<p><strong>ನವದೆಹಲಿ:</strong> ವಿಶ್ವಸಂಸ್ಥೆಯ 15 ಸದಸ್ಯರ ಭದ್ರತಾ ಮಂಡಳಿಯ ಭಯೋತ್ಪಾದನಾ ನಿಗ್ರಹ ಸಮಿತಿಯ ಉಪಾಧ್ಯಕ್ಷ ಸ್ಥಾನ ಹಾಗೂ ಮತ್ತೊಂದು ಸಮಿತಿಯ ಅಧ್ಯಕ್ಷ ಸ್ಥಾನವನ್ನು ಪಾಕಿಸ್ತಾನಕ್ಕೆ ನೀಡಿರುವುದು ‘ದುರದೃಷ್ಟಕರ’ ಎಂದು ಕಾಂಗ್ರೆಸ್ ಗುರುವಾರ ಹೇಳಿದೆ.</p>.<p>ಪಕ್ಷವು ಈ ಬೆಳವಣಿಗೆಯನ್ನು ‘ನಮ್ಮ ವಿದೇಶಾಂಗ ನೀತಿಯ ವೈಫಲ್ಯ’ದ ದುಃಖಕರ ಕಥೆ ಎಂದು ಬಣ್ಣಿಸಿದೆ. ಅದೇ ವೇಳೆ, ಭಯೋತ್ಪಾದನೆಗೆ ಪ್ರಾಯೋಜಕತ್ವ ವಹಿಸಿರುವ ಪಾಕಿಸ್ತಾನವನ್ನು ಜಾಗತಿಕ ಸಮುದಾಯವು ಒಪ್ಪಿಕೊಂಡಿರುವುದಾದರೂ ಹೇಗೆ ಎಂದೂ ಪ್ರಶ್ನಿಸಿದೆ.</p>.<p>ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಜಾಗತಿಕ ಸಮುದಾಯವು ಭಾರತ ಮತ್ತು ಪಾಕಿಸ್ತಾನವನ್ನು ಸಮಾನವಾಗಿ ಕಾಣದಂತೆ ಮಾಡಲು ಸರ್ಕಾರವು ದೃಢ ರಾಜತಾಂತ್ರಿಕ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.</p>.<p>ಪಾಕಿಸ್ತಾನವನ್ನು ಅದು ಮಾಡಿರುವ ಪಾಪಗಳಿಗೆ ಹೊಣೆಗಾರರನ್ನಾಗಿ ಮಾಡುವುದು ಭಾರತಕ್ಕೆ ಮಾತ್ರವಲ್ಲ, ಜಾಗತಿಕ ಸಮುದಾಯದ ಹಿತಾಸಕ್ತಿಗಳಿಗೂ ಅಗತ್ಯವಾಗಿದೆ ಎಂದು ಪ್ರತಿಪಾದಿಸಿದರು.</p>.<p>ತಾಲಿಬಾನ್ ನಿರ್ಬಂಧದ ವಿಶ್ವಸಂಸ್ಥೆಯ ಸಮಿತಿಯ ಅಧ್ಯಕ್ಷ ಸ್ಥಾನ ಮತ್ತು ಭದ್ರತಾ ಮಂಡಳಿಯ ಭಯೋತ್ಪಾದನಾ ನಿಗ್ರಹ ಸಮಿತಿಯ ಉಪಾಧ್ಯಕ್ಷ ಸ್ಥಾನವನ್ನು ಪಾಕಿಸ್ತಾನಕ್ಕೆ ವಹಿಸಿರುವ ಬೆಳವಣಿಗೆಗಳ ಬೆನ್ನಲ್ಲೇ ಖರ್ಗೆ ಅವರು ಹೇಳಿಕೆ ನೀಡಿದ್ದಾರೆ.</p>.<p>‘ಪಾಕಿಸ್ತಾನವು ಭಯೋತ್ಪಾದನೆ ಕೃತ್ಯದಲ್ಲಿ ತೊಡಗಿದೆಯಾದರೆ, ಭಾರತವು ಭಯೋತ್ಪಾದನೆಯ ಬಲಿಪಶು. ಆದ್ದರಿಂದ, ಜಾಗತಿಕ ಸಮುದಾಯವು ಈ ಎರಡು ದೇಶಗಳನ್ನು ಸಮಾನವಾಗಿ ಕಾಣಲು ಸಾಧ್ಯವಿಲ್ಲ. ಇದಕ್ಕಾಗಿ ಸೂಕ್ತ ಮತ್ತು ದೃಢವಾದ ರಾಜತಾಂತ್ರಿಕ ಕ್ರಮಗಳನ್ನು ತೆಗೆದುಕೊಳ್ಳುವಂತೆ ಜವಾಬ್ದಾರಿಯುತ ವಿರೋಧ ಪಕ್ಷವಾಗಿ ನಾವು ಸರ್ಕಾರವನ್ನು ಒತ್ತಾಯಿಸುತ್ತೇವೆ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ವಿಶ್ವಸಂಸ್ಥೆಯ 15 ಸದಸ್ಯರ ಭದ್ರತಾ ಮಂಡಳಿಯ ಭಯೋತ್ಪಾದನಾ ನಿಗ್ರಹ ಸಮಿತಿಯ ಉಪಾಧ್ಯಕ್ಷ ಸ್ಥಾನ ಹಾಗೂ ಮತ್ತೊಂದು ಸಮಿತಿಯ ಅಧ್ಯಕ್ಷ ಸ್ಥಾನವನ್ನು ಪಾಕಿಸ್ತಾನಕ್ಕೆ ನೀಡಿರುವುದು ‘ದುರದೃಷ್ಟಕರ’ ಎಂದು ಕಾಂಗ್ರೆಸ್ ಗುರುವಾರ ಹೇಳಿದೆ.</p>.<p>ಪಕ್ಷವು ಈ ಬೆಳವಣಿಗೆಯನ್ನು ‘ನಮ್ಮ ವಿದೇಶಾಂಗ ನೀತಿಯ ವೈಫಲ್ಯ’ದ ದುಃಖಕರ ಕಥೆ ಎಂದು ಬಣ್ಣಿಸಿದೆ. ಅದೇ ವೇಳೆ, ಭಯೋತ್ಪಾದನೆಗೆ ಪ್ರಾಯೋಜಕತ್ವ ವಹಿಸಿರುವ ಪಾಕಿಸ್ತಾನವನ್ನು ಜಾಗತಿಕ ಸಮುದಾಯವು ಒಪ್ಪಿಕೊಂಡಿರುವುದಾದರೂ ಹೇಗೆ ಎಂದೂ ಪ್ರಶ್ನಿಸಿದೆ.</p>.<p>ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಜಾಗತಿಕ ಸಮುದಾಯವು ಭಾರತ ಮತ್ತು ಪಾಕಿಸ್ತಾನವನ್ನು ಸಮಾನವಾಗಿ ಕಾಣದಂತೆ ಮಾಡಲು ಸರ್ಕಾರವು ದೃಢ ರಾಜತಾಂತ್ರಿಕ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.</p>.<p>ಪಾಕಿಸ್ತಾನವನ್ನು ಅದು ಮಾಡಿರುವ ಪಾಪಗಳಿಗೆ ಹೊಣೆಗಾರರನ್ನಾಗಿ ಮಾಡುವುದು ಭಾರತಕ್ಕೆ ಮಾತ್ರವಲ್ಲ, ಜಾಗತಿಕ ಸಮುದಾಯದ ಹಿತಾಸಕ್ತಿಗಳಿಗೂ ಅಗತ್ಯವಾಗಿದೆ ಎಂದು ಪ್ರತಿಪಾದಿಸಿದರು.</p>.<p>ತಾಲಿಬಾನ್ ನಿರ್ಬಂಧದ ವಿಶ್ವಸಂಸ್ಥೆಯ ಸಮಿತಿಯ ಅಧ್ಯಕ್ಷ ಸ್ಥಾನ ಮತ್ತು ಭದ್ರತಾ ಮಂಡಳಿಯ ಭಯೋತ್ಪಾದನಾ ನಿಗ್ರಹ ಸಮಿತಿಯ ಉಪಾಧ್ಯಕ್ಷ ಸ್ಥಾನವನ್ನು ಪಾಕಿಸ್ತಾನಕ್ಕೆ ವಹಿಸಿರುವ ಬೆಳವಣಿಗೆಗಳ ಬೆನ್ನಲ್ಲೇ ಖರ್ಗೆ ಅವರು ಹೇಳಿಕೆ ನೀಡಿದ್ದಾರೆ.</p>.<p>‘ಪಾಕಿಸ್ತಾನವು ಭಯೋತ್ಪಾದನೆ ಕೃತ್ಯದಲ್ಲಿ ತೊಡಗಿದೆಯಾದರೆ, ಭಾರತವು ಭಯೋತ್ಪಾದನೆಯ ಬಲಿಪಶು. ಆದ್ದರಿಂದ, ಜಾಗತಿಕ ಸಮುದಾಯವು ಈ ಎರಡು ದೇಶಗಳನ್ನು ಸಮಾನವಾಗಿ ಕಾಣಲು ಸಾಧ್ಯವಿಲ್ಲ. ಇದಕ್ಕಾಗಿ ಸೂಕ್ತ ಮತ್ತು ದೃಢವಾದ ರಾಜತಾಂತ್ರಿಕ ಕ್ರಮಗಳನ್ನು ತೆಗೆದುಕೊಳ್ಳುವಂತೆ ಜವಾಬ್ದಾರಿಯುತ ವಿರೋಧ ಪಕ್ಷವಾಗಿ ನಾವು ಸರ್ಕಾರವನ್ನು ಒತ್ತಾಯಿಸುತ್ತೇವೆ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>