<p><strong>ನವದೆಹಲಿ:</strong> ಕಳೆದ ಜನವರಿಯಿಂದ ಆರಂಭವಾಗಿದ್ದ ಸಂಸತ್ತಿನ ಮಹತ್ವದ ಬಜೆಟ್ ಅಧಿವೇಶನ ಶನಿವಾರ ಮುಕ್ತಾಯಗೊಂಡಿದ್ದು, ಲೋಕಸಭೆ ಮತ್ತು ರಾಜ್ಯಸಭೆಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ.</p><p>ಶನಿವಾರ ಬೆಳಿಗ್ಗೆ 11 ಗಂಟೆಗೆ ಸದನ ಸಮಾವೇಶಗೊಳ್ಳುತ್ತಿದ್ದಂತೆಯೇ, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಸಮಾರೋಪದ ಮಾತುಗಳನ್ನು ಆಡಿದರು. ಬಳಿಕ ಸದನವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದರು</p><p>ಮಹಿಳಾ ಮೀಸಲಾತಿ ತಿದ್ದುಪಡಿ ಕಾಯ್ದೆಗೆ ಲೋಕಸಭೆಯಲ್ಲಿ ಸೋಲುಂಟಾದ ಮರುದಿನವೇ ಅಧಿವೇಶನವನ್ನು ಮುಂದೂಡಿರುವುದು ಗಮನಾರ್ಹ. ಲೋಕಸಭೆ ಸ್ಥಾಗಳ ಹೆಚ್ಚಳ ಸೇರಿದಂತೆ ಮತ್ತೊಂದು ಮಸೂದೆಯನ್ನು ಸರ್ಕಾರ ಮತಕ್ಕೆ ಹಾಕಲಿಲ್ಲ.</p><p><strong>ರಾಜ್ಯಸಭೆ:</strong> ಇತ್ತ ರಾಜ್ಯಸಭೆಯಲ್ಲಿ ಸಭಾಪತಿ ಸಿ.ಪಿ.ರಾಧಾಕೃಷ್ಣನ್ ಅವರು ಅಧಿವೇಶನವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದರು.</p><p>ಈ ವಿಶೇಷ ಅಧಿವೇಶನದಲ್ಲಿ ಹಲವು ನಿರ್ಣಯಗಳನ್ನು ಕೈಗೊಳ್ಳಲಾಗಿದ್ದು ವಿಶೇಷ. ಈ ಕಲಾಪದಲ್ಲಿ ಹರಿವಂಶ ಅವರನ್ನು ರಾಜ್ಯಸಭೆಯ ಉಪಸಭಾಪತಿಯನ್ನಾಗಿ ಆಯ್ಕೆ ಮಾಡಲಾಯಿತು.</p><p>ಈ ಬಜೆಟ್ ಅಧಿವೇಶನ ದೇಶದ ಅಭಿವೃದ್ಧಿ ಪಥವನ್ನು ನಿರ್ಧರಿಸುವ ಅತ್ಯಂತ ದೀರ್ಘ ಮತ್ತು ಪರಿಣಾಮಕಾರಿ ಅಧಿವೇಶನವಾಗಿದೆ ಎಂದು ಸಭಾಪತಿಗಳು ಶ್ಲಾಘಿಸಿದರು.</p><p>ಮಹಿಳಾ ಮೀಸಲಾತಿ (ತಿದ್ದುಪಡಿ) ಮಸೂದೆ ಸೇರಿದಂತೆ ಪ್ರಮುಖ ಮೂರು ಕಾಯ್ದೆಗಳ ಚರ್ಚೆಗಾಗಿ ಏಪ್ರಿಲ್ 16 ರಿಂದ ಮೂರು ದಿನ ಸಂಸತ್ತಿನ ವಿಶೇಷ ಕಲಾಪವನ್ನು ಆಯೋಜಿಸಲಾಗಿತ್ತು. ಸದ್ಯಕ್ಕೆ ಎರಡೂ ಸದನಗಳ ಕಲಾಪಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡುವ ಮೂಲಕ ಈ ಬಾರಿಯ ಸುದೀರ್ಘ ಸಂಸದೀಯ ಪ್ರಕ್ರಿಯೆಗೆ ತೆರೆ ಎಳೆಯಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕಳೆದ ಜನವರಿಯಿಂದ ಆರಂಭವಾಗಿದ್ದ ಸಂಸತ್ತಿನ ಮಹತ್ವದ ಬಜೆಟ್ ಅಧಿವೇಶನ ಶನಿವಾರ ಮುಕ್ತಾಯಗೊಂಡಿದ್ದು, ಲೋಕಸಭೆ ಮತ್ತು ರಾಜ್ಯಸಭೆಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ.</p><p>ಶನಿವಾರ ಬೆಳಿಗ್ಗೆ 11 ಗಂಟೆಗೆ ಸದನ ಸಮಾವೇಶಗೊಳ್ಳುತ್ತಿದ್ದಂತೆಯೇ, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಸಮಾರೋಪದ ಮಾತುಗಳನ್ನು ಆಡಿದರು. ಬಳಿಕ ಸದನವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದರು</p><p>ಮಹಿಳಾ ಮೀಸಲಾತಿ ತಿದ್ದುಪಡಿ ಕಾಯ್ದೆಗೆ ಲೋಕಸಭೆಯಲ್ಲಿ ಸೋಲುಂಟಾದ ಮರುದಿನವೇ ಅಧಿವೇಶನವನ್ನು ಮುಂದೂಡಿರುವುದು ಗಮನಾರ್ಹ. ಲೋಕಸಭೆ ಸ್ಥಾಗಳ ಹೆಚ್ಚಳ ಸೇರಿದಂತೆ ಮತ್ತೊಂದು ಮಸೂದೆಯನ್ನು ಸರ್ಕಾರ ಮತಕ್ಕೆ ಹಾಕಲಿಲ್ಲ.</p><p><strong>ರಾಜ್ಯಸಭೆ:</strong> ಇತ್ತ ರಾಜ್ಯಸಭೆಯಲ್ಲಿ ಸಭಾಪತಿ ಸಿ.ಪಿ.ರಾಧಾಕೃಷ್ಣನ್ ಅವರು ಅಧಿವೇಶನವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದರು.</p><p>ಈ ವಿಶೇಷ ಅಧಿವೇಶನದಲ್ಲಿ ಹಲವು ನಿರ್ಣಯಗಳನ್ನು ಕೈಗೊಳ್ಳಲಾಗಿದ್ದು ವಿಶೇಷ. ಈ ಕಲಾಪದಲ್ಲಿ ಹರಿವಂಶ ಅವರನ್ನು ರಾಜ್ಯಸಭೆಯ ಉಪಸಭಾಪತಿಯನ್ನಾಗಿ ಆಯ್ಕೆ ಮಾಡಲಾಯಿತು.</p><p>ಈ ಬಜೆಟ್ ಅಧಿವೇಶನ ದೇಶದ ಅಭಿವೃದ್ಧಿ ಪಥವನ್ನು ನಿರ್ಧರಿಸುವ ಅತ್ಯಂತ ದೀರ್ಘ ಮತ್ತು ಪರಿಣಾಮಕಾರಿ ಅಧಿವೇಶನವಾಗಿದೆ ಎಂದು ಸಭಾಪತಿಗಳು ಶ್ಲಾಘಿಸಿದರು.</p><p>ಮಹಿಳಾ ಮೀಸಲಾತಿ (ತಿದ್ದುಪಡಿ) ಮಸೂದೆ ಸೇರಿದಂತೆ ಪ್ರಮುಖ ಮೂರು ಕಾಯ್ದೆಗಳ ಚರ್ಚೆಗಾಗಿ ಏಪ್ರಿಲ್ 16 ರಿಂದ ಮೂರು ದಿನ ಸಂಸತ್ತಿನ ವಿಶೇಷ ಕಲಾಪವನ್ನು ಆಯೋಜಿಸಲಾಗಿತ್ತು. ಸದ್ಯಕ್ಕೆ ಎರಡೂ ಸದನಗಳ ಕಲಾಪಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡುವ ಮೂಲಕ ಈ ಬಾರಿಯ ಸುದೀರ್ಘ ಸಂಸದೀಯ ಪ್ರಕ್ರಿಯೆಗೆ ತೆರೆ ಎಳೆಯಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>