<p><strong>ಬನ್ಸ್ವಾರ (ರಾಜಸ್ಥಾನ):</strong> ದಾರಿ ಮಧ್ಯೆ ಆ್ಯಂಬುಲೆನ್ಸ್ನ ಇಂಧನ ಖಾಲಿಯಾಗಿ ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೆ ರೋಗಿಯೊಬ್ಬರು ಮೃತಪಟ್ಟ ದಾರುಣ ಘಟನೆ ರಾಜಸ್ಥಾನದ ಬನ್ಸ್ವಾರದಲ್ಲಿ ನಡೆದಿದೆ.</p>.<p>ಘಟನೆ ಸಂಬಂಧ ತನಿಖೆಗೆ ಆದೇಶಿಸಿರುವುದಾಗಿ ಬನ್ಸ್ವಾರದ ಮುಖ್ಯ ವೈದ್ಯಾಧಿಕಾರಿ ಡಾ. ಬಿ.ಪಿ ವರ್ಮಾ ತಿಳಿಸಿದ್ದಾರೆ.</p>.<p>ಈ ಘಟನೆಗೆ ಕಾರಣವಾದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ರಾಜ್ಯದ ಆಹಾರ ಹಾಗೂ ನಾಗರಿಕ ಪೂರೈಕೆ ಸಚಿವ ಪ್ರತಾಪ್ ಖಚಾರಿಯವಾಸ್ ಹೇಳಿದ್ದಾರೆ.</p>.<p>ಇಂಧನ ಖಾಲಿಯಾದ ಬಳಿಕ ರೋಗಿಯ ಸಂಬಂಧಿಕರು ಆ್ಯಂಬುಲೆನ್ಸ್ ಅನ್ನು ತಳ್ಳುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ನಿರ್ಲಕ್ಷ್ಯಕ್ಕೆ ನೆಟ್ಟಿಗರಿಂದ ತೀವ್ರ ಟೀಕೆ ವ್ಯಕ್ತವಾಗಿದೆ.</p>.<p>‘ಘಟನೆ ಬಗ್ಗೆ ನಮಗೆ ಮಾಹಿತಿ ಸಿಕ್ಕಿದೆ. ತನಿಖೆಗೆ ಆದೇಶ ಮಾಡಿದ್ದೇವೆ. ಘಟನೆಯಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬದವರನ್ನು ಭೇಟಿ ಮಾಡಿ, ಏನಾದರೂ ನಿರ್ಲಕ್ಷ್ಯ ಉಂಟಾಗಿದೆಯೇ ಎಂದು ತಿಳುದುಕೊಳ್ಳುತ್ತೇವೆ‘ ಎಂದು ವೈದ್ಯಾಧಿಕಾರಿ ಹೇಳಿದ್ದಾರೆ.</p>.<p>ಖಾಸಗಿ ಮಾಲೀಕತ್ವದ ಆ್ಯಂಬುಲೆನ್ಸ್ ಇದಾಗಿದ್ದು, ಇದಕ್ಕೂ ರಾಜ್ಯದ ಆರೋಗ್ಯ ವ್ಯವಸ್ಥೆಗೂ ಏನೂ ಸಂಬಂಧ ಇಲ್ಲ ಎಂದು ಅವರು ಹೇಳಿದ್ದಾರೆ.</p>.<p>ನಮ್ಮ ಸರ್ಕಾರ ಖಾಸಗಿ ಆಸ್ಪತ್ರೆಯಲ್ಲೂ ಉಚಿತ ಚಿಕಿತ್ಸೆ ಒದಗಿಸುತ್ತಿದೆ. ಖಾಸಗಿ ಮಾಲೀಕತ್ವದ ಆ್ಯಂಬುಲೆನ್ಸ್ನ ಇಂಧನ ಖಾಲಿಯಾಗಿ, ರೋಗಿ ಸಾವಿಗೀಡಾಗಿದ್ದಾರೆ. ಇದಕ್ಕೂ ರಾಜ್ಯದ ಆರೋಗ್ಯ ವ್ಯವಸ್ಥೆಗೂ ಸಂಬಂಧ ಇಲ್ಲ. ಘಟನೆಗೆ ಕಾರಣವಾದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ‘ ಎಂದು ಸಚಿವ ಪ್ರತಾಪ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬನ್ಸ್ವಾರ (ರಾಜಸ್ಥಾನ):</strong> ದಾರಿ ಮಧ್ಯೆ ಆ್ಯಂಬುಲೆನ್ಸ್ನ ಇಂಧನ ಖಾಲಿಯಾಗಿ ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೆ ರೋಗಿಯೊಬ್ಬರು ಮೃತಪಟ್ಟ ದಾರುಣ ಘಟನೆ ರಾಜಸ್ಥಾನದ ಬನ್ಸ್ವಾರದಲ್ಲಿ ನಡೆದಿದೆ.</p>.<p>ಘಟನೆ ಸಂಬಂಧ ತನಿಖೆಗೆ ಆದೇಶಿಸಿರುವುದಾಗಿ ಬನ್ಸ್ವಾರದ ಮುಖ್ಯ ವೈದ್ಯಾಧಿಕಾರಿ ಡಾ. ಬಿ.ಪಿ ವರ್ಮಾ ತಿಳಿಸಿದ್ದಾರೆ.</p>.<p>ಈ ಘಟನೆಗೆ ಕಾರಣವಾದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ರಾಜ್ಯದ ಆಹಾರ ಹಾಗೂ ನಾಗರಿಕ ಪೂರೈಕೆ ಸಚಿವ ಪ್ರತಾಪ್ ಖಚಾರಿಯವಾಸ್ ಹೇಳಿದ್ದಾರೆ.</p>.<p>ಇಂಧನ ಖಾಲಿಯಾದ ಬಳಿಕ ರೋಗಿಯ ಸಂಬಂಧಿಕರು ಆ್ಯಂಬುಲೆನ್ಸ್ ಅನ್ನು ತಳ್ಳುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ನಿರ್ಲಕ್ಷ್ಯಕ್ಕೆ ನೆಟ್ಟಿಗರಿಂದ ತೀವ್ರ ಟೀಕೆ ವ್ಯಕ್ತವಾಗಿದೆ.</p>.<p>‘ಘಟನೆ ಬಗ್ಗೆ ನಮಗೆ ಮಾಹಿತಿ ಸಿಕ್ಕಿದೆ. ತನಿಖೆಗೆ ಆದೇಶ ಮಾಡಿದ್ದೇವೆ. ಘಟನೆಯಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬದವರನ್ನು ಭೇಟಿ ಮಾಡಿ, ಏನಾದರೂ ನಿರ್ಲಕ್ಷ್ಯ ಉಂಟಾಗಿದೆಯೇ ಎಂದು ತಿಳುದುಕೊಳ್ಳುತ್ತೇವೆ‘ ಎಂದು ವೈದ್ಯಾಧಿಕಾರಿ ಹೇಳಿದ್ದಾರೆ.</p>.<p>ಖಾಸಗಿ ಮಾಲೀಕತ್ವದ ಆ್ಯಂಬುಲೆನ್ಸ್ ಇದಾಗಿದ್ದು, ಇದಕ್ಕೂ ರಾಜ್ಯದ ಆರೋಗ್ಯ ವ್ಯವಸ್ಥೆಗೂ ಏನೂ ಸಂಬಂಧ ಇಲ್ಲ ಎಂದು ಅವರು ಹೇಳಿದ್ದಾರೆ.</p>.<p>ನಮ್ಮ ಸರ್ಕಾರ ಖಾಸಗಿ ಆಸ್ಪತ್ರೆಯಲ್ಲೂ ಉಚಿತ ಚಿಕಿತ್ಸೆ ಒದಗಿಸುತ್ತಿದೆ. ಖಾಸಗಿ ಮಾಲೀಕತ್ವದ ಆ್ಯಂಬುಲೆನ್ಸ್ನ ಇಂಧನ ಖಾಲಿಯಾಗಿ, ರೋಗಿ ಸಾವಿಗೀಡಾಗಿದ್ದಾರೆ. ಇದಕ್ಕೂ ರಾಜ್ಯದ ಆರೋಗ್ಯ ವ್ಯವಸ್ಥೆಗೂ ಸಂಬಂಧ ಇಲ್ಲ. ಘಟನೆಗೆ ಕಾರಣವಾದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ‘ ಎಂದು ಸಚಿವ ಪ್ರತಾಪ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>