<p><strong>ಮುಂಬೈ</strong>: ಮುಕ್ತ ಹಾಗೂ ನ್ಯಾಯಯುತ ತನಿಖೆಗಾಗಿ ಮುಂಬೈ ಪೊಲೀಸ್ ಆಯುಕ್ತ ಹುದ್ದೆಯಿಂದ ಪರಮ್ ಬೀರ್ ಸಿಂಗ್ ಅವರನ್ನು ವರ್ಗಾಯಿಸಲಾಗಿದೆ ಎಂದು ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್ ತಿಳಿಸಿದ್ದಾರೆ.</p>.<p>ರಾಷ್ಟ್ರೀಯ ತನಿಖಾ ದಳದಿಂದ ಬಂಧನವಾಗಿರುವ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಅವರ ತನಿಖೆಯು ಪಾರದರ್ಶಕವಾಗಿ ನಡೆಯಬೇಕೆನ್ನುವ ದೃಷ್ಟಿಯಿಂದ ಪರಮ್ ಬೀರ್ ಸಿಂಗ್ ಅವರನ್ನು ವರ್ಗಾಯಿಸಿರುವುದಾಗಿ ಅನಿಲ್ ದೇಶ್ಮುಕ್ ಮಾಹಿತಿ ನೀಡಿದ್ದಾರೆ. </p>.<p>ಈ ವಿಚಾರವಾಗಿ ಮುಂಬೈನಲ್ಲಿ ಗುರುವಾರ ಮಾತನಾಡಿರುವ ಅವರು, 'ಇದು ರೂಢಿಗತ ಆಡಳಿತಾತ್ಮಕ ವರ್ಗಾವಣೆ ಅಲ್ಲ. ಸಚಿನ್ ವಾಜೆ ಪ್ರಕರಣದಲ್ಲಿ ಮುಕ್ತ ಹಾಗೂ ನ್ಯಾಯಯುತ ತನಿಖೆ ನಡೆಯಬೇಕಿದೆ. ಆ ಹಿನ್ನೆಲೆಯಲ್ಲಿ ಮುಂಬೈ ಪೊಲೀಸ್ ಆಯುಕ್ತರ ಹುದ್ದೆಯಿಂದ ಪರಮ್ ಬೀರ್ ಸಿಂಗ್ ಅವರನ್ನು ವರ್ಗಾಯಿಸಲಾಯಿತು' ಎಂದು ದೇಶ್ಮುಖ್ ಹೇಳಿದ್ದಾರೆ.</p>.<p>'ಈ ಪ್ರಕರಣದ ತನಿಖೆಯನ್ನು ಎನ್ಐಎ ಮತ್ತು ಎಟಿಎಸ್ ಸಂಸ್ಥೆಗಳು ನಡೆಸುತ್ತಿವೆ. ಈ ಎರಡೂ ಸಂಸ್ಥೆಗಳು ವೃತ್ತಿಪರ ತನಿಖೆಯನ್ನು ಕೈಗೊಳ್ಳಲಿವೆ. ಸಚಿನ್ ವಾಜೆಯಂತಹ ಕಿರಿಯ ಅಧಿಕಾರಿಯೊಬ್ಬರು ತಪ್ಪು ಮಾಡಿದ್ದಾರೆ. ಅಂತಹ ತಪ್ಪುಗಳನ್ನು ನಿರ್ಲಕ್ಷಿಸಲಾಗುವುದಿಲ್ಲ' ಎಂದು ಅವರು ಹೇಳಿದ್ದಾರೆ.</p>.<p>'ಅಂಬಾನಿ ನಿವಾಸದ ಬಳಿ ಸ್ಪೋಟಕ ಪತ್ತೆ ಪ್ರಕರಣ ನಡೆದಾಗ ಸಿಂಗ್ ಅವರು ಮುಂಬೈ ಪೊಲೀಸ್ ಆಯುಕ್ತರಾಗಿದ್ದರು. ನಿಷ್ಪಕ್ಷಪಾತ ತನಿಖೆಯ ದೃಷ್ಟಿಯಿಂದ ಅವರನ್ನು ಬೇರೆಡೆಗೆ ವರ್ಗಾಯಿಸಲಾಗಿದೆ' ಎಂದು ದೇಶ್ಮುಖ್ ಸ್ಪಷ್ಟಪಡಿಸಿದ್ದಾರೆ. </p>.<p>ಉದ್ಯಮಿ ಮುಕೇಶ್ ಅಂಬಾನಿ ಅವರ ಮುಂಬೈ ನಿವಾಸದ ಸಮೀಪ ಸ್ಫೋಟಕ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿ ಸಚಿನ್ ವಾಜೆ (49) ಅವರನ್ನು ರಾಷ್ಟ್ರೀಯ ತನಿಖಾ ದಳದ (ಎನ್ಐಎ) ಅಧಿಕಾರಿಗಳು ಶನಿವಾರ ಬಂಧಿಸಿದ್ದರು.</p>.<p>ವಾಜೆ ಅವರು ಮುಂಬೈ ನಗರ ಪೊಲೀಸ್ ಕ್ರೈಮ್ ಬ್ರ್ಯಾಂಚ್ನ ಕ್ರೈಮ್ ಇಂಟೆಲಿಜೆನ್ಸ್ ಯೂನಿಟ್(ಸಿಐಉ) ಘಟಕದಲ್ಲಿ ಕಾರ್ಯನಿರ್ವಹಿಸುತ್ತಿದ್ದರು.</p>.<p><strong>ಇವನ್ನೂ ಓದಿ...</strong></p>.<p><strong><a href="https://www.prajavani.net/india-news/mumbai-police-commissioner-param-bir-singh-meets-cm-thackeray-814025.html" target="_blank">ಸಚಿನ್ ವಾಜೆ ಬಂಧನ ಪ್ರಕರಣ: ಉದ್ಧವ್ ಠಾಕ್ರೆ ಭೇಟಿಯಾದ ಮುಂಬೈ ಪೊಲೀಸ್ ಆಯುಕ್ತ</a></strong></p>.<p><a href="https://www.prajavani.net/explainer/controversial-police-officer-sachin-vaze-was-arrested-by-the-nia-mahindra-scorpio-suv-reliance-813160.html" target="_blank"><strong>ಸಚಿನ್ ವಾಜೆ ಬಂಧನ ಆಗಿದ್ದೇಕೆ! ಇಲ್ಲಿದೆ ಕಂಪ್ಲೀಟ್ ರಿಪೋರ್ಟ್</strong></a></p>.<p><strong><a href="https://www.prajavani.net/india-news/mukesh-ambani-will-cooperate-with-nia-ex-owner-of-car-used-by-sachin-waze-814060.html" target="_blank">ಅಂಬಾನಿ ಮನೆ ಬಳಿ ಸ್ಫೋಟಕ: ಎನ್ಐಎನಿಂದ ಸಚಿನ್ ವಾಜೆ ಕಾರಿನ ಹಳೆಯ ಮಾಲೀಕನ ತನಿಖೆ?</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಮುಕ್ತ ಹಾಗೂ ನ್ಯಾಯಯುತ ತನಿಖೆಗಾಗಿ ಮುಂಬೈ ಪೊಲೀಸ್ ಆಯುಕ್ತ ಹುದ್ದೆಯಿಂದ ಪರಮ್ ಬೀರ್ ಸಿಂಗ್ ಅವರನ್ನು ವರ್ಗಾಯಿಸಲಾಗಿದೆ ಎಂದು ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್ ತಿಳಿಸಿದ್ದಾರೆ.</p>.<p>ರಾಷ್ಟ್ರೀಯ ತನಿಖಾ ದಳದಿಂದ ಬಂಧನವಾಗಿರುವ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಅವರ ತನಿಖೆಯು ಪಾರದರ್ಶಕವಾಗಿ ನಡೆಯಬೇಕೆನ್ನುವ ದೃಷ್ಟಿಯಿಂದ ಪರಮ್ ಬೀರ್ ಸಿಂಗ್ ಅವರನ್ನು ವರ್ಗಾಯಿಸಿರುವುದಾಗಿ ಅನಿಲ್ ದೇಶ್ಮುಕ್ ಮಾಹಿತಿ ನೀಡಿದ್ದಾರೆ. </p>.<p>ಈ ವಿಚಾರವಾಗಿ ಮುಂಬೈನಲ್ಲಿ ಗುರುವಾರ ಮಾತನಾಡಿರುವ ಅವರು, 'ಇದು ರೂಢಿಗತ ಆಡಳಿತಾತ್ಮಕ ವರ್ಗಾವಣೆ ಅಲ್ಲ. ಸಚಿನ್ ವಾಜೆ ಪ್ರಕರಣದಲ್ಲಿ ಮುಕ್ತ ಹಾಗೂ ನ್ಯಾಯಯುತ ತನಿಖೆ ನಡೆಯಬೇಕಿದೆ. ಆ ಹಿನ್ನೆಲೆಯಲ್ಲಿ ಮುಂಬೈ ಪೊಲೀಸ್ ಆಯುಕ್ತರ ಹುದ್ದೆಯಿಂದ ಪರಮ್ ಬೀರ್ ಸಿಂಗ್ ಅವರನ್ನು ವರ್ಗಾಯಿಸಲಾಯಿತು' ಎಂದು ದೇಶ್ಮುಖ್ ಹೇಳಿದ್ದಾರೆ.</p>.<p>'ಈ ಪ್ರಕರಣದ ತನಿಖೆಯನ್ನು ಎನ್ಐಎ ಮತ್ತು ಎಟಿಎಸ್ ಸಂಸ್ಥೆಗಳು ನಡೆಸುತ್ತಿವೆ. ಈ ಎರಡೂ ಸಂಸ್ಥೆಗಳು ವೃತ್ತಿಪರ ತನಿಖೆಯನ್ನು ಕೈಗೊಳ್ಳಲಿವೆ. ಸಚಿನ್ ವಾಜೆಯಂತಹ ಕಿರಿಯ ಅಧಿಕಾರಿಯೊಬ್ಬರು ತಪ್ಪು ಮಾಡಿದ್ದಾರೆ. ಅಂತಹ ತಪ್ಪುಗಳನ್ನು ನಿರ್ಲಕ್ಷಿಸಲಾಗುವುದಿಲ್ಲ' ಎಂದು ಅವರು ಹೇಳಿದ್ದಾರೆ.</p>.<p>'ಅಂಬಾನಿ ನಿವಾಸದ ಬಳಿ ಸ್ಪೋಟಕ ಪತ್ತೆ ಪ್ರಕರಣ ನಡೆದಾಗ ಸಿಂಗ್ ಅವರು ಮುಂಬೈ ಪೊಲೀಸ್ ಆಯುಕ್ತರಾಗಿದ್ದರು. ನಿಷ್ಪಕ್ಷಪಾತ ತನಿಖೆಯ ದೃಷ್ಟಿಯಿಂದ ಅವರನ್ನು ಬೇರೆಡೆಗೆ ವರ್ಗಾಯಿಸಲಾಗಿದೆ' ಎಂದು ದೇಶ್ಮುಖ್ ಸ್ಪಷ್ಟಪಡಿಸಿದ್ದಾರೆ. </p>.<p>ಉದ್ಯಮಿ ಮುಕೇಶ್ ಅಂಬಾನಿ ಅವರ ಮುಂಬೈ ನಿವಾಸದ ಸಮೀಪ ಸ್ಫೋಟಕ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿ ಸಚಿನ್ ವಾಜೆ (49) ಅವರನ್ನು ರಾಷ್ಟ್ರೀಯ ತನಿಖಾ ದಳದ (ಎನ್ಐಎ) ಅಧಿಕಾರಿಗಳು ಶನಿವಾರ ಬಂಧಿಸಿದ್ದರು.</p>.<p>ವಾಜೆ ಅವರು ಮುಂಬೈ ನಗರ ಪೊಲೀಸ್ ಕ್ರೈಮ್ ಬ್ರ್ಯಾಂಚ್ನ ಕ್ರೈಮ್ ಇಂಟೆಲಿಜೆನ್ಸ್ ಯೂನಿಟ್(ಸಿಐಉ) ಘಟಕದಲ್ಲಿ ಕಾರ್ಯನಿರ್ವಹಿಸುತ್ತಿದ್ದರು.</p>.<p><strong>ಇವನ್ನೂ ಓದಿ...</strong></p>.<p><strong><a href="https://www.prajavani.net/india-news/mumbai-police-commissioner-param-bir-singh-meets-cm-thackeray-814025.html" target="_blank">ಸಚಿನ್ ವಾಜೆ ಬಂಧನ ಪ್ರಕರಣ: ಉದ್ಧವ್ ಠಾಕ್ರೆ ಭೇಟಿಯಾದ ಮುಂಬೈ ಪೊಲೀಸ್ ಆಯುಕ್ತ</a></strong></p>.<p><a href="https://www.prajavani.net/explainer/controversial-police-officer-sachin-vaze-was-arrested-by-the-nia-mahindra-scorpio-suv-reliance-813160.html" target="_blank"><strong>ಸಚಿನ್ ವಾಜೆ ಬಂಧನ ಆಗಿದ್ದೇಕೆ! ಇಲ್ಲಿದೆ ಕಂಪ್ಲೀಟ್ ರಿಪೋರ್ಟ್</strong></a></p>.<p><strong><a href="https://www.prajavani.net/india-news/mukesh-ambani-will-cooperate-with-nia-ex-owner-of-car-used-by-sachin-waze-814060.html" target="_blank">ಅಂಬಾನಿ ಮನೆ ಬಳಿ ಸ್ಫೋಟಕ: ಎನ್ಐಎನಿಂದ ಸಚಿನ್ ವಾಜೆ ಕಾರಿನ ಹಳೆಯ ಮಾಲೀಕನ ತನಿಖೆ?</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>