<p><strong>ಲಾತೇಹಾರ್:</strong> ಜಾರ್ಖಂಡ್ನ ಲಾತೇಹಾರ್ ಜಿಲ್ಲೆಯಲ್ಲಿ ಶನಿವಾರ ಬೆಳಿಗ್ಗೆ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಜೆಜೆಎಂಪಿ ಮುಖ್ಯಸ್ಥ ಪಪ್ಪು ಲೋಹ್ರಾ ಸೇರಿದಂತೆ ಇಬ್ಬರು ನಕ್ಸಲರು ಹತರಾಗಿದ್ದಾರೆ.</p> <p>ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಹಾಗೂ ಜಾರ್ಖಂಡ್ ಪೊಲೀಸರು ಜಂಟಿಯಾಗಿ ಲಾತೇಹಾರ್ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯದಲ್ಲಿ ನಡೆಸಿದ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಈ ಇಬ್ಬರೂ ಮೃತಪಟ್ಟಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.</p> <p>ಇಬ್ಬರ ಶವಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಡಿಐಜಿ ವೈ.ಎಸ್. ರಮೇಶ್ ಸುದ್ದಿಸಂಸ್ಥೆಗೆ ಮಾಹಿತಿ ನೀಡಿದ್ದಾರೆ.</p> <p>ಗುಂಡಿನ ಚಕಮಕಿಯಲ್ಲಿ ಗಾಯಗೊಂಡಿದ್ದ ನಕ್ಸಲ್ನೊಬ್ಬನನ್ನು ಬಂಧಿಸಲಾಗಿದ್ದು, ಆತನ ಬಳಿಯಿದ್ದ ಶಸ್ತ್ರಾಸ್ತ್ರ ವಶಪಡಿಸಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.</p> <p>ಜಾರ್ಖಂಡ್ ಜನ ಮುಕ್ತಿ ಪರಿಷತ್ನ (ಜೆಜೆಎಂಪಿ) ಮುಖ್ಯಸ್ಥ ಪಪ್ಪು ಲೋಹ್ರಾ ಸುಳಿವು ನೀಡಿದವರಿಗೆ ₹ 10 ಲಕ್ಷ ಬಹುಮಾನ ಘೋಷಿಸಲಾಗಿತ್ತು.</p>.ಆಳ–ಅಗಲ: ಭಾರತ ನಕ್ಸಲ್ ಮುಕ್ತ?.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಾತೇಹಾರ್:</strong> ಜಾರ್ಖಂಡ್ನ ಲಾತೇಹಾರ್ ಜಿಲ್ಲೆಯಲ್ಲಿ ಶನಿವಾರ ಬೆಳಿಗ್ಗೆ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಜೆಜೆಎಂಪಿ ಮುಖ್ಯಸ್ಥ ಪಪ್ಪು ಲೋಹ್ರಾ ಸೇರಿದಂತೆ ಇಬ್ಬರು ನಕ್ಸಲರು ಹತರಾಗಿದ್ದಾರೆ.</p> <p>ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಹಾಗೂ ಜಾರ್ಖಂಡ್ ಪೊಲೀಸರು ಜಂಟಿಯಾಗಿ ಲಾತೇಹಾರ್ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯದಲ್ಲಿ ನಡೆಸಿದ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಈ ಇಬ್ಬರೂ ಮೃತಪಟ್ಟಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.</p> <p>ಇಬ್ಬರ ಶವಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಡಿಐಜಿ ವೈ.ಎಸ್. ರಮೇಶ್ ಸುದ್ದಿಸಂಸ್ಥೆಗೆ ಮಾಹಿತಿ ನೀಡಿದ್ದಾರೆ.</p> <p>ಗುಂಡಿನ ಚಕಮಕಿಯಲ್ಲಿ ಗಾಯಗೊಂಡಿದ್ದ ನಕ್ಸಲ್ನೊಬ್ಬನನ್ನು ಬಂಧಿಸಲಾಗಿದ್ದು, ಆತನ ಬಳಿಯಿದ್ದ ಶಸ್ತ್ರಾಸ್ತ್ರ ವಶಪಡಿಸಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.</p> <p>ಜಾರ್ಖಂಡ್ ಜನ ಮುಕ್ತಿ ಪರಿಷತ್ನ (ಜೆಜೆಎಂಪಿ) ಮುಖ್ಯಸ್ಥ ಪಪ್ಪು ಲೋಹ್ರಾ ಸುಳಿವು ನೀಡಿದವರಿಗೆ ₹ 10 ಲಕ್ಷ ಬಹುಮಾನ ಘೋಷಿಸಲಾಗಿತ್ತು.</p>.ಆಳ–ಅಗಲ: ಭಾರತ ನಕ್ಸಲ್ ಮುಕ್ತ?.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>