<p><strong>ಲಖನೌ</strong>: ‘ವೈಟ್ ಕಾಲರ್ ಭಯೋತ್ಪಾದನೆ ಮಾದರಿ’ಯ ಸದಸ್ಯೆ ಎಂಬ ಶಂಕೆಯ ಮೇಲೆ ಬಂಧನದಲ್ಲಿರುವ ವೈದ್ಯೆ ಶಾಹೀನ್ ಸಯೀದ್ ಪಾಕಿಸ್ತಾನದ ಸೇನಾ ವೈದ್ಯರೊಂದಿಗೆ ಸಂಪರ್ಕ ಹೊಂದಿದ್ದಳು ಮತ್ತು ದೇಶದ ವಿವಿಧೆಡೆ ಬಾಂಬ್ ದಾಳಿ ನಡೆಸಿ ವಿದೇಶಕ್ಕೆ ಪಲಾಯನ ಮಾಡುವ ಯೋಜನೆ ಹೊಂದಿದ್ದಳು.</p><p>ಶಾಹೀನ್ ಸಹೋದರ ಡಾ.ಪರ್ವೇಜ್ ಅಹ್ಮದ್ನನ್ನೂ ಇದೇ ಆರೋಪಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದೆ. ಶಾಹೀನ್, ಉತ್ತರ ಪ್ರದೇಶದಲ್ಲಿ ಕೆಲಸ ಮಾಡುವ ಜಮ್ಮು ಮತ್ತು ಕಾಶ್ಮೀರದ 10ಕ್ಕೂ ಹೆಚ್ಚು ವೈದ್ಯರು ಮತ್ತು ವೈದ್ಯ ವಿದ್ಯಾರ್ಥಿಗಳನ್ನು ತನ್ನ ಜಾಲಕ್ಕೆ ಸೆಳೆಯಲು ಯತ್ನಿಸಿದ್ದಳು ಎಂದು ಮೂಲಗಳು ತಿಳಿಸಿವೆ.</p><p>ಜೆಇಎಂ ಮುಖ್ಯಸ್ಥ ಮಸೂದ್ ಅಜರ್ ಸಹೋದರಿ ಸಹೀದಾ ಅಜರ್ ಜತೆ ಶಾಹೀನ್ ಸಂಪರ್ಕ ಹೊಂದಿದ್ದಳು. ಸಹೀದಾ ನಿರ್ದೇಶನದಂತೆ ಭಯೋತ್ಪಾದನೆ ಸಂಘಟನೆಯ ಮಹಿಳಾ ಘಟಕ ಸ್ಥಾಪಿಸುವ ಮತ್ತು ಅದರ ಜಾಲವನ್ನು ಕೆಲ ದೇಶಗಳಿಗೂ ವಿಸ್ತರಿಸುವ ಯೋಜನೆ ಹೊಂದಿದ್ದಳು ಎಂದು ತಿಳಿಸಿವೆ.</p><p>ಶಾಹೀನ್ ಬಳಸುತ್ತಿದ್ದ ಮೊಬೈಲ್ ಫೋನ್ನಲ್ಲಿದ್ದ ಸಿಮ್ ಕಾರ್ಡ್ ಅನ್ನು ಪಡೆಯಲು ನಕಲಿ ವಿಳಾಸ ನೀಡಲಾಗಿದೆ. ಸಿಮ್ ಪಡೆಯಲು ಫರೀದಾಬಾದ್ ಜಿಲ್ಲೆಯ ಮಸೀದಿಯ ವಿಳಾಸ ನೀಡಲಾಗಿದೆ. ಶಾಹೀನ್, ಥಾಯ್ಲೆಂಡ್ಗೂ ಪ್ರವಾಸ ಮಾಡಿ ಬಂದ ಮಾಹಿತಿ ಲಭ್ಯವಾಗಿದೆ ಎಂದು ತಿಳಿಸಿವೆ.</p><p>ಕಳೆದ ನಾಲ್ಕು ವರ್ಷಗಳಿಂದ ವೈಟ್ ಕಾಲರ್ ಭಯೋತ್ಪಾದನಾ ಮಾದರಿ ಸಕ್ರಿಯಗೊಂಡಿದ್ದು, ಭಾರತದ ಪ್ರಮುಖ ಧಾರ್ಮಿಕ ಸ್ಥಳಗಳು ಮತ್ತು ರಾಷ್ಟ್ರ ರಾಜಧಾನಿಯೇ ಅದರ ಗುರಿಯಾಗಿತ್ತು.</p><p><strong>ಎಂಬಿಬಿಎಸ್ ವಿದ್ಯಾರ್ಥಿ ಬಂಧನ</strong></p><p>ಭಯೋತ್ಪಾದಕ ಸಂಘಟನೆಗಳೊಂದಿಗೆ ನಂಟು ಹೊಂದಿರುವ ಆರೋಪದ ಮೇಲೆ ಎಂಬಿಬಿಎಸ್ ವಿದ್ಯಾರ್ಥಿಯೊಬ್ಬನನ್ನು ಪಶ್ಚಿಮ ಬಂಗಾಳದ ಉತ್ತರ ದಿನಾಜಪುರ ಜಿಲ್ಲೆಯಲ್ಲಿ ರಾಷ್ಟ್ರೀಯ ತನಿಖಾ ದಳವು (ಎನ್ಐಎ) ಬಂಧಿಸಿದೆ.</p><p>‘ಆರೋಪಿಯನ್ನು ಜಾನಿಸೂರ್ ಆಲಮ್ ಅಲಿಯಾಸ್ ನಿಸಾರ್ ಆಲಮ್ ಎಂದು ಗುರುತಿಸಲಾಗಿದೆ. ಈತ ಹರಿಯಾಣದ ಅಲ್ ಫಲಾಹ್ ವಿಶ್ವವಿದ್ಯಾಲಯದ ಎಂಬಿಬಿಎಸ್ ವಿದ್ಯಾರ್ಥಿಯಾಗಿದ್ದು, ಲೂಧಿಯಾನದಲ್ಲಿ ನೆಲಸಿದ್ದ’ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>ವಿವಾಹ ಕಾರ್ಯಕ್ರಮದಲ್ಲಿ ಭಾಗಿಯಾಗಿ ವಾಪಸ್ ತೆರಳುವ ಸಂದರ್ಭದಲ್ಲಿ ಉತ್ತರ ದಿನಾಜಪುರದ ಸುರ್ಜಾಪುರ ಬಜಾರ್ನಲ್ಲಿ ಶುಕ್ರವಾರ ಬಂಧಿಸಲಾಗಿದೆ ಎಂದು ತಿಳಿಸಿದರು.</p><p>ಇತ್ತೀಚೆಗೆ ದೆಹಲಿಯ ಕೆಂಪುಕೋಟೆ ಸಮೀಪ ಸಂಭವಿಸಿದ ಕಾರು ಸ್ಫೋಟ ಪ್ರಕರಣದಲ್ಲಿ ಈತ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ ಎಂದು ತಿಳಿಸಿದರು.</p><p>‘ಜಾನಿಸೂರ್, ಠಾಣೆ ಸಮೀಪ ಅನುಮಾನಾಸ್ಪದ ರೀತಿಯಲ್ಲಿ ಅಡ್ಡಾಡುತ್ತಿದ್ದ. ಬಳಿಕ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುವಾಗ ಪರಾರಿಯಾಗಲು ಯತ್ನಿಸಿದ್ದ. ಆತನ ಬಳಿ ಇದ್ದ ಡಿಜಿಟಲ್ ಸಾಧನಗಳು ಮತ್ತು ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ’ ಎಂದು ಎನ್ಐಎ ಮೂಲಗಳು ತಿಳಿಸಿವೆ.</p><p>ಹೆಚ್ಚಿನ ವಿಚಾರಣೆಗಾಗಿ ಆರೋಪಿಯನ್ನು ಸಿಲಿಗುಡಿ ಠಾಣೆಗೆ ಕರೆದೊಯ್ಯಲಾಗಿದೆ.</p><p>ಆಲಮ್ ಮೇಲಿನ ಆರೋಪಗಳನ್ನು ಅಲ್ಲಗಳೆದಿರುವ ಕುಟುಂಬಸ್ಥರು, ‘ಅಲಾಮ್ ಮೃದು ಸ್ವಭಾವದ ಸಭ್ಯ ವ್ಯಕ್ತಿ. ಯಾವಾಗಲೂ ಓದಿನ ಕಡೆಗೇ ಗಮನ ನೀಡುತ್ತಿದ್ದ. ಯಾವುದೇ ಉಗ್ರ ಸಂಘಟನೆಯೊಂದಿಗೆ ಆತ ನಂಟು ಹೊಂದಿಲ್ಲ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ</strong>: ‘ವೈಟ್ ಕಾಲರ್ ಭಯೋತ್ಪಾದನೆ ಮಾದರಿ’ಯ ಸದಸ್ಯೆ ಎಂಬ ಶಂಕೆಯ ಮೇಲೆ ಬಂಧನದಲ್ಲಿರುವ ವೈದ್ಯೆ ಶಾಹೀನ್ ಸಯೀದ್ ಪಾಕಿಸ್ತಾನದ ಸೇನಾ ವೈದ್ಯರೊಂದಿಗೆ ಸಂಪರ್ಕ ಹೊಂದಿದ್ದಳು ಮತ್ತು ದೇಶದ ವಿವಿಧೆಡೆ ಬಾಂಬ್ ದಾಳಿ ನಡೆಸಿ ವಿದೇಶಕ್ಕೆ ಪಲಾಯನ ಮಾಡುವ ಯೋಜನೆ ಹೊಂದಿದ್ದಳು.</p><p>ಶಾಹೀನ್ ಸಹೋದರ ಡಾ.ಪರ್ವೇಜ್ ಅಹ್ಮದ್ನನ್ನೂ ಇದೇ ಆರೋಪಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದೆ. ಶಾಹೀನ್, ಉತ್ತರ ಪ್ರದೇಶದಲ್ಲಿ ಕೆಲಸ ಮಾಡುವ ಜಮ್ಮು ಮತ್ತು ಕಾಶ್ಮೀರದ 10ಕ್ಕೂ ಹೆಚ್ಚು ವೈದ್ಯರು ಮತ್ತು ವೈದ್ಯ ವಿದ್ಯಾರ್ಥಿಗಳನ್ನು ತನ್ನ ಜಾಲಕ್ಕೆ ಸೆಳೆಯಲು ಯತ್ನಿಸಿದ್ದಳು ಎಂದು ಮೂಲಗಳು ತಿಳಿಸಿವೆ.</p><p>ಜೆಇಎಂ ಮುಖ್ಯಸ್ಥ ಮಸೂದ್ ಅಜರ್ ಸಹೋದರಿ ಸಹೀದಾ ಅಜರ್ ಜತೆ ಶಾಹೀನ್ ಸಂಪರ್ಕ ಹೊಂದಿದ್ದಳು. ಸಹೀದಾ ನಿರ್ದೇಶನದಂತೆ ಭಯೋತ್ಪಾದನೆ ಸಂಘಟನೆಯ ಮಹಿಳಾ ಘಟಕ ಸ್ಥಾಪಿಸುವ ಮತ್ತು ಅದರ ಜಾಲವನ್ನು ಕೆಲ ದೇಶಗಳಿಗೂ ವಿಸ್ತರಿಸುವ ಯೋಜನೆ ಹೊಂದಿದ್ದಳು ಎಂದು ತಿಳಿಸಿವೆ.</p><p>ಶಾಹೀನ್ ಬಳಸುತ್ತಿದ್ದ ಮೊಬೈಲ್ ಫೋನ್ನಲ್ಲಿದ್ದ ಸಿಮ್ ಕಾರ್ಡ್ ಅನ್ನು ಪಡೆಯಲು ನಕಲಿ ವಿಳಾಸ ನೀಡಲಾಗಿದೆ. ಸಿಮ್ ಪಡೆಯಲು ಫರೀದಾಬಾದ್ ಜಿಲ್ಲೆಯ ಮಸೀದಿಯ ವಿಳಾಸ ನೀಡಲಾಗಿದೆ. ಶಾಹೀನ್, ಥಾಯ್ಲೆಂಡ್ಗೂ ಪ್ರವಾಸ ಮಾಡಿ ಬಂದ ಮಾಹಿತಿ ಲಭ್ಯವಾಗಿದೆ ಎಂದು ತಿಳಿಸಿವೆ.</p><p>ಕಳೆದ ನಾಲ್ಕು ವರ್ಷಗಳಿಂದ ವೈಟ್ ಕಾಲರ್ ಭಯೋತ್ಪಾದನಾ ಮಾದರಿ ಸಕ್ರಿಯಗೊಂಡಿದ್ದು, ಭಾರತದ ಪ್ರಮುಖ ಧಾರ್ಮಿಕ ಸ್ಥಳಗಳು ಮತ್ತು ರಾಷ್ಟ್ರ ರಾಜಧಾನಿಯೇ ಅದರ ಗುರಿಯಾಗಿತ್ತು.</p><p><strong>ಎಂಬಿಬಿಎಸ್ ವಿದ್ಯಾರ್ಥಿ ಬಂಧನ</strong></p><p>ಭಯೋತ್ಪಾದಕ ಸಂಘಟನೆಗಳೊಂದಿಗೆ ನಂಟು ಹೊಂದಿರುವ ಆರೋಪದ ಮೇಲೆ ಎಂಬಿಬಿಎಸ್ ವಿದ್ಯಾರ್ಥಿಯೊಬ್ಬನನ್ನು ಪಶ್ಚಿಮ ಬಂಗಾಳದ ಉತ್ತರ ದಿನಾಜಪುರ ಜಿಲ್ಲೆಯಲ್ಲಿ ರಾಷ್ಟ್ರೀಯ ತನಿಖಾ ದಳವು (ಎನ್ಐಎ) ಬಂಧಿಸಿದೆ.</p><p>‘ಆರೋಪಿಯನ್ನು ಜಾನಿಸೂರ್ ಆಲಮ್ ಅಲಿಯಾಸ್ ನಿಸಾರ್ ಆಲಮ್ ಎಂದು ಗುರುತಿಸಲಾಗಿದೆ. ಈತ ಹರಿಯಾಣದ ಅಲ್ ಫಲಾಹ್ ವಿಶ್ವವಿದ್ಯಾಲಯದ ಎಂಬಿಬಿಎಸ್ ವಿದ್ಯಾರ್ಥಿಯಾಗಿದ್ದು, ಲೂಧಿಯಾನದಲ್ಲಿ ನೆಲಸಿದ್ದ’ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>ವಿವಾಹ ಕಾರ್ಯಕ್ರಮದಲ್ಲಿ ಭಾಗಿಯಾಗಿ ವಾಪಸ್ ತೆರಳುವ ಸಂದರ್ಭದಲ್ಲಿ ಉತ್ತರ ದಿನಾಜಪುರದ ಸುರ್ಜಾಪುರ ಬಜಾರ್ನಲ್ಲಿ ಶುಕ್ರವಾರ ಬಂಧಿಸಲಾಗಿದೆ ಎಂದು ತಿಳಿಸಿದರು.</p><p>ಇತ್ತೀಚೆಗೆ ದೆಹಲಿಯ ಕೆಂಪುಕೋಟೆ ಸಮೀಪ ಸಂಭವಿಸಿದ ಕಾರು ಸ್ಫೋಟ ಪ್ರಕರಣದಲ್ಲಿ ಈತ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ ಎಂದು ತಿಳಿಸಿದರು.</p><p>‘ಜಾನಿಸೂರ್, ಠಾಣೆ ಸಮೀಪ ಅನುಮಾನಾಸ್ಪದ ರೀತಿಯಲ್ಲಿ ಅಡ್ಡಾಡುತ್ತಿದ್ದ. ಬಳಿಕ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುವಾಗ ಪರಾರಿಯಾಗಲು ಯತ್ನಿಸಿದ್ದ. ಆತನ ಬಳಿ ಇದ್ದ ಡಿಜಿಟಲ್ ಸಾಧನಗಳು ಮತ್ತು ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ’ ಎಂದು ಎನ್ಐಎ ಮೂಲಗಳು ತಿಳಿಸಿವೆ.</p><p>ಹೆಚ್ಚಿನ ವಿಚಾರಣೆಗಾಗಿ ಆರೋಪಿಯನ್ನು ಸಿಲಿಗುಡಿ ಠಾಣೆಗೆ ಕರೆದೊಯ್ಯಲಾಗಿದೆ.</p><p>ಆಲಮ್ ಮೇಲಿನ ಆರೋಪಗಳನ್ನು ಅಲ್ಲಗಳೆದಿರುವ ಕುಟುಂಬಸ್ಥರು, ‘ಅಲಾಮ್ ಮೃದು ಸ್ವಭಾವದ ಸಭ್ಯ ವ್ಯಕ್ತಿ. ಯಾವಾಗಲೂ ಓದಿನ ಕಡೆಗೇ ಗಮನ ನೀಡುತ್ತಿದ್ದ. ಯಾವುದೇ ಉಗ್ರ ಸಂಘಟನೆಯೊಂದಿಗೆ ಆತ ನಂಟು ಹೊಂದಿಲ್ಲ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>