<p class="title"><strong>ನವದೆಹಲಿ: </strong>ಠೇವಣಿದಾರರ ಹಿತವನ್ನು ರಕ್ಷಿಸುವ ಕ್ರಮವಾಗಿ ಸಹಕಾರ ಬ್ಯಾಂಕ್ ಗಳನ್ನೂ ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಮೇಲ್ವಿಚಾರಣಾ ವ್ಯಾಪ್ತಿಗೆ ತರುವ ಮಸೂದೆಗೆ ಸಂಸತ್ತು ಮಂಗಳವಾರ ಅಂಗೀಕಾರ ನೀಡಿದೆ.</p>.<p class="title">ಜೂನ್ 26ರಂದು ಹೊರಡಿಸಲಾದ ಸುಗ್ರೀವಾಜ್ಞೆ ರೂಪದಲ್ಲಿ ಈ ‘ಬ್ಯಾಂಕಿಂಗ್ ನಿಯಂತ್ರಣ (ತಿದ್ದುಪಡಿ) ಕಾಯ್ದೆ 2020’ ಈಗಾಗಲೇ ಜಾರಿಯಲ್ಲಿದೆ. ರಾಜ್ಯಸಭೆಯು ಧ್ವನಿಮತದಿಂದ ಮಸೂದೆಗೆ ಅನುಮೋದನೆ ನೀಡಿತು. ಲೋಕಸಭೆಯು ಸೆ. 16ರಂದು ಇದಕ್ಕೆ ಅಂಗೀಕಾರ ನೀಡಿತ್ತು.</p>.<p class="title">ಸಹಕಾರ ಸಂಘಗಳ ವೃತ್ತಿಪರತೆಯನ್ನು ಬಲಪಡಿಸುವುದು, ಬಂಡವಾಳ ಕ್ರೋಡೀಕರಣಕ್ಕೆ ಅವಕಾಶ, ಆಡಳಿತ ವ್ಯವಸ್ಥೆ ಸುಧಾರಣೆ, ಆರ್.ಬಿ.ಐ ಮೇಲ್ವಿಚಾರಣೆಯ ವ್ಯಾಪ್ತಿಗೆ ತರುವುದು ಇದರ ಉದ್ದೇಶಗಳಾಗಿವೆ.</p>.<p class="title">ರಾಜ್ಯಸಭೆಯಲ್ಲಿ ಮಸೂದೆ ಕುರಿತ ಚರ್ಚೆಗೆ ಉತ್ತರಿಸಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಠೇವಣಿದಾರರ ಹಿತವನ್ನು ಸಂಪೂರ್ಣವಾಗಿ ರಕ್ಷಿಸುವುದು ಈ ಮಸೂದೆಯ ಉದ್ದೇಶ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ: </strong>ಠೇವಣಿದಾರರ ಹಿತವನ್ನು ರಕ್ಷಿಸುವ ಕ್ರಮವಾಗಿ ಸಹಕಾರ ಬ್ಯಾಂಕ್ ಗಳನ್ನೂ ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಮೇಲ್ವಿಚಾರಣಾ ವ್ಯಾಪ್ತಿಗೆ ತರುವ ಮಸೂದೆಗೆ ಸಂಸತ್ತು ಮಂಗಳವಾರ ಅಂಗೀಕಾರ ನೀಡಿದೆ.</p>.<p class="title">ಜೂನ್ 26ರಂದು ಹೊರಡಿಸಲಾದ ಸುಗ್ರೀವಾಜ್ಞೆ ರೂಪದಲ್ಲಿ ಈ ‘ಬ್ಯಾಂಕಿಂಗ್ ನಿಯಂತ್ರಣ (ತಿದ್ದುಪಡಿ) ಕಾಯ್ದೆ 2020’ ಈಗಾಗಲೇ ಜಾರಿಯಲ್ಲಿದೆ. ರಾಜ್ಯಸಭೆಯು ಧ್ವನಿಮತದಿಂದ ಮಸೂದೆಗೆ ಅನುಮೋದನೆ ನೀಡಿತು. ಲೋಕಸಭೆಯು ಸೆ. 16ರಂದು ಇದಕ್ಕೆ ಅಂಗೀಕಾರ ನೀಡಿತ್ತು.</p>.<p class="title">ಸಹಕಾರ ಸಂಘಗಳ ವೃತ್ತಿಪರತೆಯನ್ನು ಬಲಪಡಿಸುವುದು, ಬಂಡವಾಳ ಕ್ರೋಡೀಕರಣಕ್ಕೆ ಅವಕಾಶ, ಆಡಳಿತ ವ್ಯವಸ್ಥೆ ಸುಧಾರಣೆ, ಆರ್.ಬಿ.ಐ ಮೇಲ್ವಿಚಾರಣೆಯ ವ್ಯಾಪ್ತಿಗೆ ತರುವುದು ಇದರ ಉದ್ದೇಶಗಳಾಗಿವೆ.</p>.<p class="title">ರಾಜ್ಯಸಭೆಯಲ್ಲಿ ಮಸೂದೆ ಕುರಿತ ಚರ್ಚೆಗೆ ಉತ್ತರಿಸಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಠೇವಣಿದಾರರ ಹಿತವನ್ನು ಸಂಪೂರ್ಣವಾಗಿ ರಕ್ಷಿಸುವುದು ಈ ಮಸೂದೆಯ ಉದ್ದೇಶ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>