೂ ಹೋಗುವುದಿಲ್ಲ, ನಮ್ಮ ತಂಟೆಗೆ ಬಂದವರನ್ನು ಸುಮ್ಮನೆ ಬಿಡುವುದಿಲ್ಲ’ ಎಂದು ಗುಡುಗಿದರು.</p><p>ಕೇಂದ್ರ ಹಾಗೂ ರಾಜ್ಯದಲ್ಲಿ ಡಬಲ್ ಎಂಜಿನ್ ಸರ್ಕಾರವಿರುವುದರಿಂದ ಆಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಸಾಧ್ಯವಾಯಿತು. ನರೇಂದ್ರ ಮೋದಿಯವರ ದೂರದೃಷ್ಠಿಯ ನಾಯಕತ್ವ ಇದಕ್ಕೆ ಕಾರಣ ಎಂದು ಹೊಗಳಿದರು.</p><p>ಆಯೋಧ್ಯೆಯ ಕೀರ್ತಿ ಪತಾಕೆಯನ್ನು ಉಳಿಸಿಕೊಂಡು ಹೋಗುತ್ತಿರುವುದಕ್ಕೆ ಅಲ್ಲಿನ ಸಾಧುಗಳಿಗೆ ಕೃತಜ್ಞತೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>