<p><strong>ಗುನಾ:</strong> ದೇಶದ ಪ್ರತಿಯೊಂದು ಲೋಕಸಭಾ ಕ್ಷೇತ್ರದಲ್ಲಿಯೂ ಪಾಸ್ಪೋರ್ಟ್ ಸೇವಾ ಕೇಂದ್ರ ತೆರೆಯಲಾಗುವುದು ಎಂದು ಟೆಲಿಕಾಂ ಸಚಿವ ಜ್ಯೋತಿರಾದಿತ್ಯ ಸಿಂದಿಯಾ ಹೇಳಿದ್ದಾರೆ.</p><p>ಸಂಸತ್ತಿನಲ್ಲಿ ತಾವು ಪ್ರತಿನಿಧಿಸುವ ಮಧ್ಯಪ್ರದೇಶದ ಗುನಾದಲ್ಲಿ ನೂತನ ಕೇಂದ್ರಕ್ಕೆ ಚಾಲನೆ ನೀಡಿದ ವೇಳೆ ಈ ಘೋಷಣೆ ಮಾಡಿದ್ದಾರೆ. ಇದೇ ವೇಳೆ ಅವರು, ರಾಜ್ಯದಲ್ಲಿ ಇನ್ನೂ ಆರು ಹೊಸ ಪಾಸ್ಪೋರ್ಟ್ ಕೇಂದ್ರಗಳು 2025ರಲ್ಲೇ ಆರಂಭವಾಗಲಿವೆ ಎಂದು ತಿಳಿಸಿದ್ದಾರೆ.</p><p>'ಸೇವೆಯನ್ನು ವಿಸ್ತರಿಸುವ ಉದ್ದೇಶದಿಂದ ಸಂಸತ್ತಿನ ಪ್ರತಿಯೊಂದು ಕ್ಷೇತ್ರದಲ್ಲೂ ಸೇವಾ ಕೇಂದ್ರ ತೆರೆಯಲು ಪ್ರಧಾನಿ ನರೇಂದ್ರ ಮೋದಿ ನಿರ್ಧರಿಸಿದ್ದಾರೆ. ವಿದೇಶಾಂಗ ಸಚಿವಾಲಯದ ಸಹಯೋಗದಲ್ಲಿ, ಅಂಚೆ ಇಲಾಖೆಯು ಈ ಕಾರ್ಯವನ್ನು ಸಾಕಾರಗೊಳಿಸಲು ಬದ್ಧವಾಗಿದೆ' ಎಂದಿದ್ದಾರೆ.</p><p>ಗುನಾದ ಜನರು ಪಾಸ್ಪೋರ್ಟ್ಗಳನ್ನು ಮಾಡಿಸಲು ಭೋಪಾಲ್ ಅಥವಾ ಗ್ವಾಲಿಯರ್ಗೆ ಹೋಗಬೇಕಾಗಿತ್ತು. ಆದರೆ, ಪಾಸ್ಪೋರ್ಟ್ ಸೇವಾ ಕೇಂದ್ರ ಆರಂಭವಾಗಿರುವುದರಿಂದ ಆ ಸಮಸ್ಯೆ ನಿವಾರಣೆಯಾದಂತಾಗಿದೆ ಎಂದು ತಿಳಿಸಿದ್ದಾರೆ.</p><p>ದೇಶದಾದ್ಯಂತ 6,000 ಅಂಚೆ ಕಚೇರಿಗಳನ್ನು ತೆರೆಯಲಾಗಿದೆ ಎಂದೂ ಇದೇ ವೇಳೆ ಮಾಹಿತಿ ನೀಡಿದ ಸಿಂಧಿಯಾ, 'ದೇಶದ ಜನರು ಕೈಯಿಂದಲೇ ಪ್ರತಗಳನ್ನು ಬರೆಯುವ ರೂಢಿಯನ್ನು ಮತ್ತೆ ಆರಂಭಸುವಂತೆ ಮಾಡಬೇಕಿದೆ. ಅಂತಹ ಅಭ್ಯಾಸದಿಂದ ಹೃದಯದ ನಿಜವಾದ ಭಾವನೆಗಳನ್ನು ವ್ಯಕ್ತಪಡಿಸಲು ಸಾಧ್ಯ' ಎಂದು ಅಭಿಪ್ರಾಯಪಟ್ಟಿದ್ದಾರೆ.</p>.ದೆಹಲಿ ಚುನಾವಣೆ | ಎಎಪಿಗೆ ಮತ್ತೊಂದು ಪಕ್ಷದ ಬೆಂಬಲ; ಕಾಂಗ್ರೆಸ್ಗೆ ಹಿನ್ನಡೆ.ಹಸೀನಾಗೆ ಎಲ್ಲಿಯವರೆಗೆ ಬೇಕಾದರೂ ಭಾರತದಲ್ಲಿರಲು ಅವಕಾಶ ನೀಡಬೇಕು:ಮಣಿಶಂಕರ್ ಅಯ್ಯರ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುನಾ:</strong> ದೇಶದ ಪ್ರತಿಯೊಂದು ಲೋಕಸಭಾ ಕ್ಷೇತ್ರದಲ್ಲಿಯೂ ಪಾಸ್ಪೋರ್ಟ್ ಸೇವಾ ಕೇಂದ್ರ ತೆರೆಯಲಾಗುವುದು ಎಂದು ಟೆಲಿಕಾಂ ಸಚಿವ ಜ್ಯೋತಿರಾದಿತ್ಯ ಸಿಂದಿಯಾ ಹೇಳಿದ್ದಾರೆ.</p><p>ಸಂಸತ್ತಿನಲ್ಲಿ ತಾವು ಪ್ರತಿನಿಧಿಸುವ ಮಧ್ಯಪ್ರದೇಶದ ಗುನಾದಲ್ಲಿ ನೂತನ ಕೇಂದ್ರಕ್ಕೆ ಚಾಲನೆ ನೀಡಿದ ವೇಳೆ ಈ ಘೋಷಣೆ ಮಾಡಿದ್ದಾರೆ. ಇದೇ ವೇಳೆ ಅವರು, ರಾಜ್ಯದಲ್ಲಿ ಇನ್ನೂ ಆರು ಹೊಸ ಪಾಸ್ಪೋರ್ಟ್ ಕೇಂದ್ರಗಳು 2025ರಲ್ಲೇ ಆರಂಭವಾಗಲಿವೆ ಎಂದು ತಿಳಿಸಿದ್ದಾರೆ.</p><p>'ಸೇವೆಯನ್ನು ವಿಸ್ತರಿಸುವ ಉದ್ದೇಶದಿಂದ ಸಂಸತ್ತಿನ ಪ್ರತಿಯೊಂದು ಕ್ಷೇತ್ರದಲ್ಲೂ ಸೇವಾ ಕೇಂದ್ರ ತೆರೆಯಲು ಪ್ರಧಾನಿ ನರೇಂದ್ರ ಮೋದಿ ನಿರ್ಧರಿಸಿದ್ದಾರೆ. ವಿದೇಶಾಂಗ ಸಚಿವಾಲಯದ ಸಹಯೋಗದಲ್ಲಿ, ಅಂಚೆ ಇಲಾಖೆಯು ಈ ಕಾರ್ಯವನ್ನು ಸಾಕಾರಗೊಳಿಸಲು ಬದ್ಧವಾಗಿದೆ' ಎಂದಿದ್ದಾರೆ.</p><p>ಗುನಾದ ಜನರು ಪಾಸ್ಪೋರ್ಟ್ಗಳನ್ನು ಮಾಡಿಸಲು ಭೋಪಾಲ್ ಅಥವಾ ಗ್ವಾಲಿಯರ್ಗೆ ಹೋಗಬೇಕಾಗಿತ್ತು. ಆದರೆ, ಪಾಸ್ಪೋರ್ಟ್ ಸೇವಾ ಕೇಂದ್ರ ಆರಂಭವಾಗಿರುವುದರಿಂದ ಆ ಸಮಸ್ಯೆ ನಿವಾರಣೆಯಾದಂತಾಗಿದೆ ಎಂದು ತಿಳಿಸಿದ್ದಾರೆ.</p><p>ದೇಶದಾದ್ಯಂತ 6,000 ಅಂಚೆ ಕಚೇರಿಗಳನ್ನು ತೆರೆಯಲಾಗಿದೆ ಎಂದೂ ಇದೇ ವೇಳೆ ಮಾಹಿತಿ ನೀಡಿದ ಸಿಂಧಿಯಾ, 'ದೇಶದ ಜನರು ಕೈಯಿಂದಲೇ ಪ್ರತಗಳನ್ನು ಬರೆಯುವ ರೂಢಿಯನ್ನು ಮತ್ತೆ ಆರಂಭಸುವಂತೆ ಮಾಡಬೇಕಿದೆ. ಅಂತಹ ಅಭ್ಯಾಸದಿಂದ ಹೃದಯದ ನಿಜವಾದ ಭಾವನೆಗಳನ್ನು ವ್ಯಕ್ತಪಡಿಸಲು ಸಾಧ್ಯ' ಎಂದು ಅಭಿಪ್ರಾಯಪಟ್ಟಿದ್ದಾರೆ.</p>.ದೆಹಲಿ ಚುನಾವಣೆ | ಎಎಪಿಗೆ ಮತ್ತೊಂದು ಪಕ್ಷದ ಬೆಂಬಲ; ಕಾಂಗ್ರೆಸ್ಗೆ ಹಿನ್ನಡೆ.ಹಸೀನಾಗೆ ಎಲ್ಲಿಯವರೆಗೆ ಬೇಕಾದರೂ ಭಾರತದಲ್ಲಿರಲು ಅವಕಾಶ ನೀಡಬೇಕು:ಮಣಿಶಂಕರ್ ಅಯ್ಯರ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>