<p><strong>ಮುಂಬೈ: ‘</strong>ಇಲ್ಲಿನ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಅವರು ಸೋಮವಾರ ಮಹಾರಾಷ್ಟ್ರದ ಗೃಹರಕ್ಷಕ ದಳದ (ಹೋಂ ಗಾರ್ಡ್) ಮಹಾನಿರ್ದೇಶಕರಾಗಿ (ಡಿಜಿ) ಅಧಿಕಾರ ವಹಿಸಿಕೊಂಡರು’ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>ಉದ್ಯಮಿ ಮುಕೇಶ್ ಅಂಬಾನಿ ಅವರ ಮನೆ ಬಳಿ ಸ್ಫೋಟಕಗಳಿದ್ದ ವಾಹನ ಪತ್ತೆ ಪ್ರಕರಣವನ್ನು ಸರಿಯಾದ ರೀತಿಯಲ್ಲಿ ನಿರ್ವಹಿಸಲು ವಿಫಲರಾಗಿದ್ದಾರೆ ಎಂಬ ಕಾರಣಕ್ಕೆ ಸಿಂಗ್ ಅವರನ್ನು ಪೊಲೀಸ್ ಆಯುಕ್ತರ ಸ್ಥಾನದಿಂದಮಾರ್ಚ್ 17ರಂದು ಎತ್ತಂಗಡಿ ಮಾಡಲಾಗಿತ್ತು.ಅಲ್ಲದೆ ಆ ಸ್ಥಾನಕ್ಕೆ ಹಿರಿಯ ಐಪಿಎಸ್ ಅಧಿಕಾರಿ ಹೇಮಂತ್ ನಗ್ರಾಲೆ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು.</p>.<p>ಇದಾದ ಮರುದಿನವೇ ಸಿಂಗ್ ಅವರು ಗೃಹ ಸಚಿವ ಅನಿಲ್ ದೇಶ್ಮುಖ್ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಪತ್ರ ಬರೆದಿದ್ದರು.</p>.<p>‘ಅನಿಲ್ ದೇಶ್ಮುಖ್ ಅವರು ಮುಂಬೈನ ಬಾರ್ ಮತ್ತು ರೆಸ್ಟೋರೆಂಟ್ಗಳಿಂದ ₹50 ರಿಂದ ₹60 ಕೋಟಿ ಸೇರಿದಂತೆ ಪ್ರತಿ ತಿಂಗಳು ₹100 ಕೋಟಿ ಸಂಗ್ರಹಿಸುವಂತೆ ಎನ್ಐಎ ಕಸ್ಟಡಿಯಲ್ಲಿರುವ ಸಚಿನ್ ವಾಜೆ ಮತ್ತು ಇತರ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು’ ಎಂದು ಸಿಂಗ್ ಪತ್ರದಲ್ಲಿ ದೂರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ: ‘</strong>ಇಲ್ಲಿನ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಅವರು ಸೋಮವಾರ ಮಹಾರಾಷ್ಟ್ರದ ಗೃಹರಕ್ಷಕ ದಳದ (ಹೋಂ ಗಾರ್ಡ್) ಮಹಾನಿರ್ದೇಶಕರಾಗಿ (ಡಿಜಿ) ಅಧಿಕಾರ ವಹಿಸಿಕೊಂಡರು’ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>ಉದ್ಯಮಿ ಮುಕೇಶ್ ಅಂಬಾನಿ ಅವರ ಮನೆ ಬಳಿ ಸ್ಫೋಟಕಗಳಿದ್ದ ವಾಹನ ಪತ್ತೆ ಪ್ರಕರಣವನ್ನು ಸರಿಯಾದ ರೀತಿಯಲ್ಲಿ ನಿರ್ವಹಿಸಲು ವಿಫಲರಾಗಿದ್ದಾರೆ ಎಂಬ ಕಾರಣಕ್ಕೆ ಸಿಂಗ್ ಅವರನ್ನು ಪೊಲೀಸ್ ಆಯುಕ್ತರ ಸ್ಥಾನದಿಂದಮಾರ್ಚ್ 17ರಂದು ಎತ್ತಂಗಡಿ ಮಾಡಲಾಗಿತ್ತು.ಅಲ್ಲದೆ ಆ ಸ್ಥಾನಕ್ಕೆ ಹಿರಿಯ ಐಪಿಎಸ್ ಅಧಿಕಾರಿ ಹೇಮಂತ್ ನಗ್ರಾಲೆ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು.</p>.<p>ಇದಾದ ಮರುದಿನವೇ ಸಿಂಗ್ ಅವರು ಗೃಹ ಸಚಿವ ಅನಿಲ್ ದೇಶ್ಮುಖ್ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಪತ್ರ ಬರೆದಿದ್ದರು.</p>.<p>‘ಅನಿಲ್ ದೇಶ್ಮುಖ್ ಅವರು ಮುಂಬೈನ ಬಾರ್ ಮತ್ತು ರೆಸ್ಟೋರೆಂಟ್ಗಳಿಂದ ₹50 ರಿಂದ ₹60 ಕೋಟಿ ಸೇರಿದಂತೆ ಪ್ರತಿ ತಿಂಗಳು ₹100 ಕೋಟಿ ಸಂಗ್ರಹಿಸುವಂತೆ ಎನ್ಐಎ ಕಸ್ಟಡಿಯಲ್ಲಿರುವ ಸಚಿನ್ ವಾಜೆ ಮತ್ತು ಇತರ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು’ ಎಂದು ಸಿಂಗ್ ಪತ್ರದಲ್ಲಿ ದೂರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>