<p><strong>ಶ್ರೀನಗರ:</strong> ‘ಪಾಕಿಸ್ತಾನದಂತಹ ಪುಂಡ ಮತ್ತು ಬೇಜವಾಬ್ದಾರಿ ರಾಷ್ಟ್ರದ ಕೈಯಲ್ಲಿ ಅಣ್ವಸ್ತ್ರಗಳು ಸುರಕ್ಷಿತವಾಗಿರಲು ಸಾಧ್ಯವಿಲ್ಲ. ಆದ್ದರಿಂದ ಆ ರಾಷ್ಟ್ರದ ಅಣ್ವಸ್ತ್ರಗಳು ಅಂತರರಾಷ್ಟ್ರೀಯ ಅಣು ಶಕ್ತಿ ಸಂಸ್ಥೆಯ (ಐಎಇಎ) ನಿಗಾದಲ್ಲಿರಬೇಕು’ ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್ ಗುರುವಾರ ಆಗ್ರಹಿಸಿದ್ದಾರೆ.</p><p>‘ಪಾಕಿಸ್ತಾನದ ಅಣ್ವಸ್ತ್ರ ಬೆದರಿಕೆ ನಡೆಯದು’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಎಚ್ಚರಿಸಿದ ಕೆಲ ದಿನಗಳ ಬಳಿಕ ರಕ್ಷಣಾ ಸಚಿವರ ಹೇಳಿಕೆ ಹೊರಬಿದ್ದಿದೆ.</p><p>‘ಆಪರೇಷನ್ ಸಿಂಧೂರ’ ನಂತರ ಜಮ್ಮು ಮತ್ತು ಕಾಶ್ಮೀರಕ್ಕೆ ಮೊದಲ ಭೇಟಿ ನೀಡಿದ ರಾಜನಾಥ, ‘ಪಾಕಿಸ್ತಾನದ ಅಣ್ವಸ್ತ್ರ ಬೆದರಿಕೆಯನ್ನು ಭಾರತವು ಕಡೆಗಣಿಸಿದೆ ಎಂಬ ಅಂಶವು, ಭಯೋತ್ಪಾದನೆಯ ವಿರುದ್ಧ ದೇಶದ ಸಂಕಲ್ಪ ಎಷ್ಟು ಪ್ರಬಲವಾಗಿದೆ ಎಂಬುದನ್ನು ತೋರಿಸಿಕೊಟ್ಟಿದೆ’ ಎಂದರು.</p><p>‘ಪಾಕಿಸ್ತಾನವು ಎಷ್ಟೊಂದು ಬೇಜವಾಬ್ದಾರಿಯಿಂದ ಭಾರತಕ್ಕೆ ಹಲವಾರು ಬಾರಿ ಅಣ್ವಸ್ತ್ರ ದಾಳಿಯ ಬೆದರಿಕೆ ಹಾಕಿದೆ ಎಂಬುದನ್ನು ಇಡೀ ಜಗತ್ತು ನೋಡಿದೆ’ ಎಂದು ಅವರು ಸೈನಿಕರೊಂದಿಗೆ ಸಂವಾದದಲ್ಲಿ ಹೇಳಿದರು.</p><p>‘ಶ್ರೀನಗರದ ನೆಲದಿಂದ ನಾನು ಜಗತ್ತಿನೆದುರು ಒಂದು ಪ್ರಶ್ನೆಯನ್ನಿಡಲು ಬಯಸುತ್ತೇನೆ. ಅಂತಹ ಬೇಜವಾಬ್ದಾರಿ ಮತ್ತು ಪುಂಡ ರಾಷ್ಟ್ರದ ಕೈಯಲ್ಲಿ ಅಣ್ವಸ್ತ್ರಗಳು ಸುರಕ್ಷಿತವಾಗಿರಲಿವೆಯೇ?’ ಎಂದರು.</p><p>‘ಅಪರೇಷನ್ ಸಿಂಧೂರ’ವು ಭಾರತ ತನ್ನ ಇತಿಹಾಸದಲ್ಲಿ ಭಯೋತ್ಪಾದನೆಯ ವಿರುದ್ಧ ಕೈಗೊಂಡ ಅತಿದೊಡ್ಡ ಕಾರ್ಯಾಚರಣೆ ಎಂದು ರಕ್ಷಣಾ ಸಚಿವರು ಬಣ್ಣಿಸಿದರು.</p><p>‘ಕಳೆದ 35-40 ವರ್ಷಗಳಿಂದ ನಾವು ಗಡಿಯಾಚೆಗಿನ ಭಯೋತ್ಪಾದನೆಯನ್ನು ಎದುರಿಸುತ್ತಿದ್ದೇವೆ.<br>ಭಯೋತ್ಪಾದನೆಯ ವಿರುದ್ಧ ಯಾವುದೇ ರೀತಿಯ ಹೋರಾಟಕ್ಕೂ ಸಿದ್ಧ ಎಂಬುದನ್ನು ಭಾರತವು ಜಗತ್ತಿಗೆ ತೋರಿಸಿಕೊಟ್ಟಿದೆ’ ಎಂದು ಹೇಳಿದರು.</p><p>‘ಅವರು ನಮ್ಮ ಹಣೆಯ ಮೇಲೆ ದಾಳಿ ಮಾಡಿದರು. ನಾವು ಅವರ ಎದೆಯ ಮೇಲೆ ಗಾಯ ಮಾಡಿದ್ದೇವೆ. ಈಗ ಆಗಿರುವ ಗಾಯಗಳನ್ನು ಗುಣಪಡಿಸಲು ಪಾಕಿಸ್ತಾನದ ಮುಂದಿರುವ ಏಕೈಕ ಮಾರ್ಗವೆಂದರೆ, ಭಯೋತ್ಪಾದಕರಿಗೆ ಮತ್ತು ಭಯೋತ್ಪಾದಕ ಸಂಘಟನೆಗಳಿಗೆ ಬೆಂಬಲ ನೀಡುವುದನ್ನು ನಿಲ್ಲಿಸುವುದು ಆಗಿದೆ’ ಎಂದರು.</p><p><strong>ವಿಕಿರಣ ಸೋರಿಕೆಯಾಗಿಲ್ಲ: </strong>ಎಐಇಎ</p><p>ನವದೆಹಲಿ: ಭಾರತದೊಂದಿಗೆ ಈಚೆಗೆ ನಡೆದ ಸೇನಾ ಸಂಘರ್ಷದ ಸಂದರ್ಭದಲ್ಲಿ ಪಾಕಿಸ್ತಾನದಲ್ಲಿ ಯಾವುದೇ ಅಣು ಘಟಕದಿಂದ ವಿಕಿರಣ ಸೋರಿಕೆಯಾಗಿಲ್ಲ ಎಂದು ಎಐಇಎ ಹೇಳಿದೆ.</p><p>‘ಆಪರೇಷನ್ ಸಿಂಧೂರ’ ಸಂದರ್ಭದಲ್ಲಿ ಭಾರತದ ಸಶಸ್ತ್ರ ಪಡೆಗಳು ಪಾಕಿಸ್ತಾನದ ಅಣು ಘಟಕಗಳನ್ನು ಗುರಿಯಾಗಿಸಿವೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ವದಂತಿ ಹಬ್ಬಿರುವ ಬೆನ್ನಲ್ಲೇ ಎಐಇಎ ಹೇಳಿಕೆ<br>ಬಂದಿದೆ.</p><p>‘ಐಎಇಎಗೆ ಲಭ್ಯವಿರುವ ಮಾಹಿತಿಯ ಆಧಾರದ ಮೇಲೆ, ಪಾಕಿಸ್ತಾನದಲ್ಲಿ ಯಾವುದೇ ಅಣು ಘಟಕದಿಂದ ವಿಕಿರಣ ಸೋರಿಕೆ ಅಥವಾ ಬಿಡುಗಡೆಯಾಗಿಲ್ಲ’ ಎಂದು ಐಎಇಎ ವಕ್ತಾರರು ತಿಳಿಸಿದ್ದಾರೆ.</p>.<div><blockquote>ಪಹಲ್ಗಾಮ್ ಭಯೋತ್ಪಾದಕ ದಾಳಿ ಮೂಲಕ ದೇಶದ ಜನರ ಒಗ್ಗಟ್ಟನ್ನು ಒಡೆಯುವ ಪ್ರಯತ್ನ ನಡೆದಿದೆ</blockquote><span class="attribution">ರಾಜನಾಥ ಸಿಂಗ್, ರಕ್ಷಣಾ ಸಚಿವ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ:</strong> ‘ಪಾಕಿಸ್ತಾನದಂತಹ ಪುಂಡ ಮತ್ತು ಬೇಜವಾಬ್ದಾರಿ ರಾಷ್ಟ್ರದ ಕೈಯಲ್ಲಿ ಅಣ್ವಸ್ತ್ರಗಳು ಸುರಕ್ಷಿತವಾಗಿರಲು ಸಾಧ್ಯವಿಲ್ಲ. ಆದ್ದರಿಂದ ಆ ರಾಷ್ಟ್ರದ ಅಣ್ವಸ್ತ್ರಗಳು ಅಂತರರಾಷ್ಟ್ರೀಯ ಅಣು ಶಕ್ತಿ ಸಂಸ್ಥೆಯ (ಐಎಇಎ) ನಿಗಾದಲ್ಲಿರಬೇಕು’ ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್ ಗುರುವಾರ ಆಗ್ರಹಿಸಿದ್ದಾರೆ.</p><p>‘ಪಾಕಿಸ್ತಾನದ ಅಣ್ವಸ್ತ್ರ ಬೆದರಿಕೆ ನಡೆಯದು’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಎಚ್ಚರಿಸಿದ ಕೆಲ ದಿನಗಳ ಬಳಿಕ ರಕ್ಷಣಾ ಸಚಿವರ ಹೇಳಿಕೆ ಹೊರಬಿದ್ದಿದೆ.</p><p>‘ಆಪರೇಷನ್ ಸಿಂಧೂರ’ ನಂತರ ಜಮ್ಮು ಮತ್ತು ಕಾಶ್ಮೀರಕ್ಕೆ ಮೊದಲ ಭೇಟಿ ನೀಡಿದ ರಾಜನಾಥ, ‘ಪಾಕಿಸ್ತಾನದ ಅಣ್ವಸ್ತ್ರ ಬೆದರಿಕೆಯನ್ನು ಭಾರತವು ಕಡೆಗಣಿಸಿದೆ ಎಂಬ ಅಂಶವು, ಭಯೋತ್ಪಾದನೆಯ ವಿರುದ್ಧ ದೇಶದ ಸಂಕಲ್ಪ ಎಷ್ಟು ಪ್ರಬಲವಾಗಿದೆ ಎಂಬುದನ್ನು ತೋರಿಸಿಕೊಟ್ಟಿದೆ’ ಎಂದರು.</p><p>‘ಪಾಕಿಸ್ತಾನವು ಎಷ್ಟೊಂದು ಬೇಜವಾಬ್ದಾರಿಯಿಂದ ಭಾರತಕ್ಕೆ ಹಲವಾರು ಬಾರಿ ಅಣ್ವಸ್ತ್ರ ದಾಳಿಯ ಬೆದರಿಕೆ ಹಾಕಿದೆ ಎಂಬುದನ್ನು ಇಡೀ ಜಗತ್ತು ನೋಡಿದೆ’ ಎಂದು ಅವರು ಸೈನಿಕರೊಂದಿಗೆ ಸಂವಾದದಲ್ಲಿ ಹೇಳಿದರು.</p><p>‘ಶ್ರೀನಗರದ ನೆಲದಿಂದ ನಾನು ಜಗತ್ತಿನೆದುರು ಒಂದು ಪ್ರಶ್ನೆಯನ್ನಿಡಲು ಬಯಸುತ್ತೇನೆ. ಅಂತಹ ಬೇಜವಾಬ್ದಾರಿ ಮತ್ತು ಪುಂಡ ರಾಷ್ಟ್ರದ ಕೈಯಲ್ಲಿ ಅಣ್ವಸ್ತ್ರಗಳು ಸುರಕ್ಷಿತವಾಗಿರಲಿವೆಯೇ?’ ಎಂದರು.</p><p>‘ಅಪರೇಷನ್ ಸಿಂಧೂರ’ವು ಭಾರತ ತನ್ನ ಇತಿಹಾಸದಲ್ಲಿ ಭಯೋತ್ಪಾದನೆಯ ವಿರುದ್ಧ ಕೈಗೊಂಡ ಅತಿದೊಡ್ಡ ಕಾರ್ಯಾಚರಣೆ ಎಂದು ರಕ್ಷಣಾ ಸಚಿವರು ಬಣ್ಣಿಸಿದರು.</p><p>‘ಕಳೆದ 35-40 ವರ್ಷಗಳಿಂದ ನಾವು ಗಡಿಯಾಚೆಗಿನ ಭಯೋತ್ಪಾದನೆಯನ್ನು ಎದುರಿಸುತ್ತಿದ್ದೇವೆ.<br>ಭಯೋತ್ಪಾದನೆಯ ವಿರುದ್ಧ ಯಾವುದೇ ರೀತಿಯ ಹೋರಾಟಕ್ಕೂ ಸಿದ್ಧ ಎಂಬುದನ್ನು ಭಾರತವು ಜಗತ್ತಿಗೆ ತೋರಿಸಿಕೊಟ್ಟಿದೆ’ ಎಂದು ಹೇಳಿದರು.</p><p>‘ಅವರು ನಮ್ಮ ಹಣೆಯ ಮೇಲೆ ದಾಳಿ ಮಾಡಿದರು. ನಾವು ಅವರ ಎದೆಯ ಮೇಲೆ ಗಾಯ ಮಾಡಿದ್ದೇವೆ. ಈಗ ಆಗಿರುವ ಗಾಯಗಳನ್ನು ಗುಣಪಡಿಸಲು ಪಾಕಿಸ್ತಾನದ ಮುಂದಿರುವ ಏಕೈಕ ಮಾರ್ಗವೆಂದರೆ, ಭಯೋತ್ಪಾದಕರಿಗೆ ಮತ್ತು ಭಯೋತ್ಪಾದಕ ಸಂಘಟನೆಗಳಿಗೆ ಬೆಂಬಲ ನೀಡುವುದನ್ನು ನಿಲ್ಲಿಸುವುದು ಆಗಿದೆ’ ಎಂದರು.</p><p><strong>ವಿಕಿರಣ ಸೋರಿಕೆಯಾಗಿಲ್ಲ: </strong>ಎಐಇಎ</p><p>ನವದೆಹಲಿ: ಭಾರತದೊಂದಿಗೆ ಈಚೆಗೆ ನಡೆದ ಸೇನಾ ಸಂಘರ್ಷದ ಸಂದರ್ಭದಲ್ಲಿ ಪಾಕಿಸ್ತಾನದಲ್ಲಿ ಯಾವುದೇ ಅಣು ಘಟಕದಿಂದ ವಿಕಿರಣ ಸೋರಿಕೆಯಾಗಿಲ್ಲ ಎಂದು ಎಐಇಎ ಹೇಳಿದೆ.</p><p>‘ಆಪರೇಷನ್ ಸಿಂಧೂರ’ ಸಂದರ್ಭದಲ್ಲಿ ಭಾರತದ ಸಶಸ್ತ್ರ ಪಡೆಗಳು ಪಾಕಿಸ್ತಾನದ ಅಣು ಘಟಕಗಳನ್ನು ಗುರಿಯಾಗಿಸಿವೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ವದಂತಿ ಹಬ್ಬಿರುವ ಬೆನ್ನಲ್ಲೇ ಎಐಇಎ ಹೇಳಿಕೆ<br>ಬಂದಿದೆ.</p><p>‘ಐಎಇಎಗೆ ಲಭ್ಯವಿರುವ ಮಾಹಿತಿಯ ಆಧಾರದ ಮೇಲೆ, ಪಾಕಿಸ್ತಾನದಲ್ಲಿ ಯಾವುದೇ ಅಣು ಘಟಕದಿಂದ ವಿಕಿರಣ ಸೋರಿಕೆ ಅಥವಾ ಬಿಡುಗಡೆಯಾಗಿಲ್ಲ’ ಎಂದು ಐಎಇಎ ವಕ್ತಾರರು ತಿಳಿಸಿದ್ದಾರೆ.</p>.<div><blockquote>ಪಹಲ್ಗಾಮ್ ಭಯೋತ್ಪಾದಕ ದಾಳಿ ಮೂಲಕ ದೇಶದ ಜನರ ಒಗ್ಗಟ್ಟನ್ನು ಒಡೆಯುವ ಪ್ರಯತ್ನ ನಡೆದಿದೆ</blockquote><span class="attribution">ರಾಜನಾಥ ಸಿಂಗ್, ರಕ್ಷಣಾ ಸಚಿವ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>