ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭದ್ರತಾ ವೈಫಲ್ಯ: ತುರ್ತು ವಿಚಾರಣೆಗೆ ಕೋರಿದ ನೀಲಂ ಅರ್ಜಿ ತಿರಸ್ಕರಿಸಿದ ದೆಹಲಿ HC

Published 28 ಡಿಸೆಂಬರ್ 2023, 10:43 IST
Last Updated 28 ಡಿಸೆಂಬರ್ 2023, 10:43 IST
ಅಕ್ಷರ ಗಾತ್ರ

ನವದೆಹಲಿ: ಲೋಕಸಭೆಯ ಸಭಾಂಗಣದಲ್ಲಿ ಜಿಗಿದ ಪ್ರಕರಣದಲ್ಲಿ ಬಂಧಿತರಾಗಿರುವ ನೀಲಂ ಆಜಾದ್‌ ಸಲ್ಲಿಸಿರುವ ಅರ್ಜಿಯನ್ನು ತುರ್ತಾಗಿ ವಿಚಾರಣೆ ನಡೆಸಲು ದೆಹಲಿ ಹೈಕೋರ್ಟ್ ನಿರಾಕರಿಸಿದೆ.

ನೀಲಂ ಪರ ವಕೀಲರು ಸಲ್ಲಿಸಿದ್ದ ಮನವಿಯನ್ನು ತಿರಸ್ಕರಿಸಿದ ಕೋರ್ಟ್‌, ‘ಈ ವಿಚಾರದಲ್ಲಿ ಯಾವುದೇ ತುರ್ತು ಇಲ್ಲ, ಜನವರಿ 3ರಂದು ಪ್ರಕರಣದ ವಿಚಾರಣೆ ನಡೆಯಲಿದೆ’ ಎಂದು ತಿಳಿಸಿದೆ. 

‘ನನ್ನ ಬಂಧನವು ಕಾನೂನು ಬಾಹಿರವಾಗಿದ್ದು, ನ್ಯಾಯಾಲಯದ ವಿಚಾರಣೆ ವೇಳೆ ನನ್ನ ಪರವಾಗಿ ವಾದ ಮಾಡಲು ವಕೀಲರನ್ನು ಸಂಪರ್ಕಿಸಲು ನನಗೆ ಅನುಮತಿ ನೀಡುತ್ತಿಲ್ಲ’ ಎಂದು ನೀಲಂ ಆರೋಪಿಸಿದ್ದಾರೆ. 

ನೀಲಂ ಸೇರಿದಂತೆ ಆರು ಮಂದಿ ಆರೋಪಿಗಳು ಜನವರಿ 5ರವರೆಗೆ ಪೊಲೀಸ್‌ ಕಸ್ಟಡಿಯಲ್ಲಿದ್ದಾರೆ.

ಪಾಲಿಗ್ರಾಫ್‌ ಪರೀಕ್ಷೆಗೆ ಪೊಲೀಸರಿಂದ ಮನವಿ 

ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಆರು ಜನ ಆರೋಪಿಗಳನ್ನು ಪಾಲಿಗ್ರಾಫ್‌ ಪರೀಕ್ಷೆಗೆ ಒಳಪಡಿಸಲು ಅನುಮತಿ ನೀಡುವಂತೆ ದೆಹಲಿ ಪೊಲೀಸರು ಗುರುವಾರ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದಾರೆ.

ಅರ್ಜಿಯನ್ನು ಪರಿಶೀಲಿಸಿದ ಕೋರ್ಟ್‌, ವಿಚಾರಣೆಯನ್ನು ಜನವರಿ 2ಕ್ಕೆ ಮುಂದೂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT