<p><strong>ನವದೆಹಲಿ</strong>: ಸಂಸತ್ತಿನ ಕಲಾಪ ಸೋಮವಾರ ಪುನರಾರಂಭವಾಗಲಿದ್ದು, ‘ನೀಟ್’ ಅಕ್ರಮವನ್ನು ಮುಖ್ಯವಾಗಿ ಪ್ರಸ್ತಾಪಿಸಿ ಸರ್ಕಾರದ ವಿರುದ್ಧ ವಾಗ್ಯುದ್ಧ ನಡೆಸಲು ವಿರೋಧಪಕ್ಷಗಳು ಸಿದ್ಧತೆ ನಡೆಸಿದ್ದು, ಉಭಯ ಸದನಗಳು ವಾಕ್ಸಮರಕ್ಕೆ ವೇದಿಕೆಯಾಗುವ ಸಾಧ್ಯತೆಗಳಿವೆ. </p>.<p>ನೀಟ್ ಅವ್ಯವಹಾರದ ಜೊತೆಗೆ, ಸೇನೆಗೆ ಯುವಜನರ ನೇಮಕಾತಿಯ ‘ಅಗ್ನಿಪಥ್’ ಯೋಜನೆ, ಹಣದುಬ್ಬರ ಸಮಸ್ಯೆ ಹಾಗೂ ಯುವಜನರನ್ನು ಕಾಡುತ್ತಿರುವ ನಿರುದ್ಯೋಗದ ಸಮಸ್ಯೆಗಳ ಕುರಿತೂ ವಿರೋಧಪಕ್ಷಗಳು ಪ್ರಮುಖವಾಗಿ ಗಮನಸೆಳೆಯುವ ಸಾಧ್ಯತೆಗಳು ಇವೆ. </p>.<p>ಲೋಕಸಭೆಯಲ್ಲಿ ಬಿಜೆಪಿ ಸಂಸದ, ಮಾಜಿ ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರು, ರಾಷ್ಟ್ರಪತಿಗಳ ಭಾಷಣಕ್ಕೆ ವಂದನೆ ಸಲ್ಲಿಸುವ ನಿರ್ಣಯದ ಮೇಲೆ ಚರ್ಚೆ ಆರಂಭಿಸಲಿದ್ದು, ನಿರ್ಣಯವನ್ನು ಬಿಜೆಪಿ ಸಂಸದೆ ಬಾನ್ಸುರಿ ಸ್ವರಾಜ್ ಅವರು ಅನುಮೋದಿಸುವರು.</p>.<p>ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಲೋಕಸಭೆಯಲ್ಲಿ ಒಟ್ಟು 16 ಗಂಟೆ ಸಮಯ ನಿಗದಿಪಡಿಸಲಾಗಿದೆ. ಕೊನೆಯಲ್ಲಿ ಬಹುತೇಕ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ನೀಡಲಿದ್ದಾರೆ.</p>.<p>ವಂದನಾ ನಿರ್ಣಯದ ಮೇಲಿನ ಚರ್ಚೆಗೆ ರಾಜ್ಯಸಭೆಯಲ್ಲಿ 21 ಗಂಟೆ ನಿಗದಿಪಡಿಸಿದ್ದು, ಅಲ್ಲಿ ಬುಧವಾರದಂದು ಪ್ರಧಾನಿ ಉತ್ತರ ನೀಡಲಿದ್ದಾರೆ. ನೀಟ್ ಪರೀಕ್ಷೆಯ ಗೊಂದಲ ಈಗಾಗಲೇ ಸಂಸತ್ತಿನಲ್ಲಿ ಪ್ರತಿಭಟನೆ ನಡೆಸಿದ್ದು, ಕೋಲಾಹಲಕ್ಕೂ ಕಾರಣವಾಗಿದೆ. </p>.<p>ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್ಟಿಎ) ಆಯೋಜಿಸಿದ್ದ ನೀಟ್–ಯುಜಿ ಪರೀಕ್ಷೆ ತೀವ್ರ ಗೊಂದಲಕ್ಕೆ ಕಾರಣವಾಗಿದೆ. ಬಿಹಾರದಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯಾಗಿದ್ದು, ಇತರೆಡೆಯೂ ಅಕ್ರಮಗಳು ನಡೆದಿವೆ. ಮೇ 5ರಂದು ನಡೆದಿದ್ದ ಪರೀಕ್ಷೆಗೆ 24 ಲಕ್ಷ ಅಭ್ಯರ್ಥಿಗಳು ಹಾಜರಾಗಿದ್ದರು.</p>.<p>ರಾಜ್ಯಸಭೆಯಲ್ಲಿ ವಂದನಾ ನಿರ್ಣಯದ ಮೇಲೆ ಚರ್ಚೆ ಆರಂಭಿಸಿದ್ದ ಬಿಜೆಪಿ ಸದಸ್ಯ ಸುಧಾಂಶು ತ್ರಿವೇದಿ, ‘ಮೋದಿ ಅವರಿಗೆ ಸರಿಸಾಟಿಯೇ ಇಲ್ಲ‘ ಎಂದು ಬಣ್ಣಿಸಿದ್ದರು. ಬಿಜೆಪಿಯ ಕವಿತಾ ಪಾಟಿದಾರ್ ನಿರ್ಣಯ ಅನುಮೋದಿಸಿದ್ದರು. ಚರ್ಚೆಯಲ್ಲಿ ಇತರೆ 9 ಸದಸ್ಯರು ಭಾಗಿಯಾಗಿದ್ದರು.</p>.<p>ವಂದನಾ ನಿರ್ಣಯಕ್ಕೂ ಮೊದಲು ನೀಟ್ ವಿಷಯ ಕುರಿತು ಚರ್ಚೆ ನಡೆಯಬೇಕು ಎಂದು ಒತ್ತಾಯಿಸಿ ವಿರೋಧಪಕ್ಷಗಳು ರಾಜ್ಯಸಭೆಯಲ್ಲಿ ನಿಲುವಳಿ ಸೂಚನೆ ಮಂಡಿಸಿವೆ. ಚರ್ಚೆಗೆ ಆಗ್ರಹಿಸಿ ವಿರೋಧಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷರ ಪೀಠದ ಎದುರಿಗೂ ಧಾವಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಸಂಸತ್ತಿನ ಕಲಾಪ ಸೋಮವಾರ ಪುನರಾರಂಭವಾಗಲಿದ್ದು, ‘ನೀಟ್’ ಅಕ್ರಮವನ್ನು ಮುಖ್ಯವಾಗಿ ಪ್ರಸ್ತಾಪಿಸಿ ಸರ್ಕಾರದ ವಿರುದ್ಧ ವಾಗ್ಯುದ್ಧ ನಡೆಸಲು ವಿರೋಧಪಕ್ಷಗಳು ಸಿದ್ಧತೆ ನಡೆಸಿದ್ದು, ಉಭಯ ಸದನಗಳು ವಾಕ್ಸಮರಕ್ಕೆ ವೇದಿಕೆಯಾಗುವ ಸಾಧ್ಯತೆಗಳಿವೆ. </p>.<p>ನೀಟ್ ಅವ್ಯವಹಾರದ ಜೊತೆಗೆ, ಸೇನೆಗೆ ಯುವಜನರ ನೇಮಕಾತಿಯ ‘ಅಗ್ನಿಪಥ್’ ಯೋಜನೆ, ಹಣದುಬ್ಬರ ಸಮಸ್ಯೆ ಹಾಗೂ ಯುವಜನರನ್ನು ಕಾಡುತ್ತಿರುವ ನಿರುದ್ಯೋಗದ ಸಮಸ್ಯೆಗಳ ಕುರಿತೂ ವಿರೋಧಪಕ್ಷಗಳು ಪ್ರಮುಖವಾಗಿ ಗಮನಸೆಳೆಯುವ ಸಾಧ್ಯತೆಗಳು ಇವೆ. </p>.<p>ಲೋಕಸಭೆಯಲ್ಲಿ ಬಿಜೆಪಿ ಸಂಸದ, ಮಾಜಿ ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರು, ರಾಷ್ಟ್ರಪತಿಗಳ ಭಾಷಣಕ್ಕೆ ವಂದನೆ ಸಲ್ಲಿಸುವ ನಿರ್ಣಯದ ಮೇಲೆ ಚರ್ಚೆ ಆರಂಭಿಸಲಿದ್ದು, ನಿರ್ಣಯವನ್ನು ಬಿಜೆಪಿ ಸಂಸದೆ ಬಾನ್ಸುರಿ ಸ್ವರಾಜ್ ಅವರು ಅನುಮೋದಿಸುವರು.</p>.<p>ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಲೋಕಸಭೆಯಲ್ಲಿ ಒಟ್ಟು 16 ಗಂಟೆ ಸಮಯ ನಿಗದಿಪಡಿಸಲಾಗಿದೆ. ಕೊನೆಯಲ್ಲಿ ಬಹುತೇಕ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ನೀಡಲಿದ್ದಾರೆ.</p>.<p>ವಂದನಾ ನಿರ್ಣಯದ ಮೇಲಿನ ಚರ್ಚೆಗೆ ರಾಜ್ಯಸಭೆಯಲ್ಲಿ 21 ಗಂಟೆ ನಿಗದಿಪಡಿಸಿದ್ದು, ಅಲ್ಲಿ ಬುಧವಾರದಂದು ಪ್ರಧಾನಿ ಉತ್ತರ ನೀಡಲಿದ್ದಾರೆ. ನೀಟ್ ಪರೀಕ್ಷೆಯ ಗೊಂದಲ ಈಗಾಗಲೇ ಸಂಸತ್ತಿನಲ್ಲಿ ಪ್ರತಿಭಟನೆ ನಡೆಸಿದ್ದು, ಕೋಲಾಹಲಕ್ಕೂ ಕಾರಣವಾಗಿದೆ. </p>.<p>ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್ಟಿಎ) ಆಯೋಜಿಸಿದ್ದ ನೀಟ್–ಯುಜಿ ಪರೀಕ್ಷೆ ತೀವ್ರ ಗೊಂದಲಕ್ಕೆ ಕಾರಣವಾಗಿದೆ. ಬಿಹಾರದಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯಾಗಿದ್ದು, ಇತರೆಡೆಯೂ ಅಕ್ರಮಗಳು ನಡೆದಿವೆ. ಮೇ 5ರಂದು ನಡೆದಿದ್ದ ಪರೀಕ್ಷೆಗೆ 24 ಲಕ್ಷ ಅಭ್ಯರ್ಥಿಗಳು ಹಾಜರಾಗಿದ್ದರು.</p>.<p>ರಾಜ್ಯಸಭೆಯಲ್ಲಿ ವಂದನಾ ನಿರ್ಣಯದ ಮೇಲೆ ಚರ್ಚೆ ಆರಂಭಿಸಿದ್ದ ಬಿಜೆಪಿ ಸದಸ್ಯ ಸುಧಾಂಶು ತ್ರಿವೇದಿ, ‘ಮೋದಿ ಅವರಿಗೆ ಸರಿಸಾಟಿಯೇ ಇಲ್ಲ‘ ಎಂದು ಬಣ್ಣಿಸಿದ್ದರು. ಬಿಜೆಪಿಯ ಕವಿತಾ ಪಾಟಿದಾರ್ ನಿರ್ಣಯ ಅನುಮೋದಿಸಿದ್ದರು. ಚರ್ಚೆಯಲ್ಲಿ ಇತರೆ 9 ಸದಸ್ಯರು ಭಾಗಿಯಾಗಿದ್ದರು.</p>.<p>ವಂದನಾ ನಿರ್ಣಯಕ್ಕೂ ಮೊದಲು ನೀಟ್ ವಿಷಯ ಕುರಿತು ಚರ್ಚೆ ನಡೆಯಬೇಕು ಎಂದು ಒತ್ತಾಯಿಸಿ ವಿರೋಧಪಕ್ಷಗಳು ರಾಜ್ಯಸಭೆಯಲ್ಲಿ ನಿಲುವಳಿ ಸೂಚನೆ ಮಂಡಿಸಿವೆ. ಚರ್ಚೆಗೆ ಆಗ್ರಹಿಸಿ ವಿರೋಧಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷರ ಪೀಠದ ಎದುರಿಗೂ ಧಾವಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>