ಬಂಧನ ಅವಧಿ ಜ.5ರ ವರೆಗೆ ವಿಸ್ತರಣೆ
ಸಂಸತ್ತಿನ ಭದ್ರತಾ ಲೋಪ ಪ್ರಕರಣದ ನಾಲ್ವರು ಆರೋಪಿಗಳ ಪೊಲೀಸ್ ವಶದ ಅವಧಿಯನ್ನು ಜನವರಿ 5ರವರೆಗೆ ವಿಸ್ತರಿಸಿ ದೆಹಲಿಯ ನ್ಯಾಯಾಲಯವೊಂದು ಆದೇಶ ಹೊರಡಿಸಿದೆ.
ಆರೋಪಿಗಳಾದ ಮನೋರಂಜನ್ ಡಿ., ಸಾಗರ್ ಶರ್ಮಾ, ಅಮೋಲ್ ಧನರಾಜ್ ಶಿಂದೆ ಮತ್ತು ನೀಲಂ ದೇವಿ ಅವರನ್ನು ಏಳು ದಿನಗಳ ಅವಧಿಗೆ ಪೊಲೀಸ್ ವಶಕ್ಕೆ ನೀಡಲಾಗಿತ್ತು. ಅವಧಿಯನ್ನು ಇನ್ನೂ 15 ದಿನಗಳಿಗೆ ವಿಸ್ತರಿಸುವಂತೆ ದೆಹಲಿ ಪೊಲೀಸರು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ವಿಶೇಷ ನ್ಯಾಯಾಧೀಶೆ ಹರದೀಪ್ ಕೌರ್ ಅವರು ಈ ಆದೇಶ ಹೊರಡಿಸಿದ್ದಾರೆ.