<p><strong>ನವದೆಹಲಿ</strong>: ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದ (ಒಬಿಸಿ) ಅಧಿಕಾರಿಗಳಿಗೆ ಕೇಂದ್ರದ ವಿವಿಧ ಸಚಿವಾಲಯ, ಇಲಾಖೆಗಳ ಉನ್ನತ ಹುದ್ದೆಗಳಲ್ಲಿ ಪ್ರಾತಿನಿಧ್ಯ ಸಿಗುವಂತೆ ‘ಕೇಂದ್ರ ಸಿಬ್ಬಂದಿ ವ್ಯವಸ್ಥೆ’ (ಸಿಎಸ್ಎಸ್) ಪುನರ್ ರಚಿಸಬೇಕು ಎಂದು ಸಂಸದೀಯ ಸಮಿತಿಯು ಶಿಫಾರಸು ಮಾಡಿದೆ. </p><p>ಬಿಜೆಪಿ ಸಂಸದ ಗಣೇಶ್ ಸಿಂಗ್ ನೇತೃತ್ವದ, ಹಿಂದುಳಿದ ವರ್ಗಗಳ ಕಲ್ಯಾಣ ಕುರಿತ ಸಮಿತಿಯ ವರದಿಯನ್ನು ಲೋಕಸಭೆಯಲ್ಲಿ ಮಂಡಿಸಲಾಯಿತು. ‘ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಅಂಕಿ–ಅಂಶಗಳ ಪ್ರಕಾರ, ಸದ್ಯ ಈ ವರ್ಗಗಳ ಅಧಿಕಾರಿಗಳಿಗೆ ಕಡಿಮೆ ಪ್ರಾತಿನಿಧ್ಯವಿದೆ’ ಎಂದು ಸಮಿತಿ ಹೇಳಿದೆ. </p><p>ಒಬಿಸಿ ವರ್ಗದವರಿಗೆ ಸೂಕ್ತ ಪ್ರಾತಿನಿಧ್ಯ ಸಿಗದಿದ್ದಲ್ಲಿ ಈ ವರ್ಗದ ಅಧಿಕಾರಿಗಳು ಮತ್ತು ಸಿಬ್ಬಂದಿಯ ಒಟ್ಟು ಹಿತಾಸಕ್ತಿಯ ರಕ್ಷಣೆ ಪ್ರಾಯೋಗಿಕವಾಗಿ ಕಷ್ಟ ಸಾಧ್ಯ ಎಂದೂ ಸಮಿತಿ ಅಭಿಪ್ರಾಯಪಟ್ಟಿದೆ. </p><p>ವರದಿ ಸಿದ್ದಪಡಿಸುವಾಗ ‘ಲ್ಯಾಟರಲ್ ಎಂಟ್ರಿ’ಯಡಿ ನೇಮಕವಾಗುವ ಹುದ್ದೆಗಳಿಗೆ ಮೀಸಲಾತಿ ನೀತಿ ಅನ್ವಯಿಸದಿರುವುದಕ್ಕೆ ಸಿಬ್ಬಂದಿ ಮತ್ತು ತರಬೇತಿ ಇಲಾಖೆಗೆ ಸಮಿತಿಯು ತರಾಟೆ ತೆಗೆದುಕೊಂಡಿತ್ತು. </p><p>ಆದರೆ, ‘ಹುದ್ದೆಯು ಒಂದೇ ಇದ್ದಾಗ ಮೀಸಲಾತಿ ನಿಯಮವು ಅನ್ವಯಿಸದು’ ಎಂದು 1998ರಲ್ಲಿ ಸುಪ್ರೀಂ ಕೋರ್ಟ್ ನೀಡಿದ್ದ ಆದೇಶವನ್ನು ಉಲ್ಲೇಖಿಸಿ ಇಲಾಖೆಯು ಇದಕ್ಕೆ ಪ್ರತಿಕ್ರಿಯೆ ನೀಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದ (ಒಬಿಸಿ) ಅಧಿಕಾರಿಗಳಿಗೆ ಕೇಂದ್ರದ ವಿವಿಧ ಸಚಿವಾಲಯ, ಇಲಾಖೆಗಳ ಉನ್ನತ ಹುದ್ದೆಗಳಲ್ಲಿ ಪ್ರಾತಿನಿಧ್ಯ ಸಿಗುವಂತೆ ‘ಕೇಂದ್ರ ಸಿಬ್ಬಂದಿ ವ್ಯವಸ್ಥೆ’ (ಸಿಎಸ್ಎಸ್) ಪುನರ್ ರಚಿಸಬೇಕು ಎಂದು ಸಂಸದೀಯ ಸಮಿತಿಯು ಶಿಫಾರಸು ಮಾಡಿದೆ. </p><p>ಬಿಜೆಪಿ ಸಂಸದ ಗಣೇಶ್ ಸಿಂಗ್ ನೇತೃತ್ವದ, ಹಿಂದುಳಿದ ವರ್ಗಗಳ ಕಲ್ಯಾಣ ಕುರಿತ ಸಮಿತಿಯ ವರದಿಯನ್ನು ಲೋಕಸಭೆಯಲ್ಲಿ ಮಂಡಿಸಲಾಯಿತು. ‘ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಅಂಕಿ–ಅಂಶಗಳ ಪ್ರಕಾರ, ಸದ್ಯ ಈ ವರ್ಗಗಳ ಅಧಿಕಾರಿಗಳಿಗೆ ಕಡಿಮೆ ಪ್ರಾತಿನಿಧ್ಯವಿದೆ’ ಎಂದು ಸಮಿತಿ ಹೇಳಿದೆ. </p><p>ಒಬಿಸಿ ವರ್ಗದವರಿಗೆ ಸೂಕ್ತ ಪ್ರಾತಿನಿಧ್ಯ ಸಿಗದಿದ್ದಲ್ಲಿ ಈ ವರ್ಗದ ಅಧಿಕಾರಿಗಳು ಮತ್ತು ಸಿಬ್ಬಂದಿಯ ಒಟ್ಟು ಹಿತಾಸಕ್ತಿಯ ರಕ್ಷಣೆ ಪ್ರಾಯೋಗಿಕವಾಗಿ ಕಷ್ಟ ಸಾಧ್ಯ ಎಂದೂ ಸಮಿತಿ ಅಭಿಪ್ರಾಯಪಟ್ಟಿದೆ. </p><p>ವರದಿ ಸಿದ್ದಪಡಿಸುವಾಗ ‘ಲ್ಯಾಟರಲ್ ಎಂಟ್ರಿ’ಯಡಿ ನೇಮಕವಾಗುವ ಹುದ್ದೆಗಳಿಗೆ ಮೀಸಲಾತಿ ನೀತಿ ಅನ್ವಯಿಸದಿರುವುದಕ್ಕೆ ಸಿಬ್ಬಂದಿ ಮತ್ತು ತರಬೇತಿ ಇಲಾಖೆಗೆ ಸಮಿತಿಯು ತರಾಟೆ ತೆಗೆದುಕೊಂಡಿತ್ತು. </p><p>ಆದರೆ, ‘ಹುದ್ದೆಯು ಒಂದೇ ಇದ್ದಾಗ ಮೀಸಲಾತಿ ನಿಯಮವು ಅನ್ವಯಿಸದು’ ಎಂದು 1998ರಲ್ಲಿ ಸುಪ್ರೀಂ ಕೋರ್ಟ್ ನೀಡಿದ್ದ ಆದೇಶವನ್ನು ಉಲ್ಲೇಖಿಸಿ ಇಲಾಖೆಯು ಇದಕ್ಕೆ ಪ್ರತಿಕ್ರಿಯೆ ನೀಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>