ಪ್ರಶ್ನೋತ್ತರ ಅವಧಿಯಲ್ಲೂ ಗದ್ದಲ
ಪ್ರಶ್ನೋತ್ತರ ಅವಧಿಯಲ್ಲಿಯೂ ಸದನದಲ್ಲಿ ಪ್ರತಿಭಟನೆ ಮುಂದುವರಿಯಿತು. ಕೇವಲ ಐದು ನಿಮಿಷ ನಡೆದ ಪ್ರಶ್ನೋತ್ತರ ಅವಧಿಯಲ್ಲಿ ಒಂದು ಪ್ರಶ್ನೆ ಮತ್ತು ಅದರ ಪೂರಕ ಪ್ರಶ್ನೆಗಳನ್ನು ಕೈಗೆತ್ತಿಕೊಳ್ಳಲಾಯಿತು. ರಾಹುಲ್ ಅವರಿಗೆ ಅವಕಾಶ ನಿರಾಕರಿಸಿದ ಬಳಿಕ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರಿಗೆ ಗಾಂಧಿ ಕುಟುಂಬದವರ ಉಲ್ಲೇಖಗಳಿರುವ ಪುಸ್ತಕಗಳನ್ನು ಪ್ರಸ್ತಾಪಿಸಲು ಅವಕಾಶ ನೀಡಿದ್ದಕ್ಕಾಗಿ ಕಾಂಗ್ರೆಸ್ ಸಂಸದರು ಸ್ಪೀಕರ್ ಓಂ ಬಿರ್ಲಾ ಅವರ ಕಚೇರಿಯಲ್ಲಿ ಪ್ರತಿಭಟನೆ ದಾಖಲಿಸಿದರು.