<p><strong>ಪಾಟ್ನಾ</strong>: ಮಾಜಿ ಮುಖ್ಯಮಂತ್ರಿಗಳಿಗೆ ಜೀವಮಾನವಿಡಿ ಸರ್ಕಾರಿ ವಸತಿ ಸೌಲಭ್ಯ ಒದಗಿಸುವ ನಿಯಮ ಕೈಬಿಡುವಂತೆ ಪಾಟ್ನಾ ಹೈಕೋರ್ಟ್ ಮಂಗಳವಾರ ಬಿಹಾರ ಸರ್ಕಾರಕ್ಕೆ ಆದೇಶ ನೀಡಿದೆ.</p>.<p>ಮಾಜಿ ಮುಖ್ಯಮಂತ್ರಿಗಳಿಗೆ ಈ ರೀತಿ ಸೌಲಭ್ಯ ಒದಗಿಸುವುದು ‘ಅಸಂವಿಧಾನಿಕ‘ ಮತ್ತು ಸಾರ್ವಜನಿಕರ ಹಣ ‘ದುರ್ಬಳಕೆ‘ ಮಾಡಿದಂತೆ ಎಂದು ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.</p>.<p>ಮುಖ್ಯ ನ್ಯಾಯಮೂರ್ತಿ ಎ.ಪಿ.ಸಾಹಿ ಮತ್ತು ನ್ಯಾಯಮೂರ್ತಿ ಅಂಜನ ಮಿಶ್ರಾ ಅವರಿದ್ದ ಪೀಠವು, ಮುಖ್ಯಮಂತ್ರಿಯಾಗಿದ್ದವರ ಅಧಿಕಾರಾವಧಿ ಒಮ್ಮೆ ಮುಗಿದು, ಅವರು ಕಚೇರಿ ತೊರೆದ ಮೇಲೂ ಅವರಿಗೆ ಸರ್ಕಾರಿ ಬಂಗಲೆ ಸೇರಿದಂತೆ ಹಾಲಿ ಮುಖ್ಯಮಂತ್ರಿಗೆ ನೀಡುವ ಸೌಲಭ್ಯಗಳನ್ನು ಮುಂದುವರಿಸುವುದು ಸಂಪೂರ್ಣ ತಪ್ಪು ಎಂದು ಹೇಳಿದೆ.</p>.<p>ಹೈಕೋರ್ಟ್ನ ಈ ತೀರ್ಪು, ಮಾಜಿ ಮುಖ್ಯಮಂತ್ರಿಗಳಾದ ಲಾಲು ಪ್ರಸಾದ್ ಮತ್ತು ಅವರ ಪತ್ನಿ ರಾಬ್ಡಿ ದೇವಿ, ಜಗನ್ನಾಥ್ ಮಿಶ್ರಾ, ಸತೀಶ್ ಪ್ರಸಾದ್ ಸಿಂಗ್ ಮತ್ತು ಜಿತನ್ ರಾಮ್ ಮಾಂಝಿ ಅವರ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು.</p>.<p>ಮಾಜಿ ಮುಖ್ಯಮಂತ್ರಿಗಳಿಗೆ ಅವರ ಜೀವಿತಾವಧಿವರೆಗೂ ಸರ್ಕಾರಿ ಬಂಗಲೆ ಒದಗಿಸಲು ಬಿಹಾರ ರಾಜ್ಯ ಸರ್ಕಾರ ಜಾರಿಗೆ ತಂದಿರುವ ನಿಯಮಾವಳಿಗಳನ್ನು ಸ್ವಯಂ ಪ್ರೇರಿತವಾಗಿ ಪರಿಗಣನೆಗೆ ತೆಗೆದುಕೊಂಡು ಹೈಕೋರ್ಟ್ ವಿಭಾಗೀಯ ಪೀಠ ಈ ತೀರ್ಪು ನೀಡಿದೆ.</p>.<p>ಬಿಹಾರ ವಿಧಾನಸಭೆ ವಿರೋಧ ಪಕ್ಷದ ನಾಯಕ ತೇಜಸ್ವಿ ಪ್ರಸಾದ್ ಯಾದವ್ ಅವರು ಸಲ್ಲಿಸಿದ್ದ ಮನವಿಯಂತೆ ವಿಭಾಗೀಯ ಪೀಠವು, ಸರ್ಕಾರದ ನಿಯಮಾವಳಿಗಳನ್ನು ಸ್ವಯಂಪ್ರೇರಿತವಾಗಿ ಪರಿಗಣನೆಗೆ ತೆಗೆದುಕೊಂಡು, ಈ ಆದೇಶ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಾಟ್ನಾ</strong>: ಮಾಜಿ ಮುಖ್ಯಮಂತ್ರಿಗಳಿಗೆ ಜೀವಮಾನವಿಡಿ ಸರ್ಕಾರಿ ವಸತಿ ಸೌಲಭ್ಯ ಒದಗಿಸುವ ನಿಯಮ ಕೈಬಿಡುವಂತೆ ಪಾಟ್ನಾ ಹೈಕೋರ್ಟ್ ಮಂಗಳವಾರ ಬಿಹಾರ ಸರ್ಕಾರಕ್ಕೆ ಆದೇಶ ನೀಡಿದೆ.</p>.<p>ಮಾಜಿ ಮುಖ್ಯಮಂತ್ರಿಗಳಿಗೆ ಈ ರೀತಿ ಸೌಲಭ್ಯ ಒದಗಿಸುವುದು ‘ಅಸಂವಿಧಾನಿಕ‘ ಮತ್ತು ಸಾರ್ವಜನಿಕರ ಹಣ ‘ದುರ್ಬಳಕೆ‘ ಮಾಡಿದಂತೆ ಎಂದು ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.</p>.<p>ಮುಖ್ಯ ನ್ಯಾಯಮೂರ್ತಿ ಎ.ಪಿ.ಸಾಹಿ ಮತ್ತು ನ್ಯಾಯಮೂರ್ತಿ ಅಂಜನ ಮಿಶ್ರಾ ಅವರಿದ್ದ ಪೀಠವು, ಮುಖ್ಯಮಂತ್ರಿಯಾಗಿದ್ದವರ ಅಧಿಕಾರಾವಧಿ ಒಮ್ಮೆ ಮುಗಿದು, ಅವರು ಕಚೇರಿ ತೊರೆದ ಮೇಲೂ ಅವರಿಗೆ ಸರ್ಕಾರಿ ಬಂಗಲೆ ಸೇರಿದಂತೆ ಹಾಲಿ ಮುಖ್ಯಮಂತ್ರಿಗೆ ನೀಡುವ ಸೌಲಭ್ಯಗಳನ್ನು ಮುಂದುವರಿಸುವುದು ಸಂಪೂರ್ಣ ತಪ್ಪು ಎಂದು ಹೇಳಿದೆ.</p>.<p>ಹೈಕೋರ್ಟ್ನ ಈ ತೀರ್ಪು, ಮಾಜಿ ಮುಖ್ಯಮಂತ್ರಿಗಳಾದ ಲಾಲು ಪ್ರಸಾದ್ ಮತ್ತು ಅವರ ಪತ್ನಿ ರಾಬ್ಡಿ ದೇವಿ, ಜಗನ್ನಾಥ್ ಮಿಶ್ರಾ, ಸತೀಶ್ ಪ್ರಸಾದ್ ಸಿಂಗ್ ಮತ್ತು ಜಿತನ್ ರಾಮ್ ಮಾಂಝಿ ಅವರ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು.</p>.<p>ಮಾಜಿ ಮುಖ್ಯಮಂತ್ರಿಗಳಿಗೆ ಅವರ ಜೀವಿತಾವಧಿವರೆಗೂ ಸರ್ಕಾರಿ ಬಂಗಲೆ ಒದಗಿಸಲು ಬಿಹಾರ ರಾಜ್ಯ ಸರ್ಕಾರ ಜಾರಿಗೆ ತಂದಿರುವ ನಿಯಮಾವಳಿಗಳನ್ನು ಸ್ವಯಂ ಪ್ರೇರಿತವಾಗಿ ಪರಿಗಣನೆಗೆ ತೆಗೆದುಕೊಂಡು ಹೈಕೋರ್ಟ್ ವಿಭಾಗೀಯ ಪೀಠ ಈ ತೀರ್ಪು ನೀಡಿದೆ.</p>.<p>ಬಿಹಾರ ವಿಧಾನಸಭೆ ವಿರೋಧ ಪಕ್ಷದ ನಾಯಕ ತೇಜಸ್ವಿ ಪ್ರಸಾದ್ ಯಾದವ್ ಅವರು ಸಲ್ಲಿಸಿದ್ದ ಮನವಿಯಂತೆ ವಿಭಾಗೀಯ ಪೀಠವು, ಸರ್ಕಾರದ ನಿಯಮಾವಳಿಗಳನ್ನು ಸ್ವಯಂಪ್ರೇರಿತವಾಗಿ ಪರಿಗಣನೆಗೆ ತೆಗೆದುಕೊಂಡು, ಈ ಆದೇಶ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>