<p><strong>ನವದೆಹಲಿ</strong>: ಸಂಸದೀಯ ಶಿಷ್ಟಾಚಾರವನ್ನು ಕಾಪಾಡುವ ನಿಟ್ಟಿನಲ್ಲಿ ಸಂಸದರು ಸದನದ ಒಳಗೆ ಹಾಗೂ ಹೊರಭಾಗದಲ್ಲಿ ‘ವಂದೇ ಮಾತರಂ’ ಹಾಗೂ ‘ಜೈ ಹಿಂದ್’ ಘೋಷಣೆಗಳನ್ನು ಕೂಗುವಂತಿಲ್ಲ ಎಂದು ರಾಜ್ಯಸಭಾ ಸಚಿವಾಲಯವು ನೆನಪಿಸಿದೆ. ಈ ನಿರ್ಧಾರದ ಬೆನ್ನಲ್ಲೇ, ಬಿಜೆಪಿ ವಿರುದ್ಧ ಕಿಡಿಕಾರಿದ ಕಾಂಗ್ರೆಸ್, ‘ದೇಶದ ಸ್ವಾತಂತ್ರ್ಯ ಚಳವಳಿಗೆ ಏನನ್ನೂ ನೀಡದವರಿಗೆ ಈ ಘೋಷಣೆಯಿಂದ ಸಮಸ್ಯೆಯಾಗಿದೆ’ ಎಂದು ಪ್ರತಿಕ್ರಿಯಿಸಿದೆ.</p>.<p>ಡಿಸೆಂಬರ್ 1ರಂದು ಸಂಸತ್ತಿನ ಅಧಿವೇಶನ ಆರಂಭವಾಗಲಿದ್ದು, ಅದಕ್ಕೂ ಮುನ್ನ ರಾಜ್ಯಸಭಾ ಸಂಸದರಿಗೆ ನೀಡಲಾದ ಕೈಪಿಡಿಯಲ್ಲಿ ಈ ಸೂಚನೆಗಳನ್ನು ನೀಡಲಾಗಿದೆ.</p>.<p>ಸದನದ ಘನತೆ ಕಾಪಾಡುವ ನಿಟ್ಟಿನಲ್ಲಿ ಸದಸ್ಯರು ತಮ್ಮ ಭಾಷಣಗಳನ್ನು ‘ಧನ್ಯವಾದಗಳು’, ‘ಜೈ ಹಿಂದ್’ ಹಾಗೂ ‘ವಂದೇ ಮಾತರಂ’ ಘೋಷಣೆಗಳೊಂದಿಗೆ ಮುಕ್ತಾಯಗೊಳಿಸಬಾರದು ಎಂದು ರಾಜ್ಯಸಭೆ ಸಚಿವಾಲಯದ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.</p>.<p>ಈ ನಿರ್ಧಾರಕ್ಕೆ ವಿಡಿಯೊ ಸಂದೇಶದಲ್ಲಿ ಖಾರವಾಗಿ ಪ್ರತಿಕ್ರಿಯಿಸಿದ ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಶ್ರೀನೇತ್, ‘ನನಗೆ ನಿಜಕ್ಕೂ ಆಘಾತವಾಗಿದೆ. ಈ ಘೋಷಣೆಳನ್ನು ಕೂಗಲು ಆಕ್ಷೇಪಣೆಯಾದರೂ ಏಕೆ? ದೇಶದ ಸ್ವಾತಂತ್ರ್ಯ ಹೋರಾಟದ ವೇಳೆ ಬಳಸಲಾಗುತ್ತಿದ್ದ ಘೋಷಣೆಗಳ ಕುರಿತು ಬ್ರಿಟಿಷರಿಗೆ ಸಮಸ್ಯೆಗಳಿದ್ದವು. ಈಗ ಬಿಜೆಪಿಗೂ ಸಮಸ್ಯೆ ಉಂಟಾಗಿದೆ’ ಎಂದು ತಿಳಿಸಿದ್ದಾರೆ.</p>.<p>‘ಜೈ ಹಿಂದ್’ ಎಂದರೆ ಹಿಂದೂಸ್ತಾನದ ಗೆಲುವು ಎಂದರ್ಥ. ಭಾರತವು ಸದಾ ಗೆಲುವು ಪಡೆಯಬೇಕು. ದೇಶದ ಸ್ವಾತಂತ್ರ್ಯ ಚಳವಳಿಯಲ್ಲಿಯೂ ಅದು ಅತ್ಯಂತ ಪ್ರಬಲವಾದ ಘೋಷಣೆಯಾಗಿತ್ತು. ಈ ಘೋಷಣೆಯು ಪ್ರತಿ ಭಾರತೀಯನ ಹೃದಯದ ಬಡಿತ ಹೆಚ್ಚಿಸುತ್ತದೆ’ ಎಂದು ತಿಳಿಸಿದ್ದಾರೆ.</p>.<p class="bodytext">ರಾಜ್ಯಸಭಾ ಸಚಿವಾಲಯದ ಮೂಲಗಳ ಪ್ರಕಾರ, ‘ಇಂತಹ ಅಧಿಸೂಚನೆಯನ್ನು ಇದೇ ಮೊದಲ ಬಾರಿಗೆ ಹೊರಡಿಸಿಲ್ಲ. 2005ರಲ್ಲಿ ಯುಪಿಎ ನೇತೃತ್ವದ ಸರ್ಕಾರದ ಅವಧಿಯಲ್ಲೂ ಕೂಡ ಇದೇ ಮಾದರಿಯ ಅಧಿಸೂಚನೆಯನ್ನು ಹೊರಡಿಸಲಾಗಿತ್ತು’ ಎಂದು ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಸಂಸದೀಯ ಶಿಷ್ಟಾಚಾರವನ್ನು ಕಾಪಾಡುವ ನಿಟ್ಟಿನಲ್ಲಿ ಸಂಸದರು ಸದನದ ಒಳಗೆ ಹಾಗೂ ಹೊರಭಾಗದಲ್ಲಿ ‘ವಂದೇ ಮಾತರಂ’ ಹಾಗೂ ‘ಜೈ ಹಿಂದ್’ ಘೋಷಣೆಗಳನ್ನು ಕೂಗುವಂತಿಲ್ಲ ಎಂದು ರಾಜ್ಯಸಭಾ ಸಚಿವಾಲಯವು ನೆನಪಿಸಿದೆ. ಈ ನಿರ್ಧಾರದ ಬೆನ್ನಲ್ಲೇ, ಬಿಜೆಪಿ ವಿರುದ್ಧ ಕಿಡಿಕಾರಿದ ಕಾಂಗ್ರೆಸ್, ‘ದೇಶದ ಸ್ವಾತಂತ್ರ್ಯ ಚಳವಳಿಗೆ ಏನನ್ನೂ ನೀಡದವರಿಗೆ ಈ ಘೋಷಣೆಯಿಂದ ಸಮಸ್ಯೆಯಾಗಿದೆ’ ಎಂದು ಪ್ರತಿಕ್ರಿಯಿಸಿದೆ.</p>.<p>ಡಿಸೆಂಬರ್ 1ರಂದು ಸಂಸತ್ತಿನ ಅಧಿವೇಶನ ಆರಂಭವಾಗಲಿದ್ದು, ಅದಕ್ಕೂ ಮುನ್ನ ರಾಜ್ಯಸಭಾ ಸಂಸದರಿಗೆ ನೀಡಲಾದ ಕೈಪಿಡಿಯಲ್ಲಿ ಈ ಸೂಚನೆಗಳನ್ನು ನೀಡಲಾಗಿದೆ.</p>.<p>ಸದನದ ಘನತೆ ಕಾಪಾಡುವ ನಿಟ್ಟಿನಲ್ಲಿ ಸದಸ್ಯರು ತಮ್ಮ ಭಾಷಣಗಳನ್ನು ‘ಧನ್ಯವಾದಗಳು’, ‘ಜೈ ಹಿಂದ್’ ಹಾಗೂ ‘ವಂದೇ ಮಾತರಂ’ ಘೋಷಣೆಗಳೊಂದಿಗೆ ಮುಕ್ತಾಯಗೊಳಿಸಬಾರದು ಎಂದು ರಾಜ್ಯಸಭೆ ಸಚಿವಾಲಯದ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.</p>.<p>ಈ ನಿರ್ಧಾರಕ್ಕೆ ವಿಡಿಯೊ ಸಂದೇಶದಲ್ಲಿ ಖಾರವಾಗಿ ಪ್ರತಿಕ್ರಿಯಿಸಿದ ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಶ್ರೀನೇತ್, ‘ನನಗೆ ನಿಜಕ್ಕೂ ಆಘಾತವಾಗಿದೆ. ಈ ಘೋಷಣೆಳನ್ನು ಕೂಗಲು ಆಕ್ಷೇಪಣೆಯಾದರೂ ಏಕೆ? ದೇಶದ ಸ್ವಾತಂತ್ರ್ಯ ಹೋರಾಟದ ವೇಳೆ ಬಳಸಲಾಗುತ್ತಿದ್ದ ಘೋಷಣೆಗಳ ಕುರಿತು ಬ್ರಿಟಿಷರಿಗೆ ಸಮಸ್ಯೆಗಳಿದ್ದವು. ಈಗ ಬಿಜೆಪಿಗೂ ಸಮಸ್ಯೆ ಉಂಟಾಗಿದೆ’ ಎಂದು ತಿಳಿಸಿದ್ದಾರೆ.</p>.<p>‘ಜೈ ಹಿಂದ್’ ಎಂದರೆ ಹಿಂದೂಸ್ತಾನದ ಗೆಲುವು ಎಂದರ್ಥ. ಭಾರತವು ಸದಾ ಗೆಲುವು ಪಡೆಯಬೇಕು. ದೇಶದ ಸ್ವಾತಂತ್ರ್ಯ ಚಳವಳಿಯಲ್ಲಿಯೂ ಅದು ಅತ್ಯಂತ ಪ್ರಬಲವಾದ ಘೋಷಣೆಯಾಗಿತ್ತು. ಈ ಘೋಷಣೆಯು ಪ್ರತಿ ಭಾರತೀಯನ ಹೃದಯದ ಬಡಿತ ಹೆಚ್ಚಿಸುತ್ತದೆ’ ಎಂದು ತಿಳಿಸಿದ್ದಾರೆ.</p>.<p class="bodytext">ರಾಜ್ಯಸಭಾ ಸಚಿವಾಲಯದ ಮೂಲಗಳ ಪ್ರಕಾರ, ‘ಇಂತಹ ಅಧಿಸೂಚನೆಯನ್ನು ಇದೇ ಮೊದಲ ಬಾರಿಗೆ ಹೊರಡಿಸಿಲ್ಲ. 2005ರಲ್ಲಿ ಯುಪಿಎ ನೇತೃತ್ವದ ಸರ್ಕಾರದ ಅವಧಿಯಲ್ಲೂ ಕೂಡ ಇದೇ ಮಾದರಿಯ ಅಧಿಸೂಚನೆಯನ್ನು ಹೊರಡಿಸಲಾಗಿತ್ತು’ ಎಂದು ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>