<p><strong>ಮುಂಬೈ:</strong> ವಿಚಾರವಾದಿ ಗೋವಿಂದ ಪನ್ಸಾರೆ ಹತ್ಯೆ ಪ್ರಕರಣದ ತನಿಖಾಧಿಕಾರಿಯನ್ನು ಬದಲಿಸುವಂತೆ ಕೋರಿ ಪನ್ಸಾರೆ ಕುಟುಂಬದವರು ಶುಕ್ರವಾರ ಬಾಂಬೆ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.</p>.<p>ಕೊಲ್ಹಾಪುರದಲ್ಲಿ ಪನ್ಸಾರೆ ಅವರ ಮನೆಯ ಬಳಿಯೇ 2015ರ ಫೆಬ್ರುವರಿ 16ರಂದು ಅವರ ಮೇಲೆ ಗುಂಡು ಹಾರಿಸಲಾಗಿತ್ತು. ನಾಲ್ಕು ದಿನಗಳವರೆಗೆ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದ್ದರು. ಈ ಕುರಿತು ತನಿಖೆಗೆ ಮಹಾರಾಷ್ಟ್ರ ಸರ್ಕಾರ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಿತ್ತು.</p>.<p>‘ತನಿಖಾಧಿಕಾರಿಯ ಕೆಲಸಗಳು ತೃಪ್ತಿದಾಯಕವಾಗಿಲ್ಲ. ಹಾಗಾಗಿ ತನಿಖಾಧಿಕಾರಿಯನ್ನು ಬದಲಿಸಿ’ ಎಂದು ಪನ್ಸಾರೆ ಕುಟುಂಬ ಕೋರ್ಟ್ಗೆ ಮನವಿ ಮಾಡಿದೆ.</p>.<p>ಈ ಕುರಿತು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಸಿ. ಧರ್ಮಾಧಿಕಾರಿ ಮತ್ತು ಆರ್.ಐ. ಛಾಗ್ಲಾ ಅವರನ್ನೊಳಗೊಂಡ ವಿಭಾಗೀಯ ಪೀಠ, ಅರ್ಜಿದಾರರ ಈ ರೀತಿಯ ಮನವಿ ತನಿಖೆಯ ಮೇಲೆ ನಕಾರಾತ್ಮಕ ಪರಿಣಾಮ ಬೀರಬಹುದು’ ಎಂದು ಎಚ್ಚರಿಸಿತು.</p>.<p>ಈ ಕುರಿತು ಡಿಸೆಂಬರ್ 19ರಂದು ಪ್ರತಿಕ್ರಿಯೆಯನ್ನು ದಾಖಲಿಸುವುದಾಗಿ ತನಿಖಾ ಏಜೆನ್ಸಿ ಪರ ವಕೀಲರು ಕೋರ್ಟ್ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ವಿಚಾರವಾದಿ ಗೋವಿಂದ ಪನ್ಸಾರೆ ಹತ್ಯೆ ಪ್ರಕರಣದ ತನಿಖಾಧಿಕಾರಿಯನ್ನು ಬದಲಿಸುವಂತೆ ಕೋರಿ ಪನ್ಸಾರೆ ಕುಟುಂಬದವರು ಶುಕ್ರವಾರ ಬಾಂಬೆ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.</p>.<p>ಕೊಲ್ಹಾಪುರದಲ್ಲಿ ಪನ್ಸಾರೆ ಅವರ ಮನೆಯ ಬಳಿಯೇ 2015ರ ಫೆಬ್ರುವರಿ 16ರಂದು ಅವರ ಮೇಲೆ ಗುಂಡು ಹಾರಿಸಲಾಗಿತ್ತು. ನಾಲ್ಕು ದಿನಗಳವರೆಗೆ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದ್ದರು. ಈ ಕುರಿತು ತನಿಖೆಗೆ ಮಹಾರಾಷ್ಟ್ರ ಸರ್ಕಾರ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಿತ್ತು.</p>.<p>‘ತನಿಖಾಧಿಕಾರಿಯ ಕೆಲಸಗಳು ತೃಪ್ತಿದಾಯಕವಾಗಿಲ್ಲ. ಹಾಗಾಗಿ ತನಿಖಾಧಿಕಾರಿಯನ್ನು ಬದಲಿಸಿ’ ಎಂದು ಪನ್ಸಾರೆ ಕುಟುಂಬ ಕೋರ್ಟ್ಗೆ ಮನವಿ ಮಾಡಿದೆ.</p>.<p>ಈ ಕುರಿತು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಸಿ. ಧರ್ಮಾಧಿಕಾರಿ ಮತ್ತು ಆರ್.ಐ. ಛಾಗ್ಲಾ ಅವರನ್ನೊಳಗೊಂಡ ವಿಭಾಗೀಯ ಪೀಠ, ಅರ್ಜಿದಾರರ ಈ ರೀತಿಯ ಮನವಿ ತನಿಖೆಯ ಮೇಲೆ ನಕಾರಾತ್ಮಕ ಪರಿಣಾಮ ಬೀರಬಹುದು’ ಎಂದು ಎಚ್ಚರಿಸಿತು.</p>.<p>ಈ ಕುರಿತು ಡಿಸೆಂಬರ್ 19ರಂದು ಪ್ರತಿಕ್ರಿಯೆಯನ್ನು ದಾಖಲಿಸುವುದಾಗಿ ತನಿಖಾ ಏಜೆನ್ಸಿ ಪರ ವಕೀಲರು ಕೋರ್ಟ್ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>