ಯಾವೊಬ್ಬ ಜನಪ್ರತಿನಿಧಿ ಅಥವಾ ಸರ್ಕಾರ ತಮ್ಮ ರಾಜ್ಯದಲ್ಲಿ ಈ ರೀತಿಯ ಕೃತ್ಯ ನಡೆಯಲಿ ಎಂದು ಬಯಸುವುದಿಲ್ಲ ಎಂದು ಕಾಂಗ್ರೆಸ್ನ ಹಿರಿಯ ನೇತಾರ ಗುಲಾಂ ನಬಿ ಆಜಾದ್ ಹೇಳಿದ್ದಾರೆ. ದೇಶದಲ್ಲಿ ನಡೆಯುತ್ತಿರುವ ಇಂಥಾ ಘಟನೆಗಳ ಬಗ್ಗೆ ಬೇಸರವಾಗುತ್ತಿದೆ ಎಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಹೇಳಿದ್ದಾರೆ.
ಮಕ್ಕಳು ಮತ್ತು ಮಹಿಳೆಯರು ಸುರಕ್ಷಿತರಲ್ಲ
ಪಶುವೈದ್ಯೆ ಮೇಲೆ ಅತ್ಯಾಚಾರವೆಸಗಿರುವ ನಾಲ್ವರು ದುಷ್ಕರ್ಮಿಗಳಿಗೆ ಡಿಸೆಂಬರ್ 31ರೊಳಗೆ ನೇಣಿಗೇರಿಸುವುದಕ್ಕಾಗಿ ಫಾಸ್ಟ್ ಟ್ರಾಕ್ ನ್ಯಾಯಾಲಯ ಸಿದ್ಧಪಡಿಸಬೇಕು ಎಂದು ಎಐಎಡಿಎಂಕೆ ಸಂಸದೆ ವಿಜಿಲಾ ಸತ್ಯನಾಥ್ ಒತ್ತಾಯಿಸಿದ್ದಾರೆ.