<p><strong>ನವದೆಹಲಿ:</strong> ಕ್ಷಮೆಯಾಚಿಸಿದರೆ 12 ಮಂದಿ ರಾಜ್ಯಸಭಾ ಸಂಸದರ ಅಮಾನತನ್ನು ವಾಪಸ್ ಪಡೆಯಲು ಸರ್ಕಾರ ಸಿದ್ಧವಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.</p>.<p>ಸಂಸದರ ಅಮಾನತು ನಿರ್ಧಾರ ವಾಪಸ್ ಪಡೆಯುವಂತೆ ಪ್ರತಿಪಕ್ಷಗಳಿಂದ ಭಾರಿ ಪ್ರತಿಭಟನೆ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಅವರು ಈ ಹೇಳಿಕೆ ನೀಡಿದ್ದಾರೆ.</p>.<p><strong>ಓದಿ:</strong><a href="https://www.prajavani.net/india-news/mps-to-hold-dharna-in-parliament-till-winter-session-ends-889011.html" target="_blank">ಸಂಸದರ ಅಮಾನತು ವಾಪಸ್ಗೆ ಆಗ್ರಹಿಸಿ ಪ್ರತಿಭಟನೆ: ಸಂಸತ್ತಿನ ಒಳಗೂ ಹೊರಗೂ ಧರಣಿ</a></p>.<p>‘ಸಂಸದರನ್ನು ಯಾಕೆ ಅಮಾನತು ಮಾಡಲಾಗಿದೆ ಎಂಬುದನ್ನು ನಾವು ವಿವರಿಸಿದ್ದೇವೆ. ಏನು ನಡೆದಿತ್ತು ಎಂಬುದಕ್ಕೆ ದೇಶವೇ ಸಾಕ್ಷಿಯಾಗಿದೆ. ಅದು ದಾಖಲೆಗಳಲ್ಲಿಯೂ ಇದೆ. ಇವತ್ತಾದರೂ ಸರಿ, ಅವರು ಕ್ಷಮೆ ಯಾಚಿಸಿದರೆ ಅಮಾನತು ನಿರ್ಧಾರ ವಾಪಸ್ ಪಡೆಯಲು ಸಿದ್ಧರಿದ್ದೇವೆ’ ಎಂದು ಜೋಶಿ ಹೇಳಿದ್ದಾರೆ.</p>.<p>ಈ ಮಧ್ಯೆ, ಸಂಸದರ ಅಮಾನತು ಹಿಂಪಡೆಯುವಂತೆ ಆಗ್ರಹಿಸಿ ಪ್ರತಿಪಕ್ಷಗಳು ಮಂಗಳವಾರವೂ ಸಂಸತ್ನಲ್ಲಿ ಧರಣಿ ನಡೆಸಿವೆ. ಈ ವಿಚಾರವಾಗಿ ಮುಂದಿನ ತೀರ್ಮಾನ ತೆಗೆದುಕೊಳ್ಳಲು ಮಧ್ಯಾಹ್ನ 1 ಗಂಟೆಗೆ ಪ್ರತಿಪಕ್ಷಗಳ ನಾಯಕರು ಸಭೆ ಸೇರಲಿದ್ದಾರೆ.</p>.<p>ಅಮಾನತುಗೊಂಡ 12 ಮಂದಿ ರಾಜ್ಯಸಭಾ ಸಂಸದರಲ್ಲಿ ಕಾಂಗ್ರೆಸ್ನ ಆರು, ತೃಣಮೂಲ ಕಾಂಗ್ರೆಸ್ ಮತ್ತು ಶಿವಸೇನಾದ ತಲಾ ಇಬ್ಬರು, ಸಿಪಿಐ ಮತ್ತು ಸಿಪಿಎಂನ ತಲಾ ಒಬ್ಬರು ಇದ್ದಾರೆ.</p>.<p><strong>ಓದಿ:</strong><a href="https://www.prajavani.net/india-news/tharoor-not-to-host-sansad-tv-show-until-suspension-of-12-rs-mps-revoked-890307.html" target="_blank">ಸಂಸದರ ಅಮಾನತು ಹಿಂಪಡೆಯುವವರೆಗೆ ಟಿವಿ ಕಾರ್ಯಕ್ರಮದಲ್ಲಿ ಭಾಗವಹಿಸಲ್ಲ: ಶಶಿ ತರೂರ್</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕ್ಷಮೆಯಾಚಿಸಿದರೆ 12 ಮಂದಿ ರಾಜ್ಯಸಭಾ ಸಂಸದರ ಅಮಾನತನ್ನು ವಾಪಸ್ ಪಡೆಯಲು ಸರ್ಕಾರ ಸಿದ್ಧವಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.</p>.<p>ಸಂಸದರ ಅಮಾನತು ನಿರ್ಧಾರ ವಾಪಸ್ ಪಡೆಯುವಂತೆ ಪ್ರತಿಪಕ್ಷಗಳಿಂದ ಭಾರಿ ಪ್ರತಿಭಟನೆ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಅವರು ಈ ಹೇಳಿಕೆ ನೀಡಿದ್ದಾರೆ.</p>.<p><strong>ಓದಿ:</strong><a href="https://www.prajavani.net/india-news/mps-to-hold-dharna-in-parliament-till-winter-session-ends-889011.html" target="_blank">ಸಂಸದರ ಅಮಾನತು ವಾಪಸ್ಗೆ ಆಗ್ರಹಿಸಿ ಪ್ರತಿಭಟನೆ: ಸಂಸತ್ತಿನ ಒಳಗೂ ಹೊರಗೂ ಧರಣಿ</a></p>.<p>‘ಸಂಸದರನ್ನು ಯಾಕೆ ಅಮಾನತು ಮಾಡಲಾಗಿದೆ ಎಂಬುದನ್ನು ನಾವು ವಿವರಿಸಿದ್ದೇವೆ. ಏನು ನಡೆದಿತ್ತು ಎಂಬುದಕ್ಕೆ ದೇಶವೇ ಸಾಕ್ಷಿಯಾಗಿದೆ. ಅದು ದಾಖಲೆಗಳಲ್ಲಿಯೂ ಇದೆ. ಇವತ್ತಾದರೂ ಸರಿ, ಅವರು ಕ್ಷಮೆ ಯಾಚಿಸಿದರೆ ಅಮಾನತು ನಿರ್ಧಾರ ವಾಪಸ್ ಪಡೆಯಲು ಸಿದ್ಧರಿದ್ದೇವೆ’ ಎಂದು ಜೋಶಿ ಹೇಳಿದ್ದಾರೆ.</p>.<p>ಈ ಮಧ್ಯೆ, ಸಂಸದರ ಅಮಾನತು ಹಿಂಪಡೆಯುವಂತೆ ಆಗ್ರಹಿಸಿ ಪ್ರತಿಪಕ್ಷಗಳು ಮಂಗಳವಾರವೂ ಸಂಸತ್ನಲ್ಲಿ ಧರಣಿ ನಡೆಸಿವೆ. ಈ ವಿಚಾರವಾಗಿ ಮುಂದಿನ ತೀರ್ಮಾನ ತೆಗೆದುಕೊಳ್ಳಲು ಮಧ್ಯಾಹ್ನ 1 ಗಂಟೆಗೆ ಪ್ರತಿಪಕ್ಷಗಳ ನಾಯಕರು ಸಭೆ ಸೇರಲಿದ್ದಾರೆ.</p>.<p>ಅಮಾನತುಗೊಂಡ 12 ಮಂದಿ ರಾಜ್ಯಸಭಾ ಸಂಸದರಲ್ಲಿ ಕಾಂಗ್ರೆಸ್ನ ಆರು, ತೃಣಮೂಲ ಕಾಂಗ್ರೆಸ್ ಮತ್ತು ಶಿವಸೇನಾದ ತಲಾ ಇಬ್ಬರು, ಸಿಪಿಐ ಮತ್ತು ಸಿಪಿಎಂನ ತಲಾ ಒಬ್ಬರು ಇದ್ದಾರೆ.</p>.<p><strong>ಓದಿ:</strong><a href="https://www.prajavani.net/india-news/tharoor-not-to-host-sansad-tv-show-until-suspension-of-12-rs-mps-revoked-890307.html" target="_blank">ಸಂಸದರ ಅಮಾನತು ಹಿಂಪಡೆಯುವವರೆಗೆ ಟಿವಿ ಕಾರ್ಯಕ್ರಮದಲ್ಲಿ ಭಾಗವಹಿಸಲ್ಲ: ಶಶಿ ತರೂರ್</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>