<p><strong>ನವದೆಹಲಿ</strong>: ಇಲ್ಲಿನ ಜಿಬಿಟಿ ಆಸ್ಪತ್ರೆಯಲ್ಲಿ ರೋಗಿಯೊಬ್ಬರನ್ನು ಗುಂಡಿಟ್ಟು ಹತ್ಯೆಗೈದ ಘಟನೆಯ ಕುರಿತ ತನಿಖೆ ಚುರುಕುಗೊಂಡಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. </p>.<p>ರೋಗಿಯನ್ನು ಅಪರಾಧಿ ಎಂದು ತಪ್ಪಾಗಿ ತಿಳಿದು, ಅವರ ಮೇಲೆ ಗುಂಡಿನ ದಾಳಿ ನಡೆಸಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಮತ್ತೊಂದೆಡೆ ದಾಳಿಕೋರರ ಗುರಿಯು ಅಪರಾಧಿ ಆಗಿದ್ದ ಎಂದು ಮೃತಪಟ್ಟಿರುವ ರೋಗಿಯ ಕುಟುಂಬಸ್ಥರು ಹೇಳಿದ್ದಾರೆ. </p>.<p>ಪ್ರಕರಣ ನಡೆದ ಆಸ್ಪತ್ರೆಯಲ್ಲಿ ಸೂಕ್ತ ಭದ್ರತೆ ಒದಗಿಸಬೇಕು ಎಂದು ದೆಹಲಿ ಸರ್ಕಾರವನ್ನು ಆಗ್ರಹಿಸಿ, ಅಲ್ಲಿನ ವೈದ್ಯರು ಪ್ರತಿಭಟನೆ ನಡೆಸಿದರು. </p>.<p>‘ಜಿಬಿಟಿ ಆಸ್ಪತ್ರೆಯ ವಾರ್ಡ್ ಸಂಖ್ಯೆ 24ರಲ್ಲಿ 18 ವರ್ಷದ ಯುವಕನೊಬ್ಬ, ರೋಗಿ ರಿಯಾಜುದ್ದಿನ್ (32) ಅವರನ್ನು ಗುಂಡಿಟ್ಟು ಹತ್ಯೆ ಮಾಡಿದ ಘಟನೆಯ ತನಿಖೆಗೆ ಪೊಲೀಸ್ ತಂಡಗಳನ್ನು ರಚಿಸಲಾಗಿದೆ. ಈ ಕೃತ್ಯದ ಹಿಂದೆ ಎಷ್ಟು ಮಂದಿ ಭಾಗಿಯಾಗಿದ್ದಾರೆ, ಎಷ್ಟು ಮಂದಿ ಆಸ್ಪತ್ರೆ ಆವರಣ ಪ್ರವೇಶಿಸಿದ್ದಾರೆ, ಯಾವೆಲ್ಲಾ ವಾಹನಗಳನ್ನು ಬಳಸಲಾಗಿದೆ, ಘಟನೆ ಬಳಿಕ ಕೃತ್ಯವೆಸಗಿದವರು ಪರಾರಿಯಾಗಿದ್ದಾರೆ ಎಂಬುದು ಸೇರಿದಂತೆ ವಿವಿಧ ಆಯಾಮಗಳಲ್ಲಿ ತನಿಖೆ ಕೈಗೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಸಿ.ಸಿ.ಟಿ.ವಿ. ಕ್ಯಾಮೆರಾದ ದೃಶ್ಯಾವಳಿಗಳನ್ನು ತನಿಖಾ ತಂಡಗಳು ಪರಿಶೀಲನೆ ನಡೆಸುತ್ತಿವೆ’ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ. </p>.<p>ಆರೋಪಿಯನ್ನು ಶೀಘ್ರವೇ ಬಂಧಿಸಲಾಗುವುದು ಎಂದು ಅಧಿಕಾರಿಯೊಬ್ಬರು ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಇಲ್ಲಿನ ಜಿಬಿಟಿ ಆಸ್ಪತ್ರೆಯಲ್ಲಿ ರೋಗಿಯೊಬ್ಬರನ್ನು ಗುಂಡಿಟ್ಟು ಹತ್ಯೆಗೈದ ಘಟನೆಯ ಕುರಿತ ತನಿಖೆ ಚುರುಕುಗೊಂಡಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. </p>.<p>ರೋಗಿಯನ್ನು ಅಪರಾಧಿ ಎಂದು ತಪ್ಪಾಗಿ ತಿಳಿದು, ಅವರ ಮೇಲೆ ಗುಂಡಿನ ದಾಳಿ ನಡೆಸಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಮತ್ತೊಂದೆಡೆ ದಾಳಿಕೋರರ ಗುರಿಯು ಅಪರಾಧಿ ಆಗಿದ್ದ ಎಂದು ಮೃತಪಟ್ಟಿರುವ ರೋಗಿಯ ಕುಟುಂಬಸ್ಥರು ಹೇಳಿದ್ದಾರೆ. </p>.<p>ಪ್ರಕರಣ ನಡೆದ ಆಸ್ಪತ್ರೆಯಲ್ಲಿ ಸೂಕ್ತ ಭದ್ರತೆ ಒದಗಿಸಬೇಕು ಎಂದು ದೆಹಲಿ ಸರ್ಕಾರವನ್ನು ಆಗ್ರಹಿಸಿ, ಅಲ್ಲಿನ ವೈದ್ಯರು ಪ್ರತಿಭಟನೆ ನಡೆಸಿದರು. </p>.<p>‘ಜಿಬಿಟಿ ಆಸ್ಪತ್ರೆಯ ವಾರ್ಡ್ ಸಂಖ್ಯೆ 24ರಲ್ಲಿ 18 ವರ್ಷದ ಯುವಕನೊಬ್ಬ, ರೋಗಿ ರಿಯಾಜುದ್ದಿನ್ (32) ಅವರನ್ನು ಗುಂಡಿಟ್ಟು ಹತ್ಯೆ ಮಾಡಿದ ಘಟನೆಯ ತನಿಖೆಗೆ ಪೊಲೀಸ್ ತಂಡಗಳನ್ನು ರಚಿಸಲಾಗಿದೆ. ಈ ಕೃತ್ಯದ ಹಿಂದೆ ಎಷ್ಟು ಮಂದಿ ಭಾಗಿಯಾಗಿದ್ದಾರೆ, ಎಷ್ಟು ಮಂದಿ ಆಸ್ಪತ್ರೆ ಆವರಣ ಪ್ರವೇಶಿಸಿದ್ದಾರೆ, ಯಾವೆಲ್ಲಾ ವಾಹನಗಳನ್ನು ಬಳಸಲಾಗಿದೆ, ಘಟನೆ ಬಳಿಕ ಕೃತ್ಯವೆಸಗಿದವರು ಪರಾರಿಯಾಗಿದ್ದಾರೆ ಎಂಬುದು ಸೇರಿದಂತೆ ವಿವಿಧ ಆಯಾಮಗಳಲ್ಲಿ ತನಿಖೆ ಕೈಗೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಸಿ.ಸಿ.ಟಿ.ವಿ. ಕ್ಯಾಮೆರಾದ ದೃಶ್ಯಾವಳಿಗಳನ್ನು ತನಿಖಾ ತಂಡಗಳು ಪರಿಶೀಲನೆ ನಡೆಸುತ್ತಿವೆ’ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ. </p>.<p>ಆರೋಪಿಯನ್ನು ಶೀಘ್ರವೇ ಬಂಧಿಸಲಾಗುವುದು ಎಂದು ಅಧಿಕಾರಿಯೊಬ್ಬರು ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>