<p>ನವದೆಹಲಿ (ಪಿಟಿಐ): ಬಹು ರಾಜ್ಯ ಸಹಕಾರ ಸಂಘಗಳ (ತಿದ್ದುಪಡಿ) ಮಸೂದೆ–2023 ಅನ್ನು ಸಂಸತ್ನಲ್ಲಿ ಮಂಗಳವಾರ ಅಂಗೀಕರಿಸಲಾಯಿತು.</p>.<p>ಕೇಂದ್ರ ಸಹಕಾರ ಖಾತೆ ರಾಜ್ಯ ಸಚಿವ ಬಿ.ಎಲ್.ವರ್ಮಾ ಅವರು ರಾಜ್ಯಸಭೆಯಲ್ಲಿ ತಿದ್ದುಪಡಿ ಮಸೂದೆಯನ್ನು ಮಂಡಿಸಿದರು. ಗದ್ದಲ ನಡೆಸಿದ್ದ ವಿರೋಧ ಪಕ್ಷಗಳ ಸದಸ್ಯರು ನಂತರ ಸಭಾತ್ಯಾಗ ಮಾಡಿದ್ದರು. ಹೀಗಾಗಿ ಧ್ವನಿಮತದ ಮೇಲೆ ರಾಜ್ಯಸಭೆಯಲ್ಲಿ ಈ ತಿದ್ದುಪಡಿ ಮಸೂದೆಯನ್ನು ಅಂಗೀಕರಿಸಲಾಯಿತು.</p>.<p>ಜುಲೈ 25ರಂದು ಲೋಕಸಭೆಯಲ್ಲಿ ಈ ಮಸೂದೆಗೆ ಅಂಗೀಕಾರ ನೀಡಲಾಗಿತ್ತು. </p>.<p>ಮಸೂದೆ ಕುರಿತ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವ ವರ್ಮಾ, ‘ಸಹಕಾರ ಸಂಘಗಳಲ್ಲಿ ನೌಕರರ ನೇಮಕಾತಿಗೆ ನಿಯಮಗಳನ್ನು ರೂಪಿಸಲು ಈ ಮಸೂದೆ ಅವಕಾಶ ಕಲ್ಪಿಸುತ್ತದೆ. ಜೊತೆಗೆ, ಸ್ವಜನ ಪಕ್ಷಪಾತಕ್ಕೆ ಕಡಿವಾಣ ಹಾಕಲಿದೆ’ ಎಂದರು.</p>.<p>‘ಉದ್ಯೋಗ ಸೃಷ್ಟಿ ವಿಷಯಕ್ಕೆ ಬಂದಾಗ ಖಾಸಗಿ ವಲಯದಲ್ಲಿ ಮಿತಿ ಇದೆ. ಎಲ್ಪಿಜಿ, ಪೆಟ್ರೋಲ್ ಪಂಪ್ಗಳ ಡೀಲರ್ಶಿಪ್ಗಳಿಗೆ ಅವಕಾಶ ನೀಡುವ ಮೂಲಕ ಸಹಕಾರ ಕ್ಷೇತ್ರದ ಕಾರ್ಯವ್ಯಾಪ್ತಿ ಹಿಗ್ಗಿಸಿ, ಅವುಗಳನ್ನು ಬಲಪಡಿಸಲಾಗುತ್ತದೆ’ ಎಂದು ಸದನದ ಗಮನಕ್ಕೆ ತಂದರು.</p>.<p>‘ಸಹಕಾರ ಸಂಘಗಳಿಗೆ ನಡೆಯುವ ಚುನಾವಣೆಯಲ್ಲಿ ಸುಧಾರಣೆ ತರಲು ತಿದ್ದುಪಡಿ ಮಸೂದೆ ಅವಕಾಶ ನೀಡುತ್ತದೆ. ಇದಕ್ಕಾಗಿ ಸಹಕಾರ ಚುನಾವಣೆ ಪ್ರಾಧಿಕಾರ ಸ್ಥಾಪಿಸಲಾಗುತ್ತದೆ’ ಎಂದು ವಿವರಿಸಿದರು.</p>.<p>ಬಿಜೆಡಿಯ ನಿರಂಜನ್ ಬಿಶಿ, ವೈಎಸ್ಆರ್ಸಿಪಿಯ ಎಸ್.ನಿರಂಜನ್ ರೆಡ್ಡಿ ಮತ್ತು ಎಐಎಡಿಎಂಕೆ ಸಂಸದ ಎಂ.ತಂಬಿದೊರೈ ಅವರು ಮಸೂದೆಯನ್ನು ಬೆಂಬಲಿಸಿ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ (ಪಿಟಿಐ): ಬಹು ರಾಜ್ಯ ಸಹಕಾರ ಸಂಘಗಳ (ತಿದ್ದುಪಡಿ) ಮಸೂದೆ–2023 ಅನ್ನು ಸಂಸತ್ನಲ್ಲಿ ಮಂಗಳವಾರ ಅಂಗೀಕರಿಸಲಾಯಿತು.</p>.<p>ಕೇಂದ್ರ ಸಹಕಾರ ಖಾತೆ ರಾಜ್ಯ ಸಚಿವ ಬಿ.ಎಲ್.ವರ್ಮಾ ಅವರು ರಾಜ್ಯಸಭೆಯಲ್ಲಿ ತಿದ್ದುಪಡಿ ಮಸೂದೆಯನ್ನು ಮಂಡಿಸಿದರು. ಗದ್ದಲ ನಡೆಸಿದ್ದ ವಿರೋಧ ಪಕ್ಷಗಳ ಸದಸ್ಯರು ನಂತರ ಸಭಾತ್ಯಾಗ ಮಾಡಿದ್ದರು. ಹೀಗಾಗಿ ಧ್ವನಿಮತದ ಮೇಲೆ ರಾಜ್ಯಸಭೆಯಲ್ಲಿ ಈ ತಿದ್ದುಪಡಿ ಮಸೂದೆಯನ್ನು ಅಂಗೀಕರಿಸಲಾಯಿತು.</p>.<p>ಜುಲೈ 25ರಂದು ಲೋಕಸಭೆಯಲ್ಲಿ ಈ ಮಸೂದೆಗೆ ಅಂಗೀಕಾರ ನೀಡಲಾಗಿತ್ತು. </p>.<p>ಮಸೂದೆ ಕುರಿತ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವ ವರ್ಮಾ, ‘ಸಹಕಾರ ಸಂಘಗಳಲ್ಲಿ ನೌಕರರ ನೇಮಕಾತಿಗೆ ನಿಯಮಗಳನ್ನು ರೂಪಿಸಲು ಈ ಮಸೂದೆ ಅವಕಾಶ ಕಲ್ಪಿಸುತ್ತದೆ. ಜೊತೆಗೆ, ಸ್ವಜನ ಪಕ್ಷಪಾತಕ್ಕೆ ಕಡಿವಾಣ ಹಾಕಲಿದೆ’ ಎಂದರು.</p>.<p>‘ಉದ್ಯೋಗ ಸೃಷ್ಟಿ ವಿಷಯಕ್ಕೆ ಬಂದಾಗ ಖಾಸಗಿ ವಲಯದಲ್ಲಿ ಮಿತಿ ಇದೆ. ಎಲ್ಪಿಜಿ, ಪೆಟ್ರೋಲ್ ಪಂಪ್ಗಳ ಡೀಲರ್ಶಿಪ್ಗಳಿಗೆ ಅವಕಾಶ ನೀಡುವ ಮೂಲಕ ಸಹಕಾರ ಕ್ಷೇತ್ರದ ಕಾರ್ಯವ್ಯಾಪ್ತಿ ಹಿಗ್ಗಿಸಿ, ಅವುಗಳನ್ನು ಬಲಪಡಿಸಲಾಗುತ್ತದೆ’ ಎಂದು ಸದನದ ಗಮನಕ್ಕೆ ತಂದರು.</p>.<p>‘ಸಹಕಾರ ಸಂಘಗಳಿಗೆ ನಡೆಯುವ ಚುನಾವಣೆಯಲ್ಲಿ ಸುಧಾರಣೆ ತರಲು ತಿದ್ದುಪಡಿ ಮಸೂದೆ ಅವಕಾಶ ನೀಡುತ್ತದೆ. ಇದಕ್ಕಾಗಿ ಸಹಕಾರ ಚುನಾವಣೆ ಪ್ರಾಧಿಕಾರ ಸ್ಥಾಪಿಸಲಾಗುತ್ತದೆ’ ಎಂದು ವಿವರಿಸಿದರು.</p>.<p>ಬಿಜೆಡಿಯ ನಿರಂಜನ್ ಬಿಶಿ, ವೈಎಸ್ಆರ್ಸಿಪಿಯ ಎಸ್.ನಿರಂಜನ್ ರೆಡ್ಡಿ ಮತ್ತು ಎಐಎಡಿಎಂಕೆ ಸಂಸದ ಎಂ.ತಂಬಿದೊರೈ ಅವರು ಮಸೂದೆಯನ್ನು ಬೆಂಬಲಿಸಿ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>