<p><strong>ನವದೆಹಲಿ:</strong> ನೀಟ್ನಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳು ದೇಶದ ಯುವಜನರ ಭವಿಷ್ಯದ ಮೇಲೆ ವ್ಯತಿರಿಕ್ತ ಪರಿಣಾಮಬೀರುವುದರಿಂದ ಈ ವಿಚಾರದಲ್ಲಿ ಸಂಸತ್ತಿನಲ್ಲಿ ‘ಗೌರವಯುತ’ ಮತ್ತು ಉತ್ತಮ ಚರ್ಚೆಯಾಗಬೇಕು ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿಯವರಿಗೆ ಶುಕ್ರವಾರ ಮನವಿ ಮಾಡಿದರು.</p>.<p>ಲೋಕಸಭಾ ಕಲಾಪ ಆರಂಭಕ್ಕೂ ಮುನ್ನ ಸಂಸತ್ತಿನ ಸಂಕೀರ್ಣದಲ್ಲಿ ವರದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರಪತಿಯವರ ಭಾಷಣದ ಮೇಲಿನ ಚರ್ಚೆ ಕೈಗೆತ್ತಿಕೊಳ್ಳುವುದಕ್ಕೂ ಮೊದಲು ನೀಟ್ ವಿಚಾರ ಚರ್ಚಿಸಬೇಕು ಎಂದು ಒತ್ತಾಯಿಸಿದರು. </p>.<p>‘ದೇಶದ ಯವಜನರು ಆತಂಕಗೊಂಡಿದ್ದಾರೆ. ಮುಂದೆ ಏನಾಗಲಿದೆ ಎಂಬುದು ಅವರಿಗೆ ಗೊತ್ತಿಲ್ಲ. ವಿದ್ಯಾರ್ಥಿಗಳ ಆತಂಕದ ಬಗ್ಗೆ ಚರ್ಚೆ ನಡೆಸುವಾಗ ಸರ್ಕಾರ ಮತ್ತು ವಿರೋಧ ಪಕ್ಷಗಳು ಒಟ್ಟಾಗಿವೆ ಎಂಬ ಸಂದೇಶ ಮತ್ತು ಭರವಸೆ ಸಂಸತ್ತಿನಿಂದ ಅವರಿಗೆ ತಲುಪಬೇಕು’ ಎಂದು ಅವರು ಹೇಳಿದರು. </p>.<p>ಪ್ರಸ್ತುತ ಸಂದರ್ಭದಲ್ಲಿ ನೀಟ್ ವಿಚಾರವೇ ಮುಖ್ಯ ಎಂದು ‘ಇಂಡಿಯಾ’ ಕೂಟ ಯೋಚಿಸುತ್ತದೆ ಎಂದು ರಾಹುಲ್ ಗಾಂಧಿ ಹೇಳಿದರು. </p>.<p><strong>ತಮಿಳುನಾಡಿಗೆ ವಿನಾಯಿತಿ: ನಿರ್ಣಯ ಅಂಗೀಕಾರ</strong> </p><p>ಚೆನ್ನೈ: ನೀಟ್ನಿಂದ ತಮಿಳುನಾಡಿಗೆ ವಿನಾಯಿತಿ ನೀಡಿ ದ್ವಿತೀಯ ಪಿಯುಸಿ ಅಂಕಗಳ ಆಧಾರದಲ್ಲಿ ವಿದ್ಯಾರ್ಥಿಗಳನ್ನು ವೈದ್ಯಕೀಯ ಕೋರ್ಸ್ಗಳಿಗೆ ದಾಖಲು ಮಾಡಲು ಅವಕಾಶ ನೀಡಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ತಮಿಳುನಾಡಿನ ವಿಧಾನಸಭೆ ಶುಕ್ರವಾರ ಮತ್ತೊಮ್ಮೆ ಸರ್ವಾನುಮತದ ನಿರ್ಣಯ ಅಂಗೀಕರಿಸಿದೆ. ಈ ನಿರ್ಣಯಕ್ಕೆ ಬಿಜೆಪಿ ವಿರೋಧ ವ್ಯಕ್ತಪಡಿಸಿದ್ದು ಕಲಾಪ ಬಹಿಷ್ಕರಿಸಿತು. ‘ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದು ಮತ್ತು ನೀಟ್ ಬಗ್ಗೆ ರಾಜ್ಯಗಳಿಂದ ಹೆಚ್ಚುತ್ತಿರುವ ವಿರೋಧವನ್ನು ಪರಿಗಣಿಸಿ ರಾಷ್ಟ್ರವ್ಯಾಪಿ ನಡೆಸಲಾಗುವ ಈ ಪರೀಕ್ಷೆಯನ್ನು ರದ್ದುಪಡಿಸಬೇಕು ಮತ್ತು ರಾಷ್ಟ್ರೀಯ ವೈದ್ಯಕೀಯ ಆಯೋಗ ಕಾಯ್ದೆಗೆ ತಿದ್ದುಪಡಿ ತರಬೇಕು’ ಎಂದು ನಿರ್ಣಯದಲ್ಲಿ ಹೇಳಲಾಗಿದೆ. ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಮಂಡಿಸಿದ ನಿರ್ಣಯವನ್ನು ಬಿಜೆಪಿಯ ಮೈತ್ರಿ ಪಕ್ಷ ಪಿಎಂಕೆ ಬೆಂಬಲಿಸಿತು.</p>.<p><strong>ಬಿಹಾರದಲ್ಲಿ ಕಠಿಣ ಕಾನೂನು: ಸಾಮ್ರಾಟ್</strong> </p><p>ಪಟ್ನಾ: ಪರೀಕ್ಷೆಗಳಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ತಡೆಯಲು ರಾಜ್ಯ ಸರ್ಕಾರ ಕಠಿಣ ಕಾನೂನು ಜಾರಿಗೆ ತರಲಿದೆ ಎಂದು ಬಿಹಾರ ಉಪ ಮುಖ್ಯಮಮತ್ರಿ ಸಾಮ್ರಾಟ್ ಚೌಧರಿ ಶುಕ್ರವಾರ ಹೇಳಿದ್ದಾರೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ನಿರ್ದೇಶನದ ಅನ್ವಯ ವಿಧಾನಸಭೆಯ ಮುಂಗಾರು ಅಧಿವೇಶನದಲ್ಲಿ ಈ ಸಂಬಂಧ ಹೊಸ ಕಾನೂನನ್ನು ಜಾರಿಗೆ ತರಲಾಗುವುದು ಎಂದು ಅವರು ಹೇಳಿದ್ದಾರೆ. ಜುಲೈ 22ರಿಂದ 26ರವರೆಗೆ ಬಿಹಾರದ ವಿಧಾನಸಭೆ ಅಧಿವೇಶದ ನಡೆಯಲಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ನೀಟ್ನಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳು ದೇಶದ ಯುವಜನರ ಭವಿಷ್ಯದ ಮೇಲೆ ವ್ಯತಿರಿಕ್ತ ಪರಿಣಾಮಬೀರುವುದರಿಂದ ಈ ವಿಚಾರದಲ್ಲಿ ಸಂಸತ್ತಿನಲ್ಲಿ ‘ಗೌರವಯುತ’ ಮತ್ತು ಉತ್ತಮ ಚರ್ಚೆಯಾಗಬೇಕು ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿಯವರಿಗೆ ಶುಕ್ರವಾರ ಮನವಿ ಮಾಡಿದರು.</p>.<p>ಲೋಕಸಭಾ ಕಲಾಪ ಆರಂಭಕ್ಕೂ ಮುನ್ನ ಸಂಸತ್ತಿನ ಸಂಕೀರ್ಣದಲ್ಲಿ ವರದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರಪತಿಯವರ ಭಾಷಣದ ಮೇಲಿನ ಚರ್ಚೆ ಕೈಗೆತ್ತಿಕೊಳ್ಳುವುದಕ್ಕೂ ಮೊದಲು ನೀಟ್ ವಿಚಾರ ಚರ್ಚಿಸಬೇಕು ಎಂದು ಒತ್ತಾಯಿಸಿದರು. </p>.<p>‘ದೇಶದ ಯವಜನರು ಆತಂಕಗೊಂಡಿದ್ದಾರೆ. ಮುಂದೆ ಏನಾಗಲಿದೆ ಎಂಬುದು ಅವರಿಗೆ ಗೊತ್ತಿಲ್ಲ. ವಿದ್ಯಾರ್ಥಿಗಳ ಆತಂಕದ ಬಗ್ಗೆ ಚರ್ಚೆ ನಡೆಸುವಾಗ ಸರ್ಕಾರ ಮತ್ತು ವಿರೋಧ ಪಕ್ಷಗಳು ಒಟ್ಟಾಗಿವೆ ಎಂಬ ಸಂದೇಶ ಮತ್ತು ಭರವಸೆ ಸಂಸತ್ತಿನಿಂದ ಅವರಿಗೆ ತಲುಪಬೇಕು’ ಎಂದು ಅವರು ಹೇಳಿದರು. </p>.<p>ಪ್ರಸ್ತುತ ಸಂದರ್ಭದಲ್ಲಿ ನೀಟ್ ವಿಚಾರವೇ ಮುಖ್ಯ ಎಂದು ‘ಇಂಡಿಯಾ’ ಕೂಟ ಯೋಚಿಸುತ್ತದೆ ಎಂದು ರಾಹುಲ್ ಗಾಂಧಿ ಹೇಳಿದರು. </p>.<p><strong>ತಮಿಳುನಾಡಿಗೆ ವಿನಾಯಿತಿ: ನಿರ್ಣಯ ಅಂಗೀಕಾರ</strong> </p><p>ಚೆನ್ನೈ: ನೀಟ್ನಿಂದ ತಮಿಳುನಾಡಿಗೆ ವಿನಾಯಿತಿ ನೀಡಿ ದ್ವಿತೀಯ ಪಿಯುಸಿ ಅಂಕಗಳ ಆಧಾರದಲ್ಲಿ ವಿದ್ಯಾರ್ಥಿಗಳನ್ನು ವೈದ್ಯಕೀಯ ಕೋರ್ಸ್ಗಳಿಗೆ ದಾಖಲು ಮಾಡಲು ಅವಕಾಶ ನೀಡಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ತಮಿಳುನಾಡಿನ ವಿಧಾನಸಭೆ ಶುಕ್ರವಾರ ಮತ್ತೊಮ್ಮೆ ಸರ್ವಾನುಮತದ ನಿರ್ಣಯ ಅಂಗೀಕರಿಸಿದೆ. ಈ ನಿರ್ಣಯಕ್ಕೆ ಬಿಜೆಪಿ ವಿರೋಧ ವ್ಯಕ್ತಪಡಿಸಿದ್ದು ಕಲಾಪ ಬಹಿಷ್ಕರಿಸಿತು. ‘ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದು ಮತ್ತು ನೀಟ್ ಬಗ್ಗೆ ರಾಜ್ಯಗಳಿಂದ ಹೆಚ್ಚುತ್ತಿರುವ ವಿರೋಧವನ್ನು ಪರಿಗಣಿಸಿ ರಾಷ್ಟ್ರವ್ಯಾಪಿ ನಡೆಸಲಾಗುವ ಈ ಪರೀಕ್ಷೆಯನ್ನು ರದ್ದುಪಡಿಸಬೇಕು ಮತ್ತು ರಾಷ್ಟ್ರೀಯ ವೈದ್ಯಕೀಯ ಆಯೋಗ ಕಾಯ್ದೆಗೆ ತಿದ್ದುಪಡಿ ತರಬೇಕು’ ಎಂದು ನಿರ್ಣಯದಲ್ಲಿ ಹೇಳಲಾಗಿದೆ. ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಮಂಡಿಸಿದ ನಿರ್ಣಯವನ್ನು ಬಿಜೆಪಿಯ ಮೈತ್ರಿ ಪಕ್ಷ ಪಿಎಂಕೆ ಬೆಂಬಲಿಸಿತು.</p>.<p><strong>ಬಿಹಾರದಲ್ಲಿ ಕಠಿಣ ಕಾನೂನು: ಸಾಮ್ರಾಟ್</strong> </p><p>ಪಟ್ನಾ: ಪರೀಕ್ಷೆಗಳಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ತಡೆಯಲು ರಾಜ್ಯ ಸರ್ಕಾರ ಕಠಿಣ ಕಾನೂನು ಜಾರಿಗೆ ತರಲಿದೆ ಎಂದು ಬಿಹಾರ ಉಪ ಮುಖ್ಯಮಮತ್ರಿ ಸಾಮ್ರಾಟ್ ಚೌಧರಿ ಶುಕ್ರವಾರ ಹೇಳಿದ್ದಾರೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ನಿರ್ದೇಶನದ ಅನ್ವಯ ವಿಧಾನಸಭೆಯ ಮುಂಗಾರು ಅಧಿವೇಶನದಲ್ಲಿ ಈ ಸಂಬಂಧ ಹೊಸ ಕಾನೂನನ್ನು ಜಾರಿಗೆ ತರಲಾಗುವುದು ಎಂದು ಅವರು ಹೇಳಿದ್ದಾರೆ. ಜುಲೈ 22ರಿಂದ 26ರವರೆಗೆ ಬಿಹಾರದ ವಿಧಾನಸಭೆ ಅಧಿವೇಶದ ನಡೆಯಲಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>