ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಮಿಳುನಾಡು: ಎಐಎಡಿಎಂಕೆ ರಾಜ್ಯ ಸಮ್ಮೇಳನಕ್ಕೆ ಪಳನಿಸ್ವಾಮಿ ಚಾಲನೆ

Published 20 ಆಗಸ್ಟ್ 2023, 5:47 IST
Last Updated 20 ಆಗಸ್ಟ್ 2023, 5:47 IST
ಅಕ್ಷರ ಗಾತ್ರ

ಮಧುರೈ: ಎಡಪ್ಪಾಡಿ ಕೆ.ಪಳನಿಸ್ವಾಮಿ (ಇಪಿಎಸ್‌) ಅವರು ಎಐಎಡಿಎಂಕೆಯ ಪ್ರಧಾನ ಕಾರ್ಯದರ್ಶಿಯಾದ ಬಳಿಕ ಮೊದಲ ಬಾರಿಗೆ ಪಕ್ಷದ ರಾಜ್ಯ ಸಮ್ಮೇಳನಕ್ಕೆ ಭಾನುವಾರ ಚಾಲನೆ ನೀಡಿದರು. 

ಪಕ್ಷದ ಧ್ವಜಾರೋಹಣ ಮಾಡುವ ಮೂಲಕ ಸಮ್ಮಳೇನಕ್ಕೆ ಪಳನಿಸ್ವಾಮಿ ಚಾಲನೆ ನೀಡಿದರು. ಈ ಕಾರ್ಯಕ್ರಮಕ್ಕೆ ಪಕ್ಷದ ಕಾರ್ಯಕರ್ತರು ಸೇರಿದಂತೆ ಲಕ್ಷಾಂತರ ಜನರು ಭಾಗವಹಿಸಿದ್ದರು. 

2024ರ ಲೋಕಸಭೆ ಚುನಾವಣೆಗೆ ಇನ್ನು ಕೆಲವೆ ತಿಂಗಳುಗಳು ಬಾಕಿ ಇರುವಾಗಲೇ ಈ ಸಮ್ಮೇಳ ನಡೆಯುತ್ತಿರುವುದು ರಾಜಕೀಯ ಮಹತ್ವ ಪಡೆದುಕೊಂಡಿದೆ.

ಚುನಾವಣೆಯಲ್ಲಿ ಡಿಎಂಕೆಗೆ ಪ್ರಬಲ ಪೈಪೋಟಿ ನೀಡಲು ತಂತ್ರಗಾರಿಕೆ ರೂಪಿಸಲು ಈ ಸಮ್ಮೇಳನ ಸಹಕಾರಿಯಾಗಲಿದೆ ಎಂದು ರಾಜಕೀಯ ವಿಶ್ಲೇಷಕರು ಹೇಳಿದ್ದಾರೆ.

ಈ ವರ್ಷದ ಮಾರ್ಚ್‌ನಲ್ಲಿ ಪಳನಿಸ್ವಾಮಿ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT