<p><strong>ನವದೆಹಲಿ:</strong> ‘ದೆಹಲಿಯಲ್ಲಿ ನಡೆದ ಎ.ಐ ಶೃಂಗಸಭೆ ವೇಳೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು ದುರದೃಷ್ಟಕರ’ ಎಂಬುದಾಗಿ ಖಂಡಿಸುವ ನಿರ್ಣಯವನ್ನು ಬಿಜೆಪಿ ಸಂಸದ ನಿಶಿಕಾಂತ್ ದುಬೆ ನೇತೃತ್ವದ ಸಂಸದೀಯ ಸಮಿತಿ ಮಂಗಳವಾರ ಅಂಗೀಕರಿಸಿತು.</p>.<p>ಈ ನಿರ್ಣಯಕ್ಕೆ ‘ಇಂಡಿಯಾ’ ಒಕ್ಕೂಟದ ಸಂಸದರಿಂದ ಭಾರಿ ವಿರೋಧ ವ್ಯಕ್ತವಾಯಿತು. ವಿಪಕ್ಷಗಳ ಸಂಸದರ ಪ್ರತಿಭಟನೆಯ ನಡುವೆಯೇ, ದುಬೆ ನೇತೃತ್ವದ ಸಂವಹನ, ಮಾಹಿತಿ ಮತ್ತು ತಂತ್ರಜ್ಞಾನ ಕುರಿತ ಸಂಸದೀಯ ಸ್ಥಾಯಿ ಸಮಿತಿಯು ಈ ನಿರ್ಣಯವನ್ನು ಅಂಗೀಕರಿಸಿತು.</p>.<p>ಸಮಿತಿಯ ಸದಸ್ಯ ಬಲ 31 ಇದ್ದು, ಈ ಪೈಕಿ 16 ಸದಸ್ಯರು ಸಭೆಯಲ್ಲಿ ಪಾಲ್ಗೊಂಡಿದ್ದರು.</p>.<p>‘ಸಮಿತಿ ಸಭೆ ಆರಂಭಗೊಂಡಾಗ, ಬಿಜೆಪಿ ಸಂಸದ ಅಮರಪಾಲ್ ಮೌರ್ಯ ಅವರು ಈ ಕುರಿತ ಗೊತ್ತುವಳಿಯನ್ನು ಮಂಡಿಸಿದರು. ವಿರೋಧ ಪಕ್ಷಗಳಾದ ಕಾಂಗ್ರೆಸ್, ಟಿಎಂಸಿ, ಸಮಾಜವಾದಿ ಪಕ್ಷ ಹಾಗೂ ಶಿವಸೇನಾ(ಯುಬಿಟಿ) ಸಂಸದರು ಈ ಗೊತ್ತುವಳಿಗೆ ಬೆಂಬಲ ನೀಡಲಿಲ್ಲ’ ಎಂದು ವಿರೋಧ ಪಕ್ಷಗಳ ಮೂಲಗಳು ಹೇಳಿವೆ.</p>.<p>‘ಎ.ಐ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ನಡೆಸಿದ ಪ್ರತಿಭಟನೆಯನ್ನು ಪ್ರಸ್ತಾಪ ಮಾಡುವುದಾದಲ್ಲಿ, ಚೀನಾ ನಿರ್ಮಿತ ರೊಬೊನಾಯಿಯನ್ನು ಪ್ರದರ್ಶಿಸಿದ ಗಲ್ಗೋತಿಯಾ ವಿಶ್ವವಿದ್ಯಾಲಯದ ವಿಚಾರವನ್ನು ಕೂಡ ಉಲ್ಲೇಖಿಸಬೇಕು ಎಂಬುದಾಗಿ ವಿಪಕ್ಷಗಳ ಸಂಸದರು ಸಭೆಯಲ್ಲಿ ಒತ್ತಾಯಿಸಿದರು’ ಎಂದೂ ಮೂಲಗಳು ಹೇಳಿವೆ.</p>.<p>‘ನಾವು ಎ.ಐ ಶೃಂಗಸಭೆ ಆಯೋಜಿಸಿದ್ದನ್ನು ಮನಃಪೂರ್ವಕವಾಗಿ ಸ್ವಾಗತಿಸುತ್ತೇವೆ. ಆದರೆ, ಈ ಕುರಿತ ಗೊತ್ತುವಳಿಯನ್ನು ಕೇವಲ ಪ್ರತಿಭಟನೆಯನ್ನು ಉಲ್ಲೇಖಿಸುವುದಕ್ಕೆ ಸೀಮಿತಗೊಳಿಸುವುದನ್ನು ವಿರೋಧಿಸುತ್ತೇವೆ’ ಎಂಬುದಾಗಿ ವಿರೋಧ ಪಕ್ಷಗಳ ಸಂಸದರು ಸಭೆಯಲ್ಲಿ ಹೇಳಿದರು.</p>.<p>‘ಇಂತಹ ಶೃಂಗಸಭೆಯ ಮಹತ್ವವನ್ನು ನಾವು ಅರ್ಥ ಮಾಡಿಕೊಳ್ಳುತ್ತೇವೆ. ಶೃಂಗಸಭೆಯಲ್ಲಿ ವ್ಯಕ್ತವಾದ ಭಿನ್ನಾಭಿಪ್ರಾಯಗಳು ಅಥವಾ ಪ್ರತಿಭಟನೆಗಳನ್ನು ಪ್ರಸ್ತಾಪಿಸಿ ನಿರ್ಣಯ ಅಂಗೀಕರಿಸುವುದಕ್ಕೆ ಸಂಸದೀಯ ಸಮಿತಿ ಸಭೆ ಸೂಕ್ತ ವೇದಿಕೆಯಾಗುವುದಿಲ್ಲ’ ಎಂದೂ ಹೇಳಿದ್ದಾಗಿ ವಿಪಕ್ಷದ ಹಿರಿಯ ಸಂಸದರೊಬ್ಬರು ತಿಳಿಸಿದ್ದಾರೆ.</p>.<p>‘ಎ.ಐ ಶೃಂಗಸಭೆಯು ಭಾರಿ ಯಶಸ್ವಿಯಾಗಿದೆ’ ಎಂಬ ನಿರ್ಣಯವನ್ನು ಕೂಡ ಅಂಗೀಕರಿಸಲಾಗಿದೆ ಎಂದು ಸಮಿತಿ ಅಧ್ಯಕ್ಷ ನಿಶಿಕಾಂತ್ ದುಬೆ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ದೆಹಲಿಯಲ್ಲಿ ನಡೆದ ಎ.ಐ ಶೃಂಗಸಭೆ ವೇಳೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು ದುರದೃಷ್ಟಕರ’ ಎಂಬುದಾಗಿ ಖಂಡಿಸುವ ನಿರ್ಣಯವನ್ನು ಬಿಜೆಪಿ ಸಂಸದ ನಿಶಿಕಾಂತ್ ದುಬೆ ನೇತೃತ್ವದ ಸಂಸದೀಯ ಸಮಿತಿ ಮಂಗಳವಾರ ಅಂಗೀಕರಿಸಿತು.</p>.<p>ಈ ನಿರ್ಣಯಕ್ಕೆ ‘ಇಂಡಿಯಾ’ ಒಕ್ಕೂಟದ ಸಂಸದರಿಂದ ಭಾರಿ ವಿರೋಧ ವ್ಯಕ್ತವಾಯಿತು. ವಿಪಕ್ಷಗಳ ಸಂಸದರ ಪ್ರತಿಭಟನೆಯ ನಡುವೆಯೇ, ದುಬೆ ನೇತೃತ್ವದ ಸಂವಹನ, ಮಾಹಿತಿ ಮತ್ತು ತಂತ್ರಜ್ಞಾನ ಕುರಿತ ಸಂಸದೀಯ ಸ್ಥಾಯಿ ಸಮಿತಿಯು ಈ ನಿರ್ಣಯವನ್ನು ಅಂಗೀಕರಿಸಿತು.</p>.<p>ಸಮಿತಿಯ ಸದಸ್ಯ ಬಲ 31 ಇದ್ದು, ಈ ಪೈಕಿ 16 ಸದಸ್ಯರು ಸಭೆಯಲ್ಲಿ ಪಾಲ್ಗೊಂಡಿದ್ದರು.</p>.<p>‘ಸಮಿತಿ ಸಭೆ ಆರಂಭಗೊಂಡಾಗ, ಬಿಜೆಪಿ ಸಂಸದ ಅಮರಪಾಲ್ ಮೌರ್ಯ ಅವರು ಈ ಕುರಿತ ಗೊತ್ತುವಳಿಯನ್ನು ಮಂಡಿಸಿದರು. ವಿರೋಧ ಪಕ್ಷಗಳಾದ ಕಾಂಗ್ರೆಸ್, ಟಿಎಂಸಿ, ಸಮಾಜವಾದಿ ಪಕ್ಷ ಹಾಗೂ ಶಿವಸೇನಾ(ಯುಬಿಟಿ) ಸಂಸದರು ಈ ಗೊತ್ತುವಳಿಗೆ ಬೆಂಬಲ ನೀಡಲಿಲ್ಲ’ ಎಂದು ವಿರೋಧ ಪಕ್ಷಗಳ ಮೂಲಗಳು ಹೇಳಿವೆ.</p>.<p>‘ಎ.ಐ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ನಡೆಸಿದ ಪ್ರತಿಭಟನೆಯನ್ನು ಪ್ರಸ್ತಾಪ ಮಾಡುವುದಾದಲ್ಲಿ, ಚೀನಾ ನಿರ್ಮಿತ ರೊಬೊನಾಯಿಯನ್ನು ಪ್ರದರ್ಶಿಸಿದ ಗಲ್ಗೋತಿಯಾ ವಿಶ್ವವಿದ್ಯಾಲಯದ ವಿಚಾರವನ್ನು ಕೂಡ ಉಲ್ಲೇಖಿಸಬೇಕು ಎಂಬುದಾಗಿ ವಿಪಕ್ಷಗಳ ಸಂಸದರು ಸಭೆಯಲ್ಲಿ ಒತ್ತಾಯಿಸಿದರು’ ಎಂದೂ ಮೂಲಗಳು ಹೇಳಿವೆ.</p>.<p>‘ನಾವು ಎ.ಐ ಶೃಂಗಸಭೆ ಆಯೋಜಿಸಿದ್ದನ್ನು ಮನಃಪೂರ್ವಕವಾಗಿ ಸ್ವಾಗತಿಸುತ್ತೇವೆ. ಆದರೆ, ಈ ಕುರಿತ ಗೊತ್ತುವಳಿಯನ್ನು ಕೇವಲ ಪ್ರತಿಭಟನೆಯನ್ನು ಉಲ್ಲೇಖಿಸುವುದಕ್ಕೆ ಸೀಮಿತಗೊಳಿಸುವುದನ್ನು ವಿರೋಧಿಸುತ್ತೇವೆ’ ಎಂಬುದಾಗಿ ವಿರೋಧ ಪಕ್ಷಗಳ ಸಂಸದರು ಸಭೆಯಲ್ಲಿ ಹೇಳಿದರು.</p>.<p>‘ಇಂತಹ ಶೃಂಗಸಭೆಯ ಮಹತ್ವವನ್ನು ನಾವು ಅರ್ಥ ಮಾಡಿಕೊಳ್ಳುತ್ತೇವೆ. ಶೃಂಗಸಭೆಯಲ್ಲಿ ವ್ಯಕ್ತವಾದ ಭಿನ್ನಾಭಿಪ್ರಾಯಗಳು ಅಥವಾ ಪ್ರತಿಭಟನೆಗಳನ್ನು ಪ್ರಸ್ತಾಪಿಸಿ ನಿರ್ಣಯ ಅಂಗೀಕರಿಸುವುದಕ್ಕೆ ಸಂಸದೀಯ ಸಮಿತಿ ಸಭೆ ಸೂಕ್ತ ವೇದಿಕೆಯಾಗುವುದಿಲ್ಲ’ ಎಂದೂ ಹೇಳಿದ್ದಾಗಿ ವಿಪಕ್ಷದ ಹಿರಿಯ ಸಂಸದರೊಬ್ಬರು ತಿಳಿಸಿದ್ದಾರೆ.</p>.<p>‘ಎ.ಐ ಶೃಂಗಸಭೆಯು ಭಾರಿ ಯಶಸ್ವಿಯಾಗಿದೆ’ ಎಂಬ ನಿರ್ಣಯವನ್ನು ಕೂಡ ಅಂಗೀಕರಿಸಲಾಗಿದೆ ಎಂದು ಸಮಿತಿ ಅಧ್ಯಕ್ಷ ನಿಶಿಕಾಂತ್ ದುಬೆ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>