<p><strong>ನವದೆಹಲಿ:</strong> ‘ಡಿಜಿಟಲ್ ವೈಯಕ್ತಿಕ ದತ್ತಾಂಶ ಸಂರಕ್ಷಣಾ ಮಸೂದೆ–2023’ ಅನ್ನು ರಾಜ್ಯಸಭೆಯಲ್ಲಿ ಬುಧವಾರ ಅಂಗೀಕರಿಸಲಾಯಿತು.</p><p>ಮಣಿಪುರದಲ್ಲಿನ ಪರಿಸ್ಥಿತಿ ವಿಚಾರವಾಗಿ ವಿರೋಧ ಪಕ್ಷಗಳು ಸಭಾತ್ಯಾಗ ಮಾಡಿದ ನಂತರ ಧ್ವನಿಮತದ ಮೇಲೆ ಮಸೂದೆಯನ್ನು ಅಂಗೀಕರಿಸಲಾಯಿತು.</p><p>‘ಖಾಸಗಿತನ ಹಕ್ಕ’ನ್ನು ಮೂಲಭೂತ ಹಕ್ಕು ಎಂದು ಸುಪ್ರೀಂಕೋರ್ಟ್ ಘೋಷಿಸಿದ ಆರು ವರ್ಷಗಳ ನಂತರ ಈ ಕುರಿತ ಮಸೂದೆಯನ್ನು ಮಂಡಿಸಿ, ಅಂಗೀಕಾರ ಪಡೆದಂತಾಗಿದೆ. ಆನ್ಲೈನ್ ವೇದಿಕೆಗಳಲ್ಲಿ ಜನರ ವೈಯಕ್ತಿಕ ದತ್ತಾಂಶ ದುರ್ಬಳಕೆಯಾಗುವುದನ್ನು ತಡೆಯುವ ಅವಕಾಶಗಳನ್ನು ಈ ಮಸೂದೆ ಒಳಗೊಂಡಿದೆ.</p>.<p>ಇದಕ್ಕೂ ಮುನ್ನ ಮಸೂದೆ ಮಂಡಿಸಿ ಮಾತನಾಡಿದ ಕೇಂದ್ರ ಐಟಿ ಸಚಿವ ಅಶ್ವಿನಿ ವೈಷ್ಣವ್, ‘ಮಸೂದೆ ಕುರಿತು ವಿರೋಧ ಪಕ್ಷಗಳು ಚರ್ಚೆ ನಡೆಸಬೇಕಿತ್ತು. ನಾಗರಿಕರ ಹಕ್ಕುಗಳ ಬಗ್ಗೆ ವಿಪಕ್ಷಗಳ ಯಾವುದೇ ನಾಯಕ ಅಥವಾ ಸದಸ್ಯರಿಗೆ ಕಾಳಜಿ ಇಲ್ಲ’ ಎಂದರು.</p>.<p>ಅಂಗೀಕಾರ: ದೇಶದ ವಿಶ್ವವಿದ್ಯಾಲಯಗಳಲ್ಲಿ ಕೈಗೊಳ್ಳುವ ಸಂಶೋಧನೆಗೆ ಅನುದಾನ ಒದಗಿಸುವ ಸಂಸ್ಥೆಯೊಂದರ ಸ್ಥಾಪನೆ ಸೇರಿದಂತೆ ಮಹತ್ವದ ಅವಕಾಶಗಳನ್ನು ಒಳಗೊಂಡಿರುವ ‘ರಾಷ್ಟ್ರೀಯ ಸಂಶೋಧನಾ ಪ್ರತಿಷ್ಠಾನ ಮಸೂದೆ–2023’ ಅನ್ನು ಕೂಡ ರಾಜ್ಯಸಭೆಯಲ್ಲಿ ಅಂಗೀಕರಿಸಲಾಯಿತು.</p>.<p>ಸಚಿವ ಜಿತೇಂದ್ರ ಸಿಂಗ್ ಮಸೂದೆ ಮಂಡಿಸಿದರು. ವಿಪಕ್ಷಗಳ ಸದಸ್ಯರು ಅದಾಗಲೇ ಸಭಾತ್ಯಾಗ ಮಾಡಿದ್ದರಿಂದಾಗಿ, ಧ್ವನಿ ಮತದ ಮೂಲಕ ಮಸೂದೆಯನ್ನು ಅಂಗೀಕರಿಸಲಾಯಿತು.</p>.<p>ಈ ಎರಡೂ ಮಸೂದೆಗಳನ್ನು ಲೋಕಸಭೆಯಲ್ಲಿ ಸೋಮವಾರ ಅಂಗೀಕರಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಡಿಜಿಟಲ್ ವೈಯಕ್ತಿಕ ದತ್ತಾಂಶ ಸಂರಕ್ಷಣಾ ಮಸೂದೆ–2023’ ಅನ್ನು ರಾಜ್ಯಸಭೆಯಲ್ಲಿ ಬುಧವಾರ ಅಂಗೀಕರಿಸಲಾಯಿತು.</p><p>ಮಣಿಪುರದಲ್ಲಿನ ಪರಿಸ್ಥಿತಿ ವಿಚಾರವಾಗಿ ವಿರೋಧ ಪಕ್ಷಗಳು ಸಭಾತ್ಯಾಗ ಮಾಡಿದ ನಂತರ ಧ್ವನಿಮತದ ಮೇಲೆ ಮಸೂದೆಯನ್ನು ಅಂಗೀಕರಿಸಲಾಯಿತು.</p><p>‘ಖಾಸಗಿತನ ಹಕ್ಕ’ನ್ನು ಮೂಲಭೂತ ಹಕ್ಕು ಎಂದು ಸುಪ್ರೀಂಕೋರ್ಟ್ ಘೋಷಿಸಿದ ಆರು ವರ್ಷಗಳ ನಂತರ ಈ ಕುರಿತ ಮಸೂದೆಯನ್ನು ಮಂಡಿಸಿ, ಅಂಗೀಕಾರ ಪಡೆದಂತಾಗಿದೆ. ಆನ್ಲೈನ್ ವೇದಿಕೆಗಳಲ್ಲಿ ಜನರ ವೈಯಕ್ತಿಕ ದತ್ತಾಂಶ ದುರ್ಬಳಕೆಯಾಗುವುದನ್ನು ತಡೆಯುವ ಅವಕಾಶಗಳನ್ನು ಈ ಮಸೂದೆ ಒಳಗೊಂಡಿದೆ.</p>.<p>ಇದಕ್ಕೂ ಮುನ್ನ ಮಸೂದೆ ಮಂಡಿಸಿ ಮಾತನಾಡಿದ ಕೇಂದ್ರ ಐಟಿ ಸಚಿವ ಅಶ್ವಿನಿ ವೈಷ್ಣವ್, ‘ಮಸೂದೆ ಕುರಿತು ವಿರೋಧ ಪಕ್ಷಗಳು ಚರ್ಚೆ ನಡೆಸಬೇಕಿತ್ತು. ನಾಗರಿಕರ ಹಕ್ಕುಗಳ ಬಗ್ಗೆ ವಿಪಕ್ಷಗಳ ಯಾವುದೇ ನಾಯಕ ಅಥವಾ ಸದಸ್ಯರಿಗೆ ಕಾಳಜಿ ಇಲ್ಲ’ ಎಂದರು.</p>.<p>ಅಂಗೀಕಾರ: ದೇಶದ ವಿಶ್ವವಿದ್ಯಾಲಯಗಳಲ್ಲಿ ಕೈಗೊಳ್ಳುವ ಸಂಶೋಧನೆಗೆ ಅನುದಾನ ಒದಗಿಸುವ ಸಂಸ್ಥೆಯೊಂದರ ಸ್ಥಾಪನೆ ಸೇರಿದಂತೆ ಮಹತ್ವದ ಅವಕಾಶಗಳನ್ನು ಒಳಗೊಂಡಿರುವ ‘ರಾಷ್ಟ್ರೀಯ ಸಂಶೋಧನಾ ಪ್ರತಿಷ್ಠಾನ ಮಸೂದೆ–2023’ ಅನ್ನು ಕೂಡ ರಾಜ್ಯಸಭೆಯಲ್ಲಿ ಅಂಗೀಕರಿಸಲಾಯಿತು.</p>.<p>ಸಚಿವ ಜಿತೇಂದ್ರ ಸಿಂಗ್ ಮಸೂದೆ ಮಂಡಿಸಿದರು. ವಿಪಕ್ಷಗಳ ಸದಸ್ಯರು ಅದಾಗಲೇ ಸಭಾತ್ಯಾಗ ಮಾಡಿದ್ದರಿಂದಾಗಿ, ಧ್ವನಿ ಮತದ ಮೂಲಕ ಮಸೂದೆಯನ್ನು ಅಂಗೀಕರಿಸಲಾಯಿತು.</p>.<p>ಈ ಎರಡೂ ಮಸೂದೆಗಳನ್ನು ಲೋಕಸಭೆಯಲ್ಲಿ ಸೋಮವಾರ ಅಂಗೀಕರಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>