<p><strong>ಜಮ್ಮು</strong>: ಭವಿಷ್ಯದಲ್ಲಿ ಯಾವುದೇ ದುಸ್ಸಾಹಸಕ್ಕೆ ಕೈಹಾಕಿದರೆ ‘ಭಯೋತ್ಪಾದಕ ದೇಶ’ವನ್ನು ಭಾರತೀಯ ಶಶಸ್ತ್ರ ಪಡೆಗಳು ನಾಶಪಡಿಸುವುದು ಖಚಿತವೆಂದು ಪಾಕಿಸ್ತಾನಕ್ಕೆ ಎಚ್ಚರಿಕೆ ಕೊಡಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಲೆಪ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಭಾನುವಾರ ಹೇಳಿದ್ದಾರೆ.</p><p>ಇಲ್ಲಿ ನಡೆದ ಅಖಿಲ ಜಮ್ಮು–ಕಾಶ್ಮೀರ ಜಾಟ್ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಜಮ್ಮು ಮತ್ತು ಕಾಶ್ಮೀರವನ್ನು ಭಯೋತ್ಪಾದನೆಯಿಂದ ಸಂಪೂರ್ಣ ಮುಕ್ತಗೊಳಿಸುವ ಸರ್ಕಾರದ ಸಂಕಲ್ಪವನ್ನು ಪುನರುಚ್ಚರಿಸಿದರು. ಅಲ್ಲದೆ, ಸಶಸ್ತ್ರ ಪಡೆಗಳ ಶೌರ್ಯವನ್ನು ಶ್ಲಾಘಿಸಿದರು.</p><p>‘ಭಯೋತ್ಪಾದಕರು ಮತ್ತು ಅವರ ಬೆಂಬಲಿಗರು ಬೇರೆ ಬೇರೆಯಲ್ಲ. ಅವರ ಕೃತ್ಯಗಳಿಗೆ ಒಂದೇ ರೀತಿಯ ಶಿಕ್ಷೆ ಕಟ್ಟಿಟ್ಟಬುತ್ತಿ’ ಎಂದು ಎಚ್ಚರಿಕೆ ನೀಡಿದರು.</p><p>ದೇಶದಲ್ಲಿ ಶಾಂತಿ ಮತ್ತು ಸಹಬಾಳ್ವೆಗೆ ಧಕ್ಕೆ ತರುತ್ತಿರುವ ವಿಭಜಕ ಶಕ್ತಿಗಳ ವಿರುದ್ಧ ಹೋರಾಡಲು ದೃಢಸಂಕಲ್ಪ ಮಾಡುವಂತೆ ಮತ್ತು ಒಗ್ಗಟ್ಟಾಗಲು ಜಾಟ್ ಸಮುದಾಯವು ಸೇರಿ ಸಮಾಜದ ಎಲ್ಲಾ ವರ್ಗಗಳಿಗೆ ಅವರು ಮನವಿ ಮಾಡಿದರು.</p><p>‘ನಮ್ಮ ದೇಶದ ಗಡಿಯ ಬಳಿ ಜಾಟ್ ಸಮುದಾಯದವರು ಗಣನೀಯ ಜನಸಂಖ್ಯೆಯಲ್ಲಿ ವಾಸಿಸುತ್ತಿದ್ದು, ಅವರನ್ನು ದೇಶದ ಮೊದಲ ರಕ್ಷಣಾ ರೇಖೆಯನ್ನಾಗಿ ಗುರುತಿಸಲಾಗುತ್ತಿದೆ. ಮಾತೃಭೂಮಿಯ ಬಗೆಗಿನ ನಿಮ್ಮ ಭಕ್ತಿ ಸಮಾಜದಲ್ಲಿ ರಾಷ್ಟ್ರೀಯತೆಯ ಮನೋಭಾವವನ್ನು ಗಾಢವಾಗಿಸಿದೆ. ಈ ಬಗ್ಗೆ ನನಗೆ ಅಪಾರ ಹೆಮ್ಮೆ ಇದೆ. ಈ ಸವಾಲಿನ ಸಮಯದಲ್ಲಿ, ರಾಷ್ಟ್ರೀಯ ಏಕತೆಯನ್ನು ಎತ್ತಿಹಿಡಿಯುವಲ್ಲಿ ನಿಮ್ಮ ಜವಾಬ್ದಾರಿ ಹಿಂದೆಂದಿಗಿಂತಲೂ ಈಗ ಹೆಚ್ಚು ನಿರ್ಣಾಯಕವಾಗಿದೆ’ ಎಂದು ಸಿನ್ಹಾ ಹೇಳಿದರು.</p><p>ಗಡಿಯಲ್ಲಿ ತೊಂದರೆಗೆ ಒಳಗಾಗಿರುವ ಸಂತ್ರಸ್ತ ಕುಟುಂಬಗಳಿಗೆ ಸೂಕ್ತ ಪುನರ್ವಸತಿ ಕಲ್ಪಿಸಲು ಭಾರತ ಸರ್ಕಾರ ಬದ್ಧವಾಗಿದೆ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಮ್ಮು</strong>: ಭವಿಷ್ಯದಲ್ಲಿ ಯಾವುದೇ ದುಸ್ಸಾಹಸಕ್ಕೆ ಕೈಹಾಕಿದರೆ ‘ಭಯೋತ್ಪಾದಕ ದೇಶ’ವನ್ನು ಭಾರತೀಯ ಶಶಸ್ತ್ರ ಪಡೆಗಳು ನಾಶಪಡಿಸುವುದು ಖಚಿತವೆಂದು ಪಾಕಿಸ್ತಾನಕ್ಕೆ ಎಚ್ಚರಿಕೆ ಕೊಡಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಲೆಪ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಭಾನುವಾರ ಹೇಳಿದ್ದಾರೆ.</p><p>ಇಲ್ಲಿ ನಡೆದ ಅಖಿಲ ಜಮ್ಮು–ಕಾಶ್ಮೀರ ಜಾಟ್ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಜಮ್ಮು ಮತ್ತು ಕಾಶ್ಮೀರವನ್ನು ಭಯೋತ್ಪಾದನೆಯಿಂದ ಸಂಪೂರ್ಣ ಮುಕ್ತಗೊಳಿಸುವ ಸರ್ಕಾರದ ಸಂಕಲ್ಪವನ್ನು ಪುನರುಚ್ಚರಿಸಿದರು. ಅಲ್ಲದೆ, ಸಶಸ್ತ್ರ ಪಡೆಗಳ ಶೌರ್ಯವನ್ನು ಶ್ಲಾಘಿಸಿದರು.</p><p>‘ಭಯೋತ್ಪಾದಕರು ಮತ್ತು ಅವರ ಬೆಂಬಲಿಗರು ಬೇರೆ ಬೇರೆಯಲ್ಲ. ಅವರ ಕೃತ್ಯಗಳಿಗೆ ಒಂದೇ ರೀತಿಯ ಶಿಕ್ಷೆ ಕಟ್ಟಿಟ್ಟಬುತ್ತಿ’ ಎಂದು ಎಚ್ಚರಿಕೆ ನೀಡಿದರು.</p><p>ದೇಶದಲ್ಲಿ ಶಾಂತಿ ಮತ್ತು ಸಹಬಾಳ್ವೆಗೆ ಧಕ್ಕೆ ತರುತ್ತಿರುವ ವಿಭಜಕ ಶಕ್ತಿಗಳ ವಿರುದ್ಧ ಹೋರಾಡಲು ದೃಢಸಂಕಲ್ಪ ಮಾಡುವಂತೆ ಮತ್ತು ಒಗ್ಗಟ್ಟಾಗಲು ಜಾಟ್ ಸಮುದಾಯವು ಸೇರಿ ಸಮಾಜದ ಎಲ್ಲಾ ವರ್ಗಗಳಿಗೆ ಅವರು ಮನವಿ ಮಾಡಿದರು.</p><p>‘ನಮ್ಮ ದೇಶದ ಗಡಿಯ ಬಳಿ ಜಾಟ್ ಸಮುದಾಯದವರು ಗಣನೀಯ ಜನಸಂಖ್ಯೆಯಲ್ಲಿ ವಾಸಿಸುತ್ತಿದ್ದು, ಅವರನ್ನು ದೇಶದ ಮೊದಲ ರಕ್ಷಣಾ ರೇಖೆಯನ್ನಾಗಿ ಗುರುತಿಸಲಾಗುತ್ತಿದೆ. ಮಾತೃಭೂಮಿಯ ಬಗೆಗಿನ ನಿಮ್ಮ ಭಕ್ತಿ ಸಮಾಜದಲ್ಲಿ ರಾಷ್ಟ್ರೀಯತೆಯ ಮನೋಭಾವವನ್ನು ಗಾಢವಾಗಿಸಿದೆ. ಈ ಬಗ್ಗೆ ನನಗೆ ಅಪಾರ ಹೆಮ್ಮೆ ಇದೆ. ಈ ಸವಾಲಿನ ಸಮಯದಲ್ಲಿ, ರಾಷ್ಟ್ರೀಯ ಏಕತೆಯನ್ನು ಎತ್ತಿಹಿಡಿಯುವಲ್ಲಿ ನಿಮ್ಮ ಜವಾಬ್ದಾರಿ ಹಿಂದೆಂದಿಗಿಂತಲೂ ಈಗ ಹೆಚ್ಚು ನಿರ್ಣಾಯಕವಾಗಿದೆ’ ಎಂದು ಸಿನ್ಹಾ ಹೇಳಿದರು.</p><p>ಗಡಿಯಲ್ಲಿ ತೊಂದರೆಗೆ ಒಳಗಾಗಿರುವ ಸಂತ್ರಸ್ತ ಕುಟುಂಬಗಳಿಗೆ ಸೂಕ್ತ ಪುನರ್ವಸತಿ ಕಲ್ಪಿಸಲು ಭಾರತ ಸರ್ಕಾರ ಬದ್ಧವಾಗಿದೆ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>