<p class="title"><strong>ಕೋಲ್ಕತ್ತ: </strong>ದೀಪಾವಳಿ ಅಮಾವಾಸ್ಯೆಯ ದಿನವಾದ ಇದೇ 25ರಂದು ಸಂಜೆ ವೇಳೆಗೆ ಭಾಗಶಃ ಸೂರ್ಯಗ್ರಹಣ ಸಂಭವಿಸಲಿದೆ. ದೇಶದ ಹಲವು ಭಾಗಗಳಲ್ಲಿ ಗ್ರಹಣ ಗೋಚರಿಸುತ್ತದೆ ಎಂದು ಖಗೋಳಶಾಸ್ತ್ರಜ್ಞ ದೇವಿ ಪ್ರಸಾದ್ ದುರೈ ತಿಳಿಸಿದ್ದಾರೆ.</p>.<p class="title">ದೇಶದ ಪಶ್ಚಿಮ ಮತ್ತು ಉತ್ತರ ಭಾಗಗಳಲ್ಲಿ ಸೂರ್ಯಗ್ರಹಣ ಉತ್ತಮ ರೀತಿಯಲ್ಲಿ ಗೋಚರಿಸುತ್ತದೆ. ಪೂರ್ವ ಭಾಗಗಳಲ್ಲಿ ಸೂರ್ಯಾಸ್ತದ ವೇಳೆಗ್ರಹಣ ಸಂಭವಿಸಲಿದೆ. ಈಶಾನ್ಯ ಭಾಗಗಳಲ್ಲಿ ಸೂರ್ಯಾಸ್ತದ ಬಳಿಕ ಗ್ರಹಣ ಸಂಭವಿಸುವ ಕಾರಣ ಈ ಭಾಗಗಳಲ್ಲಿ ಗ್ರಹಣ ಕಾಣಿಸದು ಎಂದು ಅವರು ಹೇಳಿದ್ದಾರೆ.</p>.<p class="title">ಗ್ರಹಣದ ಗರಿಷ್ಠ ಗೋಚರತೆ ವೇಳೆ, ಅಸ್ತಂಗತವಾಗುತ್ತಿರುವ ಸೂರ್ಯನ ಬಿಂಬದ ಶೇ 4ರಷ್ಟು ಭಾಗವನ್ನು ಚಂದ್ರಬಿಂಬವು ಮುಚ್ಚಲಿದೆ ಎಂದು ಅವರು ಹೇಳಿದ್ದಾರೆ.</p>.<p class="bodytext">ಭಾರತವಲ್ಲದೇ ಯುರೋಪ್, ಉತ್ತರ ಆಫ್ರಿಕಾ, ಮಧ್ಯ ಪ್ರಾಚ್ಯ ಮತ್ತು ಏಷ್ಯಾದ ಇತರ ಭಾಗಗಳಲ್ಲಿ ಸಹ ಗ್ರಹಣ ಗೋಚರಿಸಲಿದೆ.</p>.<p class="bodytext">ಬೆಂಗಳೂರಿನಲ್ಲಿ ಸಂಜೆ 5.12ಕ್ಕೆ ಗ್ರಹಣ ಆರಂಭವಾಗಿ, 5.49ಕ್ಕೆ ಗರಿಷ್ಠ ಮಟ್ಟವನ್ನು ತಲುಪಲಿದೆ ಹಾಗೂ 5.55ರ ವೇಳೆಗೆ ಮುಕ್ತಾಯವಾಗಲಿದೆ.</p>.<p class="bodytext">ಗ್ರಹಣದ ವೇಳೆ ಸೂರ್ಯಕಿರಣಗಳು ಕಣ್ಣುಗಳಿಗೆ ಅಪಾಯಕಾರಿ ಆಗಿರುವ ಕಾರಣ ಗ್ರಹಣ ನೋಡಲು ಇಚ್ಛಿಸುವವರು ಅತ್ಯಂತ ಹೆಚ್ಚು ಮುಂಜಾಗ್ರತೆಗಳನ್ನು ತೆಗೆದುಕೊಳ್ಳಬೇಕು ಎಂದು ದುರೈ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಕೋಲ್ಕತ್ತ: </strong>ದೀಪಾವಳಿ ಅಮಾವಾಸ್ಯೆಯ ದಿನವಾದ ಇದೇ 25ರಂದು ಸಂಜೆ ವೇಳೆಗೆ ಭಾಗಶಃ ಸೂರ್ಯಗ್ರಹಣ ಸಂಭವಿಸಲಿದೆ. ದೇಶದ ಹಲವು ಭಾಗಗಳಲ್ಲಿ ಗ್ರಹಣ ಗೋಚರಿಸುತ್ತದೆ ಎಂದು ಖಗೋಳಶಾಸ್ತ್ರಜ್ಞ ದೇವಿ ಪ್ರಸಾದ್ ದುರೈ ತಿಳಿಸಿದ್ದಾರೆ.</p>.<p class="title">ದೇಶದ ಪಶ್ಚಿಮ ಮತ್ತು ಉತ್ತರ ಭಾಗಗಳಲ್ಲಿ ಸೂರ್ಯಗ್ರಹಣ ಉತ್ತಮ ರೀತಿಯಲ್ಲಿ ಗೋಚರಿಸುತ್ತದೆ. ಪೂರ್ವ ಭಾಗಗಳಲ್ಲಿ ಸೂರ್ಯಾಸ್ತದ ವೇಳೆಗ್ರಹಣ ಸಂಭವಿಸಲಿದೆ. ಈಶಾನ್ಯ ಭಾಗಗಳಲ್ಲಿ ಸೂರ್ಯಾಸ್ತದ ಬಳಿಕ ಗ್ರಹಣ ಸಂಭವಿಸುವ ಕಾರಣ ಈ ಭಾಗಗಳಲ್ಲಿ ಗ್ರಹಣ ಕಾಣಿಸದು ಎಂದು ಅವರು ಹೇಳಿದ್ದಾರೆ.</p>.<p class="title">ಗ್ರಹಣದ ಗರಿಷ್ಠ ಗೋಚರತೆ ವೇಳೆ, ಅಸ್ತಂಗತವಾಗುತ್ತಿರುವ ಸೂರ್ಯನ ಬಿಂಬದ ಶೇ 4ರಷ್ಟು ಭಾಗವನ್ನು ಚಂದ್ರಬಿಂಬವು ಮುಚ್ಚಲಿದೆ ಎಂದು ಅವರು ಹೇಳಿದ್ದಾರೆ.</p>.<p class="bodytext">ಭಾರತವಲ್ಲದೇ ಯುರೋಪ್, ಉತ್ತರ ಆಫ್ರಿಕಾ, ಮಧ್ಯ ಪ್ರಾಚ್ಯ ಮತ್ತು ಏಷ್ಯಾದ ಇತರ ಭಾಗಗಳಲ್ಲಿ ಸಹ ಗ್ರಹಣ ಗೋಚರಿಸಲಿದೆ.</p>.<p class="bodytext">ಬೆಂಗಳೂರಿನಲ್ಲಿ ಸಂಜೆ 5.12ಕ್ಕೆ ಗ್ರಹಣ ಆರಂಭವಾಗಿ, 5.49ಕ್ಕೆ ಗರಿಷ್ಠ ಮಟ್ಟವನ್ನು ತಲುಪಲಿದೆ ಹಾಗೂ 5.55ರ ವೇಳೆಗೆ ಮುಕ್ತಾಯವಾಗಲಿದೆ.</p>.<p class="bodytext">ಗ್ರಹಣದ ವೇಳೆ ಸೂರ್ಯಕಿರಣಗಳು ಕಣ್ಣುಗಳಿಗೆ ಅಪಾಯಕಾರಿ ಆಗಿರುವ ಕಾರಣ ಗ್ರಹಣ ನೋಡಲು ಇಚ್ಛಿಸುವವರು ಅತ್ಯಂತ ಹೆಚ್ಚು ಮುಂಜಾಗ್ರತೆಗಳನ್ನು ತೆಗೆದುಕೊಳ್ಳಬೇಕು ಎಂದು ದುರೈ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>