ಈ ಹಿಂದೆ ನೀಡಿದ್ದ ನಿರ್ದೇಶನಗಳ ಅನುಷ್ಠಾನಕ್ಕೆ ಸಂಬಂಧಿಸಿ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಳ್ಳಲು ನ್ಯಾಯಾಲಯವು ಆರಂಭದಲ್ಲಿ ಮುಂದಾಗಿತ್ತು. ಆದರೆ, ಡಿಜಿಸಿಎ ಕೈಗೊಂಡ ಕ್ರಮಗಳನ್ನು ಗಮನಿಸಿ ಪ್ರಕರಣವನ್ನು ಕೊನೆಗೊಳಿಸಲು ನಿರ್ಧರಿಸಿತು ಎಂದು ನ್ಯಾಯಮೂರ್ತಿಗಳಾದ ನವೀನ್ ಚಾವ್ಲಾ ಹಾಗೂ ಸಿ. ಹರಿಶಂಕರ್ ಅವರಿದ್ದ ನ್ಯಾಯಪೀಠ ಹೇಳಿದೆ.