<p><strong>ನವದೆಹಲಿ:</strong> ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯ ಆರೋಪಿ, ಪಶ್ಚಿಮ ಬಂಗಾಳದ ಶಿಕ್ಷಣ ಖಾತೆಯ ಮಾಜಿ ಸಚಿವ, ತೃಣಮೂಲ ಕಾಂಗ್ರೆಸ್ ಪಕ್ಷದ ಶಾಸಕ ಪಾರ್ಥ ಚಟರ್ಜಿ ಅವರಿಗೆ ಕಲ್ಕತ್ತಾ ಹೈಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ. </p>.<p>ಪಾಸ್ಪೋರ್ಟ್ ಅನ್ನು ಒಪ್ಪಿಸಬೇಕು ಮತ್ತು ವಿಚಾರಣಾ ನ್ಯಾಯಾಲಯದ ವ್ಯಾಪ್ತಿಯಿಂದ ಹೊರಗೆ ತೆರಳದಂತೆ ಷರತ್ತು ವಿಧಿಸಿ ನ್ಯಾಯಮೂರ್ತಿ ಸುರ್ವ ಘೋಷ್ ನೇತೃತ್ವದ ನ್ಯಾಯಪೀಠವು ಜಾಮೀನು ಮಂಜೂರು ಮಾಡಿತು. </p>.<p>ವಿಚಾರಣೆಯ ಬಾಕಿ ಅವಧಿಯವರೆಗೂ ಚಟರ್ಜಿ ಅವರನ್ನು ಯಾವುದೇ ಹುದ್ದೆಗೂ ನೇಮಕಗೊಳಿಸಬಾರದು ಎಂದು ಘೋಷ್ ಅವರು ತಮ್ಮ ಆದೇಶದಲ್ಲಿ ಸ್ಪಷ್ಟಪಡಿಸಿದ್ದಾರೆ.</p>.<p>ಶಿಕ್ಷಣ ಇಲಾಖೆಯಲ್ಲಿ ಅನರ್ಹ ಅಭ್ಯರ್ಥಿಗಳನ್ನು ಶಿಕ್ಷಕರು ಹಾಗೂ ಇತರೆ ಹುದ್ದೆಗಳಿಗೆ ನೇಮಿಸಿದ ಆರೋಪ ಚಟರ್ಜಿ ಮೇಲಿದೆ. ಭ್ರಷ್ಟಾಚಾರ ಜೊತೆ ನಂಟಿನ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಪಾರ್ಥ ಚಟರ್ಜಿ ಅವರನ್ನು 2022ರ ಜುಲೈ 23ರಂದು ಇ.ಡಿ ಬಂಧಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯ ಆರೋಪಿ, ಪಶ್ಚಿಮ ಬಂಗಾಳದ ಶಿಕ್ಷಣ ಖಾತೆಯ ಮಾಜಿ ಸಚಿವ, ತೃಣಮೂಲ ಕಾಂಗ್ರೆಸ್ ಪಕ್ಷದ ಶಾಸಕ ಪಾರ್ಥ ಚಟರ್ಜಿ ಅವರಿಗೆ ಕಲ್ಕತ್ತಾ ಹೈಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ. </p>.<p>ಪಾಸ್ಪೋರ್ಟ್ ಅನ್ನು ಒಪ್ಪಿಸಬೇಕು ಮತ್ತು ವಿಚಾರಣಾ ನ್ಯಾಯಾಲಯದ ವ್ಯಾಪ್ತಿಯಿಂದ ಹೊರಗೆ ತೆರಳದಂತೆ ಷರತ್ತು ವಿಧಿಸಿ ನ್ಯಾಯಮೂರ್ತಿ ಸುರ್ವ ಘೋಷ್ ನೇತೃತ್ವದ ನ್ಯಾಯಪೀಠವು ಜಾಮೀನು ಮಂಜೂರು ಮಾಡಿತು. </p>.<p>ವಿಚಾರಣೆಯ ಬಾಕಿ ಅವಧಿಯವರೆಗೂ ಚಟರ್ಜಿ ಅವರನ್ನು ಯಾವುದೇ ಹುದ್ದೆಗೂ ನೇಮಕಗೊಳಿಸಬಾರದು ಎಂದು ಘೋಷ್ ಅವರು ತಮ್ಮ ಆದೇಶದಲ್ಲಿ ಸ್ಪಷ್ಟಪಡಿಸಿದ್ದಾರೆ.</p>.<p>ಶಿಕ್ಷಣ ಇಲಾಖೆಯಲ್ಲಿ ಅನರ್ಹ ಅಭ್ಯರ್ಥಿಗಳನ್ನು ಶಿಕ್ಷಕರು ಹಾಗೂ ಇತರೆ ಹುದ್ದೆಗಳಿಗೆ ನೇಮಿಸಿದ ಆರೋಪ ಚಟರ್ಜಿ ಮೇಲಿದೆ. ಭ್ರಷ್ಟಾಚಾರ ಜೊತೆ ನಂಟಿನ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಪಾರ್ಥ ಚಟರ್ಜಿ ಅವರನ್ನು 2022ರ ಜುಲೈ 23ರಂದು ಇ.ಡಿ ಬಂಧಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>