ಲಾಹೋರ್: ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಮಾನವರಹಿತ ಕ್ರಾಸಿಂಗ್ನಲ್ಲಿ ಶುಕ್ರವಾರ ರೈಲು ಮತ್ತು ಮಿನಿ ಬಸ್ ಡಿಕ್ಕಿಯಾಗಿ 29 ಮಂದಿ ಮೃತಪಟ್ಟಿದ್ದಾರೆ.
ಪಂಜಾಬ್ನ ನಂಕಾನಾ ಸಾಹಿಬ್ನಿಂದ ಹಿಂತಿರುಗುತ್ತಿದ್ದ ಸಿಖ್ ಯಾತ್ರಾರ್ಥಿಗಳಿದ್ದ ಮಿನಿ ಬಸ್,ಕರಾಚಿಯಿಂದ ಲಾಹೋರ್ಗೆ ಬರುತ್ತಿದ್ದ ಷಾ ಹುಸೇನ್ ಏಕ್ಸ್ಪ್ರೆಸ್ಗೆಫಾರೂಕ್ಬಾದ್ನಲ್ಲಿ ಡಿಕ್ಕಿ ಹೊಡೆಯಿತು. ಕನಿಷ್ಠ 29 ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸ್ಥಳಕ್ಕೆ ಧಾವಿಸಿದ ರಕ್ಷಣಾ ತಂಡ, ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ಸ್ಥಳಾಂತರಿಸಿತು. ರೈಲ್ವೆ ವಿಭಾಗೀಯ ಎಂಜಿನಿಯರ್ನನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದ್ದು, ವಿಚಾರಣೆ ಆರಂಭಿಸಲಾಗಿದೆ ಎಂದು ರೈಲ್ವೆ ತಿಳಿಸಿದೆ.
ಪ್ರಧಾನಿ ಇಮ್ರಾನ್ ಖಾನ್ ಅಪಘಾತದ ಬಗ್ಗೆ ಶೋಕ ವ್ಯಕ್ತಪಡಿಸಿದ್ದಾರೆ.
ನರೇಂದ್ರ ಮೋದಿ ಸಂತಾಪ
ಪಾಕಿಸ್ತಾನದಲ್ಲಿ ನಡೆದ ಅಪಘಾತದಲ್ಲಿ ಸಿಖ್ ಯಾತ್ರಿಕರು ಮೃತಪಟ್ಟಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.
Pained by the tragic demise of Sikh pilgrims in Pakistan. My thoughts are with their families and friends in this hour of grief.
I pray that those pilgrims injured recover at the earliest.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.