<p class="title"><strong>ಕೋಲ್ಕತ್ತ: </strong>‘ಹಳೆಯ ಪಕ್ಷ ಕಾಂಗ್ರೆಸ್ ಅನ್ನು ಹೊರತುಪಡಿಸಿ, ಪ್ರತಿಪಕ್ಷಗಳು ಒಗ್ಗಟ್ಟಿನಿಂದ ಇರಬಹುದು ಎಂದು ನಂಬಿರುವ ಬಿಜೆಪಿಯೇತರ ಪಕ್ಷಗಳದು ಮೂರ್ಖತನದ ಪರಮಾವಧಿ ಎಂದೇ ಭಾವಿಸಬೇಕಾಗುತ್ತದೆ’ ಎಂದು ಕಾಂಗ್ರೆಸ್ನ ಹಿರಿಯ ನಾಯಕ ಜೈರಾಂ ರಮೇಶ್ ಭಾನುವಾರ ಹೇಳಿದ್ದಾರೆ.</p>.<p class="title">ಯಾವುದೇ ಪಕ್ಷದ ಹೆಸರನ್ನು ಉಲ್ಲೇಖಿಸದ ಅವರು, ಹಲವು ಪ್ರಾದೇಶಿಕ ಪಕ್ಷಗಳು ತಮ್ಮ ಸ್ವಹಿತಾಸಕ್ತಿಗಾಗಿ ಹಳೆಯ ಪಕ್ಷ ಕಾಂಗ್ರೆಸ್ನ ಬೆನ್ನಿಗೆ ಚೂರಿ ಹಾಕಿದ್ದು, ಅಂಥ ಪಕ್ಷಗಳು ಕಾಂಗ್ರೆಸ್ ಅನ್ನು ತಮ್ಮ ಅಸ್ತ್ರವನ್ನಾಗಿ ಬಳಸಿಕೊಳ್ಳುವುದನ್ನು ನಿಲ್ಲಿಸಬೇಕು ಎಂದರು.</p>.<p class="title">ಕೋಲ್ಕತ್ತದಲ್ಲಿ ಪಕ್ಷದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಬಂದಿದ್ದ ಅವರು, ‘ಕಾಂಗ್ರೆಸ್ ಅನ್ನು ಆಧಾರವಾಗಿಸಿಕೊಳ್ಳದೇ ಪ್ರತಿಪಕ್ಷಗಳ ಒಗ್ಗಟ್ಟು ಅಸಾಧ್ಯ. ಕಾಂಗ್ರೆಸ್ ಹೊರತುಪಡಿಸಿ ಪ್ರತಿಪಕ್ಷಗಳ ಒಗ್ಗಟ್ಟನ್ನು ಪ್ರತಿಪಾದಿಸುವವರು, ವಿರೋಧ ಹಾಗೂ ಹಳೆಯಪಕ್ಷವಾಗಿರುವ ಕಾಂಗ್ರೆಸ್ ಅನ್ನು ದುರ್ಬಲಗೊಳಿಸಲು ಬಯಸುತ್ತಿದ್ದಾರೆ’ ಎಂದು ವಿಶ್ಲೇಷಿಸಿದರು.</p>.<p class="bodytext">‘ಬಿಜೆಪಿಯೇತರ ಒಕ್ಕೂಟವು ಯಾವುದೇ ಮೈತ್ರಿಕೂಟದಿಂದ ಐದು ವರ್ಷಗಳ ಕಾಲ ಸ್ಥಿರ ಸರ್ಕಾರವನ್ನು ನೀಡಬಹುದು ಎಂದು ನಂಬಿದರೆ, ಅವು ಮೂರ್ಖರ ಸ್ವರ್ಗದಲ್ಲಿವೆ ಎಂದರ್ಥ. ಕಾಂಗ್ರೆಸ್ ಅನ್ನು ಹೊರತುಪಡಿಸಿ ಯಾವುದೇ ವಿರೋಧಪಕ್ಷಗಳು ಒಗ್ಗಟ್ಟಿನಿಂದಿರಲು ಸಾಧ್ಯವಿಲ್ಲ’ ಎಂದರು.</p>.<p class="bodytext">ಆಮ್ ಆದ್ಮಿ ಪಕ್ಷವನ್ನು ಬಿಜೆಪಿಯ ‘ಬಿ–ಟೀಮ್’ ಎಂದು ಆರೋಪಿಸಿದ ಅವರು, ತೃಣಮೂಲ ಕಾಂಗ್ರೆಸ್ ಕೂಡಾ ಅರವಿಂದ ಕೇಜ್ರಿವಾಲ್ ನೇತೃತ್ವದ ಪಕ್ಷದಂತೆಯೇ ಕಾಂಗ್ರೆಸ್ ಪಕ್ಷಕ್ಕೆ ವಿರುದ್ಧವಾಗಿದೆ ಎಂದು ಅಭಿಪ್ರಾಯಪಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಕೋಲ್ಕತ್ತ: </strong>‘ಹಳೆಯ ಪಕ್ಷ ಕಾಂಗ್ರೆಸ್ ಅನ್ನು ಹೊರತುಪಡಿಸಿ, ಪ್ರತಿಪಕ್ಷಗಳು ಒಗ್ಗಟ್ಟಿನಿಂದ ಇರಬಹುದು ಎಂದು ನಂಬಿರುವ ಬಿಜೆಪಿಯೇತರ ಪಕ್ಷಗಳದು ಮೂರ್ಖತನದ ಪರಮಾವಧಿ ಎಂದೇ ಭಾವಿಸಬೇಕಾಗುತ್ತದೆ’ ಎಂದು ಕಾಂಗ್ರೆಸ್ನ ಹಿರಿಯ ನಾಯಕ ಜೈರಾಂ ರಮೇಶ್ ಭಾನುವಾರ ಹೇಳಿದ್ದಾರೆ.</p>.<p class="title">ಯಾವುದೇ ಪಕ್ಷದ ಹೆಸರನ್ನು ಉಲ್ಲೇಖಿಸದ ಅವರು, ಹಲವು ಪ್ರಾದೇಶಿಕ ಪಕ್ಷಗಳು ತಮ್ಮ ಸ್ವಹಿತಾಸಕ್ತಿಗಾಗಿ ಹಳೆಯ ಪಕ್ಷ ಕಾಂಗ್ರೆಸ್ನ ಬೆನ್ನಿಗೆ ಚೂರಿ ಹಾಕಿದ್ದು, ಅಂಥ ಪಕ್ಷಗಳು ಕಾಂಗ್ರೆಸ್ ಅನ್ನು ತಮ್ಮ ಅಸ್ತ್ರವನ್ನಾಗಿ ಬಳಸಿಕೊಳ್ಳುವುದನ್ನು ನಿಲ್ಲಿಸಬೇಕು ಎಂದರು.</p>.<p class="title">ಕೋಲ್ಕತ್ತದಲ್ಲಿ ಪಕ್ಷದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಬಂದಿದ್ದ ಅವರು, ‘ಕಾಂಗ್ರೆಸ್ ಅನ್ನು ಆಧಾರವಾಗಿಸಿಕೊಳ್ಳದೇ ಪ್ರತಿಪಕ್ಷಗಳ ಒಗ್ಗಟ್ಟು ಅಸಾಧ್ಯ. ಕಾಂಗ್ರೆಸ್ ಹೊರತುಪಡಿಸಿ ಪ್ರತಿಪಕ್ಷಗಳ ಒಗ್ಗಟ್ಟನ್ನು ಪ್ರತಿಪಾದಿಸುವವರು, ವಿರೋಧ ಹಾಗೂ ಹಳೆಯಪಕ್ಷವಾಗಿರುವ ಕಾಂಗ್ರೆಸ್ ಅನ್ನು ದುರ್ಬಲಗೊಳಿಸಲು ಬಯಸುತ್ತಿದ್ದಾರೆ’ ಎಂದು ವಿಶ್ಲೇಷಿಸಿದರು.</p>.<p class="bodytext">‘ಬಿಜೆಪಿಯೇತರ ಒಕ್ಕೂಟವು ಯಾವುದೇ ಮೈತ್ರಿಕೂಟದಿಂದ ಐದು ವರ್ಷಗಳ ಕಾಲ ಸ್ಥಿರ ಸರ್ಕಾರವನ್ನು ನೀಡಬಹುದು ಎಂದು ನಂಬಿದರೆ, ಅವು ಮೂರ್ಖರ ಸ್ವರ್ಗದಲ್ಲಿವೆ ಎಂದರ್ಥ. ಕಾಂಗ್ರೆಸ್ ಅನ್ನು ಹೊರತುಪಡಿಸಿ ಯಾವುದೇ ವಿರೋಧಪಕ್ಷಗಳು ಒಗ್ಗಟ್ಟಿನಿಂದಿರಲು ಸಾಧ್ಯವಿಲ್ಲ’ ಎಂದರು.</p>.<p class="bodytext">ಆಮ್ ಆದ್ಮಿ ಪಕ್ಷವನ್ನು ಬಿಜೆಪಿಯ ‘ಬಿ–ಟೀಮ್’ ಎಂದು ಆರೋಪಿಸಿದ ಅವರು, ತೃಣಮೂಲ ಕಾಂಗ್ರೆಸ್ ಕೂಡಾ ಅರವಿಂದ ಕೇಜ್ರಿವಾಲ್ ನೇತೃತ್ವದ ಪಕ್ಷದಂತೆಯೇ ಕಾಂಗ್ರೆಸ್ ಪಕ್ಷಕ್ಕೆ ವಿರುದ್ಧವಾಗಿದೆ ಎಂದು ಅಭಿಪ್ರಾಯಪಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>