<p><strong>ಶ್ರೀನಗರ: </strong>'ರೈಸಿಂಗ್ ಕಾಶ್ಮೀರ್' ಪತ್ರಿಕೆಯ ಸಂಪಾದಕ ಶುಜಾತ್ ಬುಖಾರಿ ಹಂತಕ,ಪಾಕಿಸ್ತಾನ ಉಗ್ರ ನವೀದ್ ಜಾಟ್ ಹಾಗೂ ಮತ್ತೊಬ್ಬ ಉಗ್ರನನ್ನು ಭದ್ರತಾ ಪಡೆ ಕಾಶ್ಮೀರದಲ್ಲಿ ಹತ್ಯೆಗೈದಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ನವೀದ್ ಜಾಟ್ ಫೆಬ್ರುವರಿಯಲ್ಲಿ ಶ್ರೀನಗರದ ಕೇಂದ್ರೀಯ ಕಾರಾಗೃಹದಿಂದ ಪರಾರಿಯಾಗಿದ್ದನು.</p>.<p>ನವೀದ್ ಮತ್ತು ಮತ್ತೊಬ್ಬ ಉಗ್ರ ಬದ್ಗಾಮ್ ಗ್ರಾಮದಲ್ಲಿ ಅಡಗಿರುವ ಕುರಿತು ಮಾಹಿತಿ ಪಡೆದ ಪೊಲೀಸರು, ಭದ್ರತಾ ಪಡೆಯೊಂದಿಗೆ ಜಂಟಿ ಕಾರ್ಯಾಚರಣೆ ಆರಂಭಿಸಿದರು. ಈ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ನವೀದ್ ಜಾಟ್ ಹಾಗೂ ಮತ್ತೊಬ್ಬ ಉಗ್ರನನ್ನು ಹತ್ಯೆಗೈಯ್ಯಲಾಗಿದೆ. ಮೂವರು ಪೊಲೀಸರಿಗೆ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಜಾಟ್ನ ಮೃತದೇಹವನ್ನು ಕೊಂಡೊಯ್ಯುವಂತೆ ಪಾಕಿಸ್ತಾನಕ್ಕೆ ಪತ್ರ ಬರೆಯುವಂತೆ ಗೃಹ ಸಚಿವಾಲಯಕ್ಕೆ ಮನವಿ ಮಾಡಲಾಗಿದೆ. ಈತ ಎನ್ಕೌಂಟರ್ ವೇಳೆ 6 ಬಾರಿ ತಪ್ಪಿಸಿಕೊಳ್ಳಲುಪ್ರಯತ್ನಿಸಿದ್ದ. ಆದರೆ ಭದ್ರತಾ ಪಡೆ ಹರಸಾಹಸದ ನಡುವೆ ನವೀದ್ನನ್ನು ಕೊಂದು ಹಾಕಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಪೊಲೀಸ್ ಮುಖ್ಯಸ್ಥ ದಿಲ್ಬಾಗ್ ಸಿಂಗ್ ಹೇಳಿದ್ದಾರೆ.</p>.<p>ಮೃತ ಉಗ್ರ ನವೀದ್, 26/11 ಮುಂಬೈ ದಾಳಿಯ ಉಗ್ರ ಲಷ್ಕರ್–ಇ–ತೊಯ್ಬಾ ಸಂಘಟನೆಯ ಅಜ್ಮಲ್ಕಸಬ್ ಬಳಿ ತರಬೇತಿ ಪಡೆದಿದ್ದನು. ಕಳೆದ ಜೂನ್ನಲ್ಲಿ ಶುಜಾತ್ ಬುಖಾರಿ ಅವರಿದ್ದ ಕಾರಿನ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿ ಹತ್ಯೆಗೈದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ: </strong>'ರೈಸಿಂಗ್ ಕಾಶ್ಮೀರ್' ಪತ್ರಿಕೆಯ ಸಂಪಾದಕ ಶುಜಾತ್ ಬುಖಾರಿ ಹಂತಕ,ಪಾಕಿಸ್ತಾನ ಉಗ್ರ ನವೀದ್ ಜಾಟ್ ಹಾಗೂ ಮತ್ತೊಬ್ಬ ಉಗ್ರನನ್ನು ಭದ್ರತಾ ಪಡೆ ಕಾಶ್ಮೀರದಲ್ಲಿ ಹತ್ಯೆಗೈದಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ನವೀದ್ ಜಾಟ್ ಫೆಬ್ರುವರಿಯಲ್ಲಿ ಶ್ರೀನಗರದ ಕೇಂದ್ರೀಯ ಕಾರಾಗೃಹದಿಂದ ಪರಾರಿಯಾಗಿದ್ದನು.</p>.<p>ನವೀದ್ ಮತ್ತು ಮತ್ತೊಬ್ಬ ಉಗ್ರ ಬದ್ಗಾಮ್ ಗ್ರಾಮದಲ್ಲಿ ಅಡಗಿರುವ ಕುರಿತು ಮಾಹಿತಿ ಪಡೆದ ಪೊಲೀಸರು, ಭದ್ರತಾ ಪಡೆಯೊಂದಿಗೆ ಜಂಟಿ ಕಾರ್ಯಾಚರಣೆ ಆರಂಭಿಸಿದರು. ಈ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ನವೀದ್ ಜಾಟ್ ಹಾಗೂ ಮತ್ತೊಬ್ಬ ಉಗ್ರನನ್ನು ಹತ್ಯೆಗೈಯ್ಯಲಾಗಿದೆ. ಮೂವರು ಪೊಲೀಸರಿಗೆ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಜಾಟ್ನ ಮೃತದೇಹವನ್ನು ಕೊಂಡೊಯ್ಯುವಂತೆ ಪಾಕಿಸ್ತಾನಕ್ಕೆ ಪತ್ರ ಬರೆಯುವಂತೆ ಗೃಹ ಸಚಿವಾಲಯಕ್ಕೆ ಮನವಿ ಮಾಡಲಾಗಿದೆ. ಈತ ಎನ್ಕೌಂಟರ್ ವೇಳೆ 6 ಬಾರಿ ತಪ್ಪಿಸಿಕೊಳ್ಳಲುಪ್ರಯತ್ನಿಸಿದ್ದ. ಆದರೆ ಭದ್ರತಾ ಪಡೆ ಹರಸಾಹಸದ ನಡುವೆ ನವೀದ್ನನ್ನು ಕೊಂದು ಹಾಕಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಪೊಲೀಸ್ ಮುಖ್ಯಸ್ಥ ದಿಲ್ಬಾಗ್ ಸಿಂಗ್ ಹೇಳಿದ್ದಾರೆ.</p>.<p>ಮೃತ ಉಗ್ರ ನವೀದ್, 26/11 ಮುಂಬೈ ದಾಳಿಯ ಉಗ್ರ ಲಷ್ಕರ್–ಇ–ತೊಯ್ಬಾ ಸಂಘಟನೆಯ ಅಜ್ಮಲ್ಕಸಬ್ ಬಳಿ ತರಬೇತಿ ಪಡೆದಿದ್ದನು. ಕಳೆದ ಜೂನ್ನಲ್ಲಿ ಶುಜಾತ್ ಬುಖಾರಿ ಅವರಿದ್ದ ಕಾರಿನ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿ ಹತ್ಯೆಗೈದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>