<p class="title"><strong>ಶ್ರೀನಗರ:</strong> ‘ಭಾರತದ ಸಾರ್ವಭೌಮತೆ ಮತ್ತು ಏಕತೆಗೆ ಭಂಗ ತರುವ ಯತ್ನಗಳು ನಡೆದಲ್ಲಿ ಅದಕ್ಕೆ ತಕ್ಕ ಪ್ರತ್ಯುತ್ತರ ನೀಡಲಾಗುತ್ತದೆ’ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪಾಕಿಸ್ತಾನಕ್ಕೆ ಎಚ್ಚರಿಸಿದ್ದಾರೆ.</p>.<p class="title">ಗಡಿಯಲ್ಲಿ ಒಳನುಸುಳುವಿಕೆ ಮತ್ತು ಭಯೋತ್ಪಾದಕ ಕೃತ್ಯಗಳ ಮೂಲಕ ಜಮ್ಮು ಮತ್ತು ಕಾಶ್ಮೀರದಲ್ಲಿ ಶಾಂತಿ ಪರಿಸ್ಥಿತಿಯನ್ನು ಕದಡಲು ಪಾಕಿಸ್ತಾನವು ನಿರಂತರವಾಗಿ ಯತ್ನಿಸುತ್ತಿದೆ ಎಂದೂ ಇದೇ ಸಂದರ್ಭದಲ್ಲಿ ಅವರು ಆರೋಪಿಸಿದರು.</p>.<p class="title">ಬಾರಾಮುಲ್ಲಾ ಜಿಲ್ಲೆಯಲ್ಲಿ ಸೇನಾ ಪಡೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ‘ನೆರೆರಾಷ್ಟ್ರವು ನಿರಂತರವಾಗಿ ಭಾರತ ವಿರೋಧಿ ಕೃತ್ಯಗಳಲ್ಲಿ ತೊಡಗಿದೆ. ಆದರೆ, ಶಾಂತಿ ಕದಡುವ ಇಂಥ ಕೃತ್ಯಗಳಿಗೆ ಪ್ರತ್ಯುತ್ತರ ನೀಡಲು ಸೇನೆ ಸನ್ನದ್ಧವಾಗಿದೆ’ ಎಂದು ಹೇಳಿದರು.</p>.<p>ಇತ್ತೀಚಿನ ದಿನಗಳಲ್ಲಿ ಭಯೋತ್ಪಾದನಾ ಕೃತ್ಯಗಳು ತಗ್ಗಿವೆ. ಇದಕ್ಕೆ ಸೇನಾ ಪಡೆಗಳು, ಬಿಎಸ್ಎಫ್, ಸಿಆರ್ಪಿಎಫ್, ಜಮ್ಮು ಮತ್ತು ಕಾಶ್ಮೀರ ಪೊಲೀಸರ ಅವಿರತ ಶ್ರಮವು ಕಾರಣವಾಗಿದೆ ಎಂದು ಸಚಿವರು ಶ್ಲಾಘಿಸಿದರು.</p>.<p>ಭೂಸೇನೆಯ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ, ಸೇನಾ ಪ್ರಮುಖರಾದ ಲೆಫ್ಟಿನಂಟ್ ಜನರಲ್ ಉಪೇಂದ್ರ ದ್ವಿವೇದಿ, ಲೆಫ್ಟಿನಂಟ್ ಜನರಲ್ ಅಹುಜಾ, ಮೇಜರ್ ಜನರಲ್ ಅಜಯ್ ಚಾಂದ್ಪುರಿಯಾ ಅವರೂ ಸಚಿವರ ಜೊತೆಗಿದ್ದರು.</p>.<p>ವಿಶ್ವಕ್ಕೆ ‘ವಸುದೈವ ಕುಟುಂಬಕಂ’ ಭಾರತ ಎಂದಿಗೂ ಶಾಂತಿಪ್ರಿಯ ರಾಷ್ಟ್ರ. ಯಾವುದೇ ರಾಷ್ಟ್ರಕ್ಕೆ ಯಾವುದೇ ರೀತಿ ನೋವುಂಟು ಮಾಡಲು ಭಾರತ ಯತ್ನಿಸಿಲ್ಲ ಅಥವಾ ಯಾವುದೇ ದೇಶದ ಒಂದಿಂಚೂ ಭೂಮಿಯನ್ನು ಕಬಳಿಸಿಲ್ಲ ಎಂದು ಹೇಳಿದರು.</p>.<p>ಭವಿಷ್ಯದ ಸವಾಲುಗಳನ್ನು ಸೇನಾಪಡೆಗಳು ತನ್ನ ಪೂರ್ಣ ಸಾಮರ್ಥ್ಯದೊಂದಿಗೆ ಎದುರಿಸುವ ವಿಶ್ವಾಸವಿದೆ ಎಂದು ಆಶಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಶ್ರೀನಗರ:</strong> ‘ಭಾರತದ ಸಾರ್ವಭೌಮತೆ ಮತ್ತು ಏಕತೆಗೆ ಭಂಗ ತರುವ ಯತ್ನಗಳು ನಡೆದಲ್ಲಿ ಅದಕ್ಕೆ ತಕ್ಕ ಪ್ರತ್ಯುತ್ತರ ನೀಡಲಾಗುತ್ತದೆ’ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪಾಕಿಸ್ತಾನಕ್ಕೆ ಎಚ್ಚರಿಸಿದ್ದಾರೆ.</p>.<p class="title">ಗಡಿಯಲ್ಲಿ ಒಳನುಸುಳುವಿಕೆ ಮತ್ತು ಭಯೋತ್ಪಾದಕ ಕೃತ್ಯಗಳ ಮೂಲಕ ಜಮ್ಮು ಮತ್ತು ಕಾಶ್ಮೀರದಲ್ಲಿ ಶಾಂತಿ ಪರಿಸ್ಥಿತಿಯನ್ನು ಕದಡಲು ಪಾಕಿಸ್ತಾನವು ನಿರಂತರವಾಗಿ ಯತ್ನಿಸುತ್ತಿದೆ ಎಂದೂ ಇದೇ ಸಂದರ್ಭದಲ್ಲಿ ಅವರು ಆರೋಪಿಸಿದರು.</p>.<p class="title">ಬಾರಾಮುಲ್ಲಾ ಜಿಲ್ಲೆಯಲ್ಲಿ ಸೇನಾ ಪಡೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ‘ನೆರೆರಾಷ್ಟ್ರವು ನಿರಂತರವಾಗಿ ಭಾರತ ವಿರೋಧಿ ಕೃತ್ಯಗಳಲ್ಲಿ ತೊಡಗಿದೆ. ಆದರೆ, ಶಾಂತಿ ಕದಡುವ ಇಂಥ ಕೃತ್ಯಗಳಿಗೆ ಪ್ರತ್ಯುತ್ತರ ನೀಡಲು ಸೇನೆ ಸನ್ನದ್ಧವಾಗಿದೆ’ ಎಂದು ಹೇಳಿದರು.</p>.<p>ಇತ್ತೀಚಿನ ದಿನಗಳಲ್ಲಿ ಭಯೋತ್ಪಾದನಾ ಕೃತ್ಯಗಳು ತಗ್ಗಿವೆ. ಇದಕ್ಕೆ ಸೇನಾ ಪಡೆಗಳು, ಬಿಎಸ್ಎಫ್, ಸಿಆರ್ಪಿಎಫ್, ಜಮ್ಮು ಮತ್ತು ಕಾಶ್ಮೀರ ಪೊಲೀಸರ ಅವಿರತ ಶ್ರಮವು ಕಾರಣವಾಗಿದೆ ಎಂದು ಸಚಿವರು ಶ್ಲಾಘಿಸಿದರು.</p>.<p>ಭೂಸೇನೆಯ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ, ಸೇನಾ ಪ್ರಮುಖರಾದ ಲೆಫ್ಟಿನಂಟ್ ಜನರಲ್ ಉಪೇಂದ್ರ ದ್ವಿವೇದಿ, ಲೆಫ್ಟಿನಂಟ್ ಜನರಲ್ ಅಹುಜಾ, ಮೇಜರ್ ಜನರಲ್ ಅಜಯ್ ಚಾಂದ್ಪುರಿಯಾ ಅವರೂ ಸಚಿವರ ಜೊತೆಗಿದ್ದರು.</p>.<p>ವಿಶ್ವಕ್ಕೆ ‘ವಸುದೈವ ಕುಟುಂಬಕಂ’ ಭಾರತ ಎಂದಿಗೂ ಶಾಂತಿಪ್ರಿಯ ರಾಷ್ಟ್ರ. ಯಾವುದೇ ರಾಷ್ಟ್ರಕ್ಕೆ ಯಾವುದೇ ರೀತಿ ನೋವುಂಟು ಮಾಡಲು ಭಾರತ ಯತ್ನಿಸಿಲ್ಲ ಅಥವಾ ಯಾವುದೇ ದೇಶದ ಒಂದಿಂಚೂ ಭೂಮಿಯನ್ನು ಕಬಳಿಸಿಲ್ಲ ಎಂದು ಹೇಳಿದರು.</p>.<p>ಭವಿಷ್ಯದ ಸವಾಲುಗಳನ್ನು ಸೇನಾಪಡೆಗಳು ತನ್ನ ಪೂರ್ಣ ಸಾಮರ್ಥ್ಯದೊಂದಿಗೆ ಎದುರಿಸುವ ವಿಶ್ವಾಸವಿದೆ ಎಂದು ಆಶಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>