<p><strong>ನವದೆಹಲಿ:</strong> ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳು ಸದನದಲ್ಲಿ ಸತತವಾಗಿ ಗದ್ದಲ ಮಾಡುವ ಮೂಲಕ ಕಲಾಪಗಳು ನಡೆಯದಂತೆ ಮಾಡುತ್ತಿವೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಸೋಮವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ. </p><p>ವಿರೋಧ ಪಕ್ಷಗಳು ಕಲಾಪಕ್ಕೆ ಅಡ್ಡಿ ಮಾಡುತ್ತಿವೆ. ಈಗಾಗಲೇ ಸದನದ ಸಾಕಷ್ಟು ಸಮಯವನ್ನು ವ್ಯರ್ಥಮಾಡಿವೆ. ಅವರು ಕಲಾಪಕ್ಕೆ ಅಡ್ಡಿ ಮಾಡಿದರೂ, ಸರ್ಕಾರವು ರಾಜ್ಯಸಭೆ ಹಾಗೂ ಲೋಕಸಭೆಯಲ್ಲಿ ಹೊಸ ಮಸೂದೆಗಳನ್ನು ಮಂಡಿಸಲಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. </p><p>ವಿರೋಧ ಪಕ್ಷಗಳಿಗೆ ಸಾರ್ವಜನಿಕ ಹಿತಾಸಕ್ತಿಗೆ ಸಂಬಂಧಿಸಿದ ವಿಷಯಗಳ ಕುರಿತು ಚರ್ಚಿಸುವ ಆಸಕ್ತಿಯಿಲ್ಲ. ಪ್ರತಿದಿನವೂ ಒಂದೇ ವಿಷಯದ ಕುರಿತಾಗಿ ಚರ್ಚಿಸಲು ಒತ್ತಾಯಿಸುವ ಮೂಲಕ ದೇಶದ ಹಾಗೂ ಸಂಸತ್ತಿನ ಸಮಯವನ್ನು ಹಾಳು ಮಾಡುತ್ತಿವೆ. ಆದರೆ, ಸರ್ಕಾರವು ಹೊಸ ಮಸೂದೆಗಳ ಕುರಿತು ಚರ್ಚಿಸಲು ಬಯಸುತ್ತಿದೆ ಎಂದಿದ್ದಾರೆ.</p><p>ಸರ್ಕಾರವು ಆದಾಯ ತೆರಿಗೆ ಮಸೂದೆ, ರಾಷ್ಟ್ರೀಯ ಕ್ರೀಡಾ ಮಸೂದೆ, ಮಣಿಪುರ ಸರಕು ಹಾಗೂ ಸೇವಾ ತೆರಿಗೆ ಮಸೂದೆ(ತಿದ್ದುಪಡಿ) ಸೇರಿದಂತೆ ಹಲವು ಪ್ರಮುಖ ಮಸೂದೆಗಳ ಮಂಡನೆಗೆ ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.</p><p>ಜುಲೈ 21 ರಿಂದ ಮುಂಗಾರು ಅಧಿವೇಶನ ಆರಂಭವಾಗಿದೆ. ವಿರೋಧ ಪಕ್ಷಗಳು ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಬಿಹಾರದ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಕುರಿತು ಚರ್ಚೆಗೆ ಒತ್ತಾಯಿಸಿ ಸತತವಾಗಿ ಪ್ರತಿಭಟನೆ ನಡೆಸುತ್ತಿವೆ. ಇದರಿಂದ ಕಲಾಪವನ್ನು ಪದೇ ಪದೇ ಮುಂದೂಡಿಕೆ ಮಾಡಲಾಗುತ್ತಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳು ಸದನದಲ್ಲಿ ಸತತವಾಗಿ ಗದ್ದಲ ಮಾಡುವ ಮೂಲಕ ಕಲಾಪಗಳು ನಡೆಯದಂತೆ ಮಾಡುತ್ತಿವೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಸೋಮವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ. </p><p>ವಿರೋಧ ಪಕ್ಷಗಳು ಕಲಾಪಕ್ಕೆ ಅಡ್ಡಿ ಮಾಡುತ್ತಿವೆ. ಈಗಾಗಲೇ ಸದನದ ಸಾಕಷ್ಟು ಸಮಯವನ್ನು ವ್ಯರ್ಥಮಾಡಿವೆ. ಅವರು ಕಲಾಪಕ್ಕೆ ಅಡ್ಡಿ ಮಾಡಿದರೂ, ಸರ್ಕಾರವು ರಾಜ್ಯಸಭೆ ಹಾಗೂ ಲೋಕಸಭೆಯಲ್ಲಿ ಹೊಸ ಮಸೂದೆಗಳನ್ನು ಮಂಡಿಸಲಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. </p><p>ವಿರೋಧ ಪಕ್ಷಗಳಿಗೆ ಸಾರ್ವಜನಿಕ ಹಿತಾಸಕ್ತಿಗೆ ಸಂಬಂಧಿಸಿದ ವಿಷಯಗಳ ಕುರಿತು ಚರ್ಚಿಸುವ ಆಸಕ್ತಿಯಿಲ್ಲ. ಪ್ರತಿದಿನವೂ ಒಂದೇ ವಿಷಯದ ಕುರಿತಾಗಿ ಚರ್ಚಿಸಲು ಒತ್ತಾಯಿಸುವ ಮೂಲಕ ದೇಶದ ಹಾಗೂ ಸಂಸತ್ತಿನ ಸಮಯವನ್ನು ಹಾಳು ಮಾಡುತ್ತಿವೆ. ಆದರೆ, ಸರ್ಕಾರವು ಹೊಸ ಮಸೂದೆಗಳ ಕುರಿತು ಚರ್ಚಿಸಲು ಬಯಸುತ್ತಿದೆ ಎಂದಿದ್ದಾರೆ.</p><p>ಸರ್ಕಾರವು ಆದಾಯ ತೆರಿಗೆ ಮಸೂದೆ, ರಾಷ್ಟ್ರೀಯ ಕ್ರೀಡಾ ಮಸೂದೆ, ಮಣಿಪುರ ಸರಕು ಹಾಗೂ ಸೇವಾ ತೆರಿಗೆ ಮಸೂದೆ(ತಿದ್ದುಪಡಿ) ಸೇರಿದಂತೆ ಹಲವು ಪ್ರಮುಖ ಮಸೂದೆಗಳ ಮಂಡನೆಗೆ ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.</p><p>ಜುಲೈ 21 ರಿಂದ ಮುಂಗಾರು ಅಧಿವೇಶನ ಆರಂಭವಾಗಿದೆ. ವಿರೋಧ ಪಕ್ಷಗಳು ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಬಿಹಾರದ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಕುರಿತು ಚರ್ಚೆಗೆ ಒತ್ತಾಯಿಸಿ ಸತತವಾಗಿ ಪ್ರತಿಭಟನೆ ನಡೆಸುತ್ತಿವೆ. ಇದರಿಂದ ಕಲಾಪವನ್ನು ಪದೇ ಪದೇ ಮುಂದೂಡಿಕೆ ಮಾಡಲಾಗುತ್ತಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>