<p><strong>ನವದೆಹಲಿ:</strong> ಹಿಂಸಾಚಾರ ಪೀಡಿತ ಮಣಿಪುರ ವಿಚಾರವಾಗಿ ವಿರೋಧ ಪಕ್ಷಗಳ ಸದಸ್ಯರು ಸಭಾತ್ಯಾಗ ಮಾಡಿದ ಮಧ್ಯೆಯೇ, ಕಡಲ ತೀರದಲ್ಲಿನ ಖನಿಜಗಳ ಅನ್ವೇಷಣೆ, ಗಣಿಗಾರಿಕೆಗೆ 50 ವರ್ಷಗಳ ಕಾಲ ಗುತ್ತಿಗೆ ನೀಡುವುದಕ್ಕೆ ಅವಕಾಶ ಕಲ್ಪಿಸುವ ಮಸೂದೆಯನ್ನು ರಾಜ್ಯಸಭೆಯಲ್ಲಿ ಗುರುವಾರ ಅಂಗೀಕರಿಸಲಾಯಿತು.</p>.<p>ಭೋಜನ ವಿರಾಮದ ನಂತರ ಕಲಾಪ ಆರಂಭಗೊಂಡಾಗ ಮಣಿಪುರದಲ್ಲಿನ ಪರಿಸ್ಥಿತಿಯನ್ನು ಮತ್ತೆ ಪ್ರಸ್ತಾಪಿಸಿದ ವಿರೋಧ ಪಕ್ಷಗಳ ಸದಸ್ಯರು, ಕಣಿವೆ ರಾಜ್ಯದ ಪರಿಸ್ಥಿತಿ ಕುರಿತು ಚರ್ಚೆ ನಡೆಸಬೇಕು ಎಂದು ಪಟ್ಟು ಹಿಡಿದರು.</p>.<p>ಈ ಗದ್ದಲ ನಡುವೆಯೇ, ಕೇಂದ್ರ ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಲ್ಹಾದ ಜೋಶಿ ಅವರು ‘ಕಡಲತೀರದ ಖನಿಜಗಳ (ಅಭಿವೃದ್ಧಿ ಮತ್ತು ನಿಯಂತ್ರಣ) ತಿದ್ದುಪಡಿ ಮಸೂದೆ, 2023’ ಮಂಡಿಸಿದರು.</p>.<p>ಕಡಲ ಕಿನಾರೆಯಲ್ಲಿ ಲಭ್ಯವಿರುವ ಖನಿಜಗಳ ಅನ್ವೇಷಣೆ, ಅವುಗಳ ಅಭಿವೃದ್ಧಿ ಹಾಗೂ ಹರಾಜಿಗೆ ಈ ಮಸೂದೆ ಅವಕಾಶ ಒದಗಿಸುತ್ತದೆ. ಈ ಗುತ್ತಿಗೆಯನ್ನು ಸ್ಪರ್ಧಾತ್ಮಕ ಬಿಡ್ಡಿಂಗ್ ಪ್ರಕ್ರಿಯೆ ಮೂಲಕ ಖಾಸಗಿ ವಲಯಕ್ಕೂ ನೀಡುವ ಅವಕಾಶವನ್ನು ಒದಗಿಸುತ್ತದೆ.</p>.<p>‘ಗುತ್ತಿಗೆ ಪಡೆದ ನಂತರ, ಖನಿಜಗಳ ಉತ್ಪಾದನೆ ಮತ್ತು ಸಾಗಣೆಗೆ ನಾಲ್ಕು ವರ್ಷಗಳ ಸಮಯಾವಕಾಶ ಒದಗಿಸಲಾಗುತ್ತದೆ. ಉತ್ಪಾದನೆ ಮತ್ತು ಸಾಗಣೆ ಕಾರ್ಯ ಸ್ಥಗಿತಗೊಂಡಿದ್ದ ಸಂದರ್ಭದಲ್ಲಿ ಅದನ್ನು ಪುನಃ ಆರಂಭಿಸುವ ಸಲುವಾಗಿ ಮತ್ತೆ ಎರಡು ವರ್ಷಗಳ ಅವಕಾಶ ನೀಡುವ ಉದ್ದೇಶವನ್ನೂ ಈ ಮಸೂದೆ ಒಳಗೊಂಡಿದೆ.</p>.<p>ಅಣುಶಕ್ತಿ ಕ್ಷೇತ್ರದಲ್ಲಿ ಬಳಸುವ ಖನಿಜಗಳ ಅನ್ವೇಷಣೆ ಅಥವಾ ಉತ್ಪಾದನೆಯ ಪರವಾನಗಿಯನ್ನು ಸರ್ಕಾರಿ ಇಲ್ಲವೇ ಸರ್ಕಾರದ ಅಧೀನದ ನಿಗಮಕ್ಕೆ ಮಾತ್ರ ನೀಡುವ ಅಂಶವೂ ಮಸೂದೆಯಲ್ಲಿದೆ.</p>.<p>ಈ ಮಸೂದೆಯನ್ನು ಲೋಕಸಭೆಯಲ್ಲಿ ಮಂಗಳವಾರ ಅಂಗೀಕರಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಹಿಂಸಾಚಾರ ಪೀಡಿತ ಮಣಿಪುರ ವಿಚಾರವಾಗಿ ವಿರೋಧ ಪಕ್ಷಗಳ ಸದಸ್ಯರು ಸಭಾತ್ಯಾಗ ಮಾಡಿದ ಮಧ್ಯೆಯೇ, ಕಡಲ ತೀರದಲ್ಲಿನ ಖನಿಜಗಳ ಅನ್ವೇಷಣೆ, ಗಣಿಗಾರಿಕೆಗೆ 50 ವರ್ಷಗಳ ಕಾಲ ಗುತ್ತಿಗೆ ನೀಡುವುದಕ್ಕೆ ಅವಕಾಶ ಕಲ್ಪಿಸುವ ಮಸೂದೆಯನ್ನು ರಾಜ್ಯಸಭೆಯಲ್ಲಿ ಗುರುವಾರ ಅಂಗೀಕರಿಸಲಾಯಿತು.</p>.<p>ಭೋಜನ ವಿರಾಮದ ನಂತರ ಕಲಾಪ ಆರಂಭಗೊಂಡಾಗ ಮಣಿಪುರದಲ್ಲಿನ ಪರಿಸ್ಥಿತಿಯನ್ನು ಮತ್ತೆ ಪ್ರಸ್ತಾಪಿಸಿದ ವಿರೋಧ ಪಕ್ಷಗಳ ಸದಸ್ಯರು, ಕಣಿವೆ ರಾಜ್ಯದ ಪರಿಸ್ಥಿತಿ ಕುರಿತು ಚರ್ಚೆ ನಡೆಸಬೇಕು ಎಂದು ಪಟ್ಟು ಹಿಡಿದರು.</p>.<p>ಈ ಗದ್ದಲ ನಡುವೆಯೇ, ಕೇಂದ್ರ ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಲ್ಹಾದ ಜೋಶಿ ಅವರು ‘ಕಡಲತೀರದ ಖನಿಜಗಳ (ಅಭಿವೃದ್ಧಿ ಮತ್ತು ನಿಯಂತ್ರಣ) ತಿದ್ದುಪಡಿ ಮಸೂದೆ, 2023’ ಮಂಡಿಸಿದರು.</p>.<p>ಕಡಲ ಕಿನಾರೆಯಲ್ಲಿ ಲಭ್ಯವಿರುವ ಖನಿಜಗಳ ಅನ್ವೇಷಣೆ, ಅವುಗಳ ಅಭಿವೃದ್ಧಿ ಹಾಗೂ ಹರಾಜಿಗೆ ಈ ಮಸೂದೆ ಅವಕಾಶ ಒದಗಿಸುತ್ತದೆ. ಈ ಗುತ್ತಿಗೆಯನ್ನು ಸ್ಪರ್ಧಾತ್ಮಕ ಬಿಡ್ಡಿಂಗ್ ಪ್ರಕ್ರಿಯೆ ಮೂಲಕ ಖಾಸಗಿ ವಲಯಕ್ಕೂ ನೀಡುವ ಅವಕಾಶವನ್ನು ಒದಗಿಸುತ್ತದೆ.</p>.<p>‘ಗುತ್ತಿಗೆ ಪಡೆದ ನಂತರ, ಖನಿಜಗಳ ಉತ್ಪಾದನೆ ಮತ್ತು ಸಾಗಣೆಗೆ ನಾಲ್ಕು ವರ್ಷಗಳ ಸಮಯಾವಕಾಶ ಒದಗಿಸಲಾಗುತ್ತದೆ. ಉತ್ಪಾದನೆ ಮತ್ತು ಸಾಗಣೆ ಕಾರ್ಯ ಸ್ಥಗಿತಗೊಂಡಿದ್ದ ಸಂದರ್ಭದಲ್ಲಿ ಅದನ್ನು ಪುನಃ ಆರಂಭಿಸುವ ಸಲುವಾಗಿ ಮತ್ತೆ ಎರಡು ವರ್ಷಗಳ ಅವಕಾಶ ನೀಡುವ ಉದ್ದೇಶವನ್ನೂ ಈ ಮಸೂದೆ ಒಳಗೊಂಡಿದೆ.</p>.<p>ಅಣುಶಕ್ತಿ ಕ್ಷೇತ್ರದಲ್ಲಿ ಬಳಸುವ ಖನಿಜಗಳ ಅನ್ವೇಷಣೆ ಅಥವಾ ಉತ್ಪಾದನೆಯ ಪರವಾನಗಿಯನ್ನು ಸರ್ಕಾರಿ ಇಲ್ಲವೇ ಸರ್ಕಾರದ ಅಧೀನದ ನಿಗಮಕ್ಕೆ ಮಾತ್ರ ನೀಡುವ ಅಂಶವೂ ಮಸೂದೆಯಲ್ಲಿದೆ.</p>.<p>ಈ ಮಸೂದೆಯನ್ನು ಲೋಕಸಭೆಯಲ್ಲಿ ಮಂಗಳವಾರ ಅಂಗೀಕರಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>